ಬಘೇಲ್ ಅವರು ಗುರುವಾರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಪರಿಸ್ಥಿತಿಯನ್ನು ಎದುರಿಸಲು ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
‘ದೇವಭೂಮಿ’ ಹಿಮಾಚಲ ಪ್ರದೇಶಕ್ಕೆ ತೀವ್ರ ಪ್ರಕೃತಿ ವಿಕೋಪ ಅಪ್ಪಳಿಸಿದ್ದು, ಈ ಪರಿಸ್ಥಿತಿಯಲ್ಲಿ ಛತ್ತೀಸ್ಗಢದ ಜನರು ಹಿಮಾಚಲ ಪ್ರದೇಶದ ಜನರೊಂದಿಗೆ ನಿಂತಿದ್ದಾರೆ ಎಂದು ಬಘೇಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿಪತ್ತಿನ ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿಗಾಗಿ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಛತ್ತೀಸ್ಗಢದ ಜನರ ಪರವಾಗಿ ₹11 ಕೋಟಿ ಹಣವನ್ನು ಬಿಡುಗಡೆ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ.
ಭಾನುವಾರ ರಾತ್ರಿಯಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಶಿಮ್ಲಾ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಒಟ್ಟು ಸಾವಿನ ಸಂಖ್ಯೆ 74ಕ್ಕೆ ಏರಿಕೆ ಕಂಡಿದ್ದು, ಶಿಮ್ಲಾದಲ್ಲಿ 21 ಸಾವುಗಳು ಸಂಭವಿಸಿವೆ ಎಂದು ಹಿಮಾಚಲ ಪ್ರದೇಶದ ಅಧಿಕಾರಿಗಳು ತಿಳಿಸಿದ್ದಾರೆ.