<p><strong>ರಾಯಗಡ:</strong> ಛತ್ತೀಸಗಡದ ರಾಯಗಡ ಜಿಲ್ಲೆಯ ಖಾಸಗಿ ವಿದ್ಯುತ್ ಸ್ಥಾವರದಲ್ಲಿ ಭಾನುವಾರ ಹಾರುಬೂದಿಯನ್ನು ಸಾಗಿಸುತ್ತಿದ್ದ ಕಬ್ಬಿಣದ ಟ್ಯಾಂಕ್ ಆಕಸ್ಮಿಕವಾಗಿ ಬಿದ್ದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾಜ್ಯದ ರಾಜಧಾನಿ ರಾಯಪುರದಿಂದ 240 ಕಿ.ಮೀ. ದೂರದ ಟೆಮ್ಟೆಮಾ ಪ್ರದೇಶದಲ್ಲಿರುವ ಸ್ಕೈ ಅಲಾಯ್ಸ್ ಮತ್ತು ಪವರ್ ಪ್ರೈವೇಟ್ ಲಿಮಿಟೆಡ್ನ ಸ್ಥಾವರದಲ್ಲಿ ಅವಘಡ ಸಂಭವಿಸಿದೆ ಎಂದು ಖರ್ಷಿಯಾ ಸ್ಟೇಷನ್ ಹೌಸ್ ಅಧಿಕಾರಿ ಎಸ್.ಆರ್.ಸಾಹು ತಿಳಿಸಿದ್ದಾರೆ.</p>.<p>'ಮಧ್ಯಾಹ್ನ 12ರ ಸುಮಾರಿಗೆ ಕಬ್ಬಿಣದ ಟ್ಯಾಂಕ್ ಆಕಸ್ಮಿಕವಾಗಿ ವಿದ್ಯುತ್ ತಯಾರಿಕಾ ಘಟಕದೊಳಗೆ ಮಧ್ಯಾಹ್ನ 12ರ ಸುಮಾರಿಗೆ ಕಬ್ಬಿಣದ ಟ್ಯಾಂಕ್ ಆಕಸ್ಮಿಕವಾಗಿ ಕಾರ್ಮಿಕರ ಮೇಲೆ ಬಿದ್ದಿದೆ. ಅವರು ವೆಲ್ಡಿಂಗ್ ಮತ್ತು ಗ್ಯಾಸ್ ಕಟಿಂಗ್ ಸಂಬಂಧಿತ ಕೆಲಸಗಳಲ್ಲಿ ತೊಡಗಿದ್ದರು, ಈ ವೇಳೆ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಸಂತ್ರಸ್ತರನ್ನು ಬಿಹಾರದ ನಿವಾಸಿಗಳಾದ ಮುನಿಲಾಲ್ ರಾಮ್ (40), ಬಸಂತ್ ಯಾದವ್ (30) ಮತ್ತು ರಾಯಗಡ ಜಿಲ್ಲೆಗೆ ಸೇರಿದ ಯಾದ್ರಾಮ್ ಸಾರ್ತಿ (25) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಒಬ್ಬರು ಬಿಹಾರದವರಾಗಿದ್ದರೆ, ಮತ್ತೋರ್ವ ಜಂಜಗೀರ್-ಚಂಪಾ ಜಿಲ್ಲೆಯವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರುವ ಪೊಲೀಸರು ಘಟನೆಗೆ ಕಾರಣವನ್ನು ಪತ್ತೆ ಹಚ್ಚಲು ತನಿಖೆ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಗಡ:</strong> ಛತ್ತೀಸಗಡದ ರಾಯಗಡ ಜಿಲ್ಲೆಯ ಖಾಸಗಿ ವಿದ್ಯುತ್ ಸ್ಥಾವರದಲ್ಲಿ ಭಾನುವಾರ ಹಾರುಬೂದಿಯನ್ನು ಸಾಗಿಸುತ್ತಿದ್ದ ಕಬ್ಬಿಣದ ಟ್ಯಾಂಕ್ ಆಕಸ್ಮಿಕವಾಗಿ ಬಿದ್ದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾಜ್ಯದ ರಾಜಧಾನಿ ರಾಯಪುರದಿಂದ 240 ಕಿ.ಮೀ. ದೂರದ ಟೆಮ್ಟೆಮಾ ಪ್ರದೇಶದಲ್ಲಿರುವ ಸ್ಕೈ ಅಲಾಯ್ಸ್ ಮತ್ತು ಪವರ್ ಪ್ರೈವೇಟ್ ಲಿಮಿಟೆಡ್ನ ಸ್ಥಾವರದಲ್ಲಿ ಅವಘಡ ಸಂಭವಿಸಿದೆ ಎಂದು ಖರ್ಷಿಯಾ ಸ್ಟೇಷನ್ ಹೌಸ್ ಅಧಿಕಾರಿ ಎಸ್.ಆರ್.ಸಾಹು ತಿಳಿಸಿದ್ದಾರೆ.</p>.<p>'ಮಧ್ಯಾಹ್ನ 12ರ ಸುಮಾರಿಗೆ ಕಬ್ಬಿಣದ ಟ್ಯಾಂಕ್ ಆಕಸ್ಮಿಕವಾಗಿ ವಿದ್ಯುತ್ ತಯಾರಿಕಾ ಘಟಕದೊಳಗೆ ಮಧ್ಯಾಹ್ನ 12ರ ಸುಮಾರಿಗೆ ಕಬ್ಬಿಣದ ಟ್ಯಾಂಕ್ ಆಕಸ್ಮಿಕವಾಗಿ ಕಾರ್ಮಿಕರ ಮೇಲೆ ಬಿದ್ದಿದೆ. ಅವರು ವೆಲ್ಡಿಂಗ್ ಮತ್ತು ಗ್ಯಾಸ್ ಕಟಿಂಗ್ ಸಂಬಂಧಿತ ಕೆಲಸಗಳಲ್ಲಿ ತೊಡಗಿದ್ದರು, ಈ ವೇಳೆ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಸಂತ್ರಸ್ತರನ್ನು ಬಿಹಾರದ ನಿವಾಸಿಗಳಾದ ಮುನಿಲಾಲ್ ರಾಮ್ (40), ಬಸಂತ್ ಯಾದವ್ (30) ಮತ್ತು ರಾಯಗಡ ಜಿಲ್ಲೆಗೆ ಸೇರಿದ ಯಾದ್ರಾಮ್ ಸಾರ್ತಿ (25) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಒಬ್ಬರು ಬಿಹಾರದವರಾಗಿದ್ದರೆ, ಮತ್ತೋರ್ವ ಜಂಜಗೀರ್-ಚಂಪಾ ಜಿಲ್ಲೆಯವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರುವ ಪೊಲೀಸರು ಘಟನೆಗೆ ಕಾರಣವನ್ನು ಪತ್ತೆ ಹಚ್ಚಲು ತನಿಖೆ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>