ರಾಜ್ಯದಲ್ಲಿ ಕೈಗೊಂಡಿರುವ ಸಾಮಾಜಿಕ–ಆರ್ಥಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಯಾಕೆ ಪ್ರಕಟಿಸುತ್ತಿಲ್ಲ ಎಂದು ಪ್ರತಿಪಕ್ಷ ಪ್ರಶ್ನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರ ಯಾವ ಆಧಾರದ ಮೇಲೆ ಇತರೆ ಹಿಂದುಳಿದ ವರ್ಗಗಳಿಗೆ ಶೇ 27 ಮೀಸಲಾತಿ ಕಲ್ಪಿಸಿದೆ ಎಂದು ನ್ಯಾಯಾಲಯ ಪ್ರಶ್ನಿಸಿತ್ತು. ಹೀಗಾಗಿ ಇತರೆ ಹಿಂದುಳಿದ ವರ್ಗಗಳು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರ ಗಣತಿ ಮಾಡಲಾಗಿತ್ತು. ಆ ಪ್ರಕಾರ ರಾಜ್ಯದಲ್ಲಿ ಶೇ 43.5ರಷ್ಟು ಇತರೆ ಹಿಂದುಳಿದ ವರ್ಗಗಳು, 3.5ರಷ್ಟು ಆರ್ಥಿಕವಾಗಿ ಹಿಂದುಳಿದ ಜನರು ಇದ್ದು, ಇದರ ಆಧಾರದಲ್ಲೇ ಮೀಸಲಾತಿ ಕಲ್ಪಿಸಲಾಗಿದೆ ಎಂದರು.