ಬಿಎಸ್ಎಫ್ ಮತ್ತು ಜಿಲ್ಲಾ ಪೊಲೀಸ್ ಪಡೆಯು ಸದಕ್ತೋಲ ಗ್ರಾಮದ ಬಳಿ ಗಸ್ತು ತಿರುಗುತ್ತಿದ್ದ ವೇಳೆ ಬಾಂಬ್ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಬಿಎಸ್ಎಫ್ ಯೋಧ ಅಖಿಲೇಶ್ ರೈ (45) ಹುತ್ಮಾತರಾಗಿದ್ದರು.
ಬಂಧಿತ ನಾಲ್ವರು ನಕ್ಸಲರು ಬಾಂಬ್ ಸ್ಫೋಟದ ಘಟನೆಯಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.