<p class="title"><strong>ರಾಯಪುರ (ಪಿಟಿಐ):</strong> ರಾಜಸ್ಥಾನದ ಟೈಲರ್ ಕನ್ಹಯ್ಯ ಲಾಲ್ ಹತ್ಯೆಯ ಆರೋಪಿಗಳ ಜೊತೆಗಿನ ಸಂಬಂಧದ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಛತ್ತೀಸ್ಗಡದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ಬಿಜೆಪಿಯನ್ನು ಭಾನುವಾರ ಕೇಳಿದ್ದು, ಈ ಘಟನೆಯು ಕೋಮುಗಲಭೆಯನ್ನು ಪ್ರಚೋದಿಸುವ ಪಿತೂರಿಯಾಗಿದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.</p>.<p class="title">‘ಉದಯಪುರದಲ್ಲಿ ನಡೆದ ಬರ್ಬರ ಹತ್ಯೆಯನ್ನು ಯಾವುದೇ ನಾಗರಿಕ ಸಮಾಜ ಒಪ್ಪಿಕೊಳ್ಳುವುದಿಲ್ಲ. ಆರೋಪಿಗಳಿಗೆ ಶೀಘ್ರ ಶಿಕ್ಷೆಯಾಗಬೇಕೆಂದು ನಾನು ಒತ್ತಾಯಿಸಿದ್ದೇನೆ. ಆದರೆ ಆರೋಪಿಗಳ ಜತೆ ಬಿಜೆಪಿ ನಂಟು ಹೊಂದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಬಿಜೆಪಿ ಸ್ಪಷ್ಟನೆ ನೀಡಬೇಕು. ಇದು ಕೋಮುಗಲಭೆ ಎಬ್ಬಿಸುವ ಷಡ್ಯಂತ್ರವೇ? ಘಟನೆಯ ಸಂಚುಕೋರರು ಯಾರು? ಇದರ ಬಗ್ಗೆ ತನಿಖೆಯಾಗಬೇಕು’ ಎಂದು ಭೂಪೇಶ್ ಅವರು ಹೇಳಿದರು.</p>.<p class="title">ಕನ್ಹಯ್ಯ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಸದಸ್ಯ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದ್ದು, ಬಿಜೆಪಿ ಈ ಹೇಳಿಕೆಯನ್ನು ಆಧಾರ ರಹಿತ ಎಂದು ತಳ್ಳಿ ಹಾಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ರಾಯಪುರ (ಪಿಟಿಐ):</strong> ರಾಜಸ್ಥಾನದ ಟೈಲರ್ ಕನ್ಹಯ್ಯ ಲಾಲ್ ಹತ್ಯೆಯ ಆರೋಪಿಗಳ ಜೊತೆಗಿನ ಸಂಬಂಧದ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಛತ್ತೀಸ್ಗಡದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ಬಿಜೆಪಿಯನ್ನು ಭಾನುವಾರ ಕೇಳಿದ್ದು, ಈ ಘಟನೆಯು ಕೋಮುಗಲಭೆಯನ್ನು ಪ್ರಚೋದಿಸುವ ಪಿತೂರಿಯಾಗಿದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.</p>.<p class="title">‘ಉದಯಪುರದಲ್ಲಿ ನಡೆದ ಬರ್ಬರ ಹತ್ಯೆಯನ್ನು ಯಾವುದೇ ನಾಗರಿಕ ಸಮಾಜ ಒಪ್ಪಿಕೊಳ್ಳುವುದಿಲ್ಲ. ಆರೋಪಿಗಳಿಗೆ ಶೀಘ್ರ ಶಿಕ್ಷೆಯಾಗಬೇಕೆಂದು ನಾನು ಒತ್ತಾಯಿಸಿದ್ದೇನೆ. ಆದರೆ ಆರೋಪಿಗಳ ಜತೆ ಬಿಜೆಪಿ ನಂಟು ಹೊಂದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಬಿಜೆಪಿ ಸ್ಪಷ್ಟನೆ ನೀಡಬೇಕು. ಇದು ಕೋಮುಗಲಭೆ ಎಬ್ಬಿಸುವ ಷಡ್ಯಂತ್ರವೇ? ಘಟನೆಯ ಸಂಚುಕೋರರು ಯಾರು? ಇದರ ಬಗ್ಗೆ ತನಿಖೆಯಾಗಬೇಕು’ ಎಂದು ಭೂಪೇಶ್ ಅವರು ಹೇಳಿದರು.</p>.<p class="title">ಕನ್ಹಯ್ಯ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಸದಸ್ಯ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದ್ದು, ಬಿಜೆಪಿ ಈ ಹೇಳಿಕೆಯನ್ನು ಆಧಾರ ರಹಿತ ಎಂದು ತಳ್ಳಿ ಹಾಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>