ರಾಯಪುರ: ಛತ್ತೀಸಗಢದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು(ಭಾನುವಾರ) ನಡೆಯಲಿದೆ.
ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಸೇರಿದ ಹಾಗೂ ಗಿರಿಜನ ಮತ್ತು ಬುಡಕಟ್ಟು ಸಮುದಾಯದ ನಾಯಕರ ನಡುವೆ ಸಿ.ಎಂ ಹುದ್ದೆಗೆ ತೀವ್ರ ಪೈಪೋಟಿ ಇದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.
ಕೇಂದ್ರದ ಮೂವರು ವೀಕ್ಷಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯ ಬಳಿಕ ಹೊಸ ಮುಖ್ಯಮಂತ್ರಿಯ ಹೆಸರು ಘೋಷಣೆಯಾಗುವ ನಿರೀಕ್ಷೆಯಿದೆ.
ಮೂವರು ವೀಕ್ಷಕರಾದ ಅರ್ಜುನ್ ಮುಂಡಾ, ಸರ್ವಾನಂದ ಸೋನೊವಾಲ್ ಹಾಗೂ ದುಶ್ಯಂತ್ ಕುಮಾರ್ ಗೌತಮ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅರುಣ್ ಸಾವ್ ಶನಿವಾರ ಹೇಳಿದರು.