<p><strong>ಕವರ್ಧಾ</strong>: ಛತ್ತೀಸಗಢದ ಉಪಮುಖ್ಯಮಂತ್ರಿ ಅರುಣ್ ಸಾವೋ ಅವರ ಸೋದರಳಿಯ, ರಾಣಿ ದಹರಾ ಜಲಾಶಯದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>‘ಬಿಜೆಪಿ ಯುವ ಘಟಕದ ಪದಾಧಿಕಾರಿ ತುಷಾರ್ ಸಾಹು (21) ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ತನ್ನ ಐವರು ಸ್ನೇಹಿತರೊಂದಿಗೆ ಕಬೀರಧಾಮ ಜಿಲ್ಲೆಯ ರಾಣಿ ದಹರಾ ಜಲಾಶಯಕ್ಕೆ ತೆರಳಿದ್ದರು. ಅಲ್ಲಿ ಮುಳುಗಿ ಮೃತಪಟ್ಟಿದ್ದಾರೆ’ ಎಂದು ಕಬೀರಧಾಮ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಕುಮಾರ್ ತಿಳಿಸಿದ್ದಾರೆ.</p>.<p>‘ಸಾಹು ಅವರ ಪತ್ತೆಗಾಗಿ ಪೊಲೀಸರು ಭಾನುವಾರ ತಡರಾತ್ರಿಯವರೆಗೆ ಕಾರ್ಯಚರಣೆ ನಡೆಸಿದ್ದು, ಸೋಮವಾರ ಬೆಳ್ಳಿಗೆ 6.30ರ ಸುಮಾರಿಗೆ ಬಂಡೆಯಾಡಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆಯಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p>ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವರ್ಧಾ</strong>: ಛತ್ತೀಸಗಢದ ಉಪಮುಖ್ಯಮಂತ್ರಿ ಅರುಣ್ ಸಾವೋ ಅವರ ಸೋದರಳಿಯ, ರಾಣಿ ದಹರಾ ಜಲಾಶಯದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>‘ಬಿಜೆಪಿ ಯುವ ಘಟಕದ ಪದಾಧಿಕಾರಿ ತುಷಾರ್ ಸಾಹು (21) ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ತನ್ನ ಐವರು ಸ್ನೇಹಿತರೊಂದಿಗೆ ಕಬೀರಧಾಮ ಜಿಲ್ಲೆಯ ರಾಣಿ ದಹರಾ ಜಲಾಶಯಕ್ಕೆ ತೆರಳಿದ್ದರು. ಅಲ್ಲಿ ಮುಳುಗಿ ಮೃತಪಟ್ಟಿದ್ದಾರೆ’ ಎಂದು ಕಬೀರಧಾಮ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಕುಮಾರ್ ತಿಳಿಸಿದ್ದಾರೆ.</p>.<p>‘ಸಾಹು ಅವರ ಪತ್ತೆಗಾಗಿ ಪೊಲೀಸರು ಭಾನುವಾರ ತಡರಾತ್ರಿಯವರೆಗೆ ಕಾರ್ಯಚರಣೆ ನಡೆಸಿದ್ದು, ಸೋಮವಾರ ಬೆಳ್ಳಿಗೆ 6.30ರ ಸುಮಾರಿಗೆ ಬಂಡೆಯಾಡಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆಯಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p>ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>