<p><strong>ರಾಯ್ಪುರ:</strong> ಛತ್ತೀಸ್ಗಢದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಸಚಿವ ಸಂಪುಟವನ್ನು ವಿಸ್ತರಿಸಿದ್ದು, ಮೊದಲ ಬಾರಿ ಆಯ್ಕೆಯಾಗಿರುವ ಮೂವರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. </p><p>ಇದರೊಂದಿಗೆ ರಾಜ್ಯದ ಇತಿಹಾಸದಲ್ಲೇ ಅತ್ಯಧಿಕವೆಂಬಂತೆ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರ ನೇತೃತ್ವದ ಸಚಿವ ಸಂಪುಟದ ಬಲ 14ಕ್ಕೆ ಏರಿಕೆಯಾಗಿದೆ. </p><p>ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಾಮೆನ್ ಡೆಕಾ ಪ್ರಮಾಣವಚನ ಬೋಧಿಸಿದರು. </p><p>ಬಿಜೆಪಿ ಶಾಸಕರಾದ ರಾಜೇಶ್ ಅಗರವಾಲ್, ಗುರು ಖುಷ್ವಂತ್ ಸಾಹೇಬ್ ಮತ್ತು ಗಜೇಂದ್ರ ಯಾದವ್ ಪ್ರಮಾಣವಚನ ಸ್ವೀಕರಿಸಿದರು. ನೂತನ ಸಚಿವರಿಗೆ ಖಾತೆ ಹಂಚಿಕೆ ಇನ್ನಷ್ಟೇ ಆಗಬೇಕಿದೆ. </p><p>2000ನೇ ಇಸವಿಯಲ್ಲಿ ರಾಜ್ಯ ರಚನೆಯಾದ ಬಳಿಕ 90 ಸದಸ್ಯರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ 13 ಸಚಿವರು ಸಂಪುಟದ ಭಾಗವಾಗಿದ್ದರು. </p><p>2023ರಲ್ಲಿ ನಡೆದ ಚುನಾವಣೆಯಲ್ಲಿ 54 ಸ್ಥಾನಗಳಲ್ಲಿ ಗೆದ್ದು ಬಿಜೆಪಿ ಅಧಿಕಾರ ಹಿಡಿದಿತ್ತು. ಕಾಂಗ್ರೆಸ್ಗೆ 35 ಸ್ಥಾನಗಳು ಲಭಿಸಿತ್ತು. </p>.Mumbai Rains: ಹಳಿಗಳ ಮಧ್ಯೆ ಸಿಲುಕಿಕೊಂಡ ಮೋನೋ ರೈಲು; 782 ಪ್ರಯಾಣಿಕರ ರಕ್ಷಣೆ.ಬಾಂಧವ್ಯ ಸುಧಾರಣೆಗೆ ಪಾಕಿಸ್ತಾನವೇ ಹೊಣೆಗಾರಿಕೆ ಪ್ರದರ್ಶಿಸಬೇಕು: ಶಶಿ ತರೂರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಪುರ:</strong> ಛತ್ತೀಸ್ಗಢದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಸಚಿವ ಸಂಪುಟವನ್ನು ವಿಸ್ತರಿಸಿದ್ದು, ಮೊದಲ ಬಾರಿ ಆಯ್ಕೆಯಾಗಿರುವ ಮೂವರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. </p><p>ಇದರೊಂದಿಗೆ ರಾಜ್ಯದ ಇತಿಹಾಸದಲ್ಲೇ ಅತ್ಯಧಿಕವೆಂಬಂತೆ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರ ನೇತೃತ್ವದ ಸಚಿವ ಸಂಪುಟದ ಬಲ 14ಕ್ಕೆ ಏರಿಕೆಯಾಗಿದೆ. </p><p>ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಾಮೆನ್ ಡೆಕಾ ಪ್ರಮಾಣವಚನ ಬೋಧಿಸಿದರು. </p><p>ಬಿಜೆಪಿ ಶಾಸಕರಾದ ರಾಜೇಶ್ ಅಗರವಾಲ್, ಗುರು ಖುಷ್ವಂತ್ ಸಾಹೇಬ್ ಮತ್ತು ಗಜೇಂದ್ರ ಯಾದವ್ ಪ್ರಮಾಣವಚನ ಸ್ವೀಕರಿಸಿದರು. ನೂತನ ಸಚಿವರಿಗೆ ಖಾತೆ ಹಂಚಿಕೆ ಇನ್ನಷ್ಟೇ ಆಗಬೇಕಿದೆ. </p><p>2000ನೇ ಇಸವಿಯಲ್ಲಿ ರಾಜ್ಯ ರಚನೆಯಾದ ಬಳಿಕ 90 ಸದಸ್ಯರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ 13 ಸಚಿವರು ಸಂಪುಟದ ಭಾಗವಾಗಿದ್ದರು. </p><p>2023ರಲ್ಲಿ ನಡೆದ ಚುನಾವಣೆಯಲ್ಲಿ 54 ಸ್ಥಾನಗಳಲ್ಲಿ ಗೆದ್ದು ಬಿಜೆಪಿ ಅಧಿಕಾರ ಹಿಡಿದಿತ್ತು. ಕಾಂಗ್ರೆಸ್ಗೆ 35 ಸ್ಥಾನಗಳು ಲಭಿಸಿತ್ತು. </p>.Mumbai Rains: ಹಳಿಗಳ ಮಧ್ಯೆ ಸಿಲುಕಿಕೊಂಡ ಮೋನೋ ರೈಲು; 782 ಪ್ರಯಾಣಿಕರ ರಕ್ಷಣೆ.ಬಾಂಧವ್ಯ ಸುಧಾರಣೆಗೆ ಪಾಕಿಸ್ತಾನವೇ ಹೊಣೆಗಾರಿಕೆ ಪ್ರದರ್ಶಿಸಬೇಕು: ಶಶಿ ತರೂರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>