<p><strong>ಜಶ್ಪುರ:</strong> ಗಣೇಶ ವಿಸರ್ಜನೆ ಮೆರವಣಿಗೆ ಹೊರಟಿದ್ದ ಗುಂಪಿನ ಮೇಲೆ ಪಾನಮತ್ತ ವ್ಯಕ್ತಿ ಚಲಾಯಿಸುತ್ತಿದ್ದ ಎಸ್ಯುವಿ ಹರಿದ ಪರಿಣಾಮ 3 ಮಂದಿ ಸಾವಿಗೀಡಾಗಿ 22 ಮಂದಿ ಗಾಯಗೊಂಡ ಘಟನೆ ಛತ್ತೀಸಗಢದ ಜಶ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.ಕಲಬುರಗಿ|ಶಾಲಾ ಬಸ್– ಸಿಮೆಂಟ್ ಟ್ಯಾಂಕರ್ ನಡುವೆ ಅಪಘಾತ: 6 ವಿದ್ಯಾರ್ಥಿಗಳಿಗೆ ಗಾಯ.<p>ಮಂಗಳವಾರ ರಾತ್ರಿ ಗಣೇಶ ಮೂರ್ತಿಯ ವಿಸರ್ಜನೆಗೆ ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ ಬಗೀಚಾ ಪೊಲೀಸ್ ಠಾಣಾ ವ್ಯಾಪ್ತಿಯ ಜುರುದಂದ್ ಗ್ರಾಮದಲ್ಲಿ ಪ್ರಕರಣ ಘಟಿಸಿದೆ ಎಂದು ಜಶ್ಪುರದ ಪೊಲೀಸ್ ವರಿಷ್ಠಾಧಿಕಾರಿ ಶಶಿಮೋಹನ್ ಸಿಂಗ್ ಹೇಳಿದ್ದಾರೆ.</p><p>ಬಗೀಚಾ ಜಶ್ಪುರ ರಸ್ತೆಯಲ್ಲಿ ಎಸ್ಯುವಿ ಬಂದು ಡಿಕ್ಕಿ ಹೊಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಘಟನೆಯಲ್ಲಿ ವಿಪಿನ್ ಪ್ರಜಾಪತಿ (17), ಅರವಿಂದ ಕೇರ್ಕೆಟ್ಟಾ (19) ಹಾಗೂ ಖಿರೋವತಿ ಯಾದವ್ (32) ಸ್ಥಳದಲ್ಲೇ ಮೃತಟ್ಟಿದ್ದಾರೆ. 22 ಮಂದಿ ಗಾಯಗೊಂಡಿದ್ದು, ಈ ಪೈಕಿ ಕೆಲವರು ಗಂಭೀರವಾಗಿ ಗಾಯಾಳುಗಳಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಹಾವೇರಿ | ನಾಯಿಯಿಂದ ಅಪಘಾತ: ಅರಣ್ಯಾಧಿಕಾರಿ ವಿರುದ್ಧ ಪ್ರಕರಣ.<p>ಗಂಭೀರವಾಗಿ ಗಾಯಗೊಂಡವರನ್ನು ಪಕ್ಕದ ಸುರ್ಗುಜಾ ಜಿಲ್ಲೆಯ ಅಂಬಿಕಾಪುರ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ. ಉಳಿದವನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಘಟನೆಯ ವೇಳೆ ಎಸ್ಯುವಿ ಚಾಲಕ ಸುಖ್ಸಾಗರ್ ವೈಷ್ಣವ್ (40) ಪಾನಮತ್ತನಾಗಿದ್ದ. ಆತನನ್ನು ಬಂಧಿಸಿ, ಗಾಡಿಯನ್ನು ದಸ್ತಗಿರಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.</p>.ಬಾಗಲಕೋಟೆ: ಮದ್ಯ ಸೇವಿಸಿ ಅಪಘಾತ ಮಾಡಿದ್ದ ಚಾಲಕನಿಗೆ 10 ವರ್ಷ ಕಠಿಣ ಶಿಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಶ್ಪುರ:</strong> ಗಣೇಶ ವಿಸರ್ಜನೆ ಮೆರವಣಿಗೆ ಹೊರಟಿದ್ದ ಗುಂಪಿನ ಮೇಲೆ ಪಾನಮತ್ತ ವ್ಯಕ್ತಿ ಚಲಾಯಿಸುತ್ತಿದ್ದ ಎಸ್ಯುವಿ ಹರಿದ ಪರಿಣಾಮ 3 ಮಂದಿ ಸಾವಿಗೀಡಾಗಿ 22 ಮಂದಿ ಗಾಯಗೊಂಡ ಘಟನೆ ಛತ್ತೀಸಗಢದ ಜಶ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.ಕಲಬುರಗಿ|ಶಾಲಾ ಬಸ್– ಸಿಮೆಂಟ್ ಟ್ಯಾಂಕರ್ ನಡುವೆ ಅಪಘಾತ: 6 ವಿದ್ಯಾರ್ಥಿಗಳಿಗೆ ಗಾಯ.<p>ಮಂಗಳವಾರ ರಾತ್ರಿ ಗಣೇಶ ಮೂರ್ತಿಯ ವಿಸರ್ಜನೆಗೆ ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ ಬಗೀಚಾ ಪೊಲೀಸ್ ಠಾಣಾ ವ್ಯಾಪ್ತಿಯ ಜುರುದಂದ್ ಗ್ರಾಮದಲ್ಲಿ ಪ್ರಕರಣ ಘಟಿಸಿದೆ ಎಂದು ಜಶ್ಪುರದ ಪೊಲೀಸ್ ವರಿಷ್ಠಾಧಿಕಾರಿ ಶಶಿಮೋಹನ್ ಸಿಂಗ್ ಹೇಳಿದ್ದಾರೆ.</p><p>ಬಗೀಚಾ ಜಶ್ಪುರ ರಸ್ತೆಯಲ್ಲಿ ಎಸ್ಯುವಿ ಬಂದು ಡಿಕ್ಕಿ ಹೊಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಘಟನೆಯಲ್ಲಿ ವಿಪಿನ್ ಪ್ರಜಾಪತಿ (17), ಅರವಿಂದ ಕೇರ್ಕೆಟ್ಟಾ (19) ಹಾಗೂ ಖಿರೋವತಿ ಯಾದವ್ (32) ಸ್ಥಳದಲ್ಲೇ ಮೃತಟ್ಟಿದ್ದಾರೆ. 22 ಮಂದಿ ಗಾಯಗೊಂಡಿದ್ದು, ಈ ಪೈಕಿ ಕೆಲವರು ಗಂಭೀರವಾಗಿ ಗಾಯಾಳುಗಳಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಹಾವೇರಿ | ನಾಯಿಯಿಂದ ಅಪಘಾತ: ಅರಣ್ಯಾಧಿಕಾರಿ ವಿರುದ್ಧ ಪ್ರಕರಣ.<p>ಗಂಭೀರವಾಗಿ ಗಾಯಗೊಂಡವರನ್ನು ಪಕ್ಕದ ಸುರ್ಗುಜಾ ಜಿಲ್ಲೆಯ ಅಂಬಿಕಾಪುರ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ. ಉಳಿದವನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಘಟನೆಯ ವೇಳೆ ಎಸ್ಯುವಿ ಚಾಲಕ ಸುಖ್ಸಾಗರ್ ವೈಷ್ಣವ್ (40) ಪಾನಮತ್ತನಾಗಿದ್ದ. ಆತನನ್ನು ಬಂಧಿಸಿ, ಗಾಡಿಯನ್ನು ದಸ್ತಗಿರಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.</p>.ಬಾಗಲಕೋಟೆ: ಮದ್ಯ ಸೇವಿಸಿ ಅಪಘಾತ ಮಾಡಿದ್ದ ಚಾಲಕನಿಗೆ 10 ವರ್ಷ ಕಠಿಣ ಶಿಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>