<p><strong>ರಾಯಪುರ</strong>: ಜನವರಿ 22ರಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮ ಮೂರ್ತಿ ಪ್ರತಿಷ್ಠಾಪನೆ ಮಾಡಲಿರುವ ಕಾರಣ, ರಾಜ್ಯದಲ್ಲಿ ಆ ದಿನವನ್ನು ‘ಪಾನಮುಕ್ತ’ ದಿನ ಎಂದು ಘೋಷಿಸಿಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಛತ್ತೀಸಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರು ಹೇಳಿದ್ದಾರೆ.</p>.<p>‘ಡಿಸೆಂಬರ್ 25ರಿಂದ ಜನವರಿ 2ರ ವರೆಗೆ ನಾವು ಉತ್ತಮ ಆಡಳಿತ ದಿನವನ್ನು ಆಚರಿಸಿದೆವು. ರಾಮರಾಜ್ಯವು ಉತ್ತಮ ಆಡಳಿತಕ್ಕೆ ಮಾದರಿಯಾಗಿದೆ’ ಎಂದು ಅವರು ಹೇಳಿದರು.</p>.<p>‘ಛತ್ತೀಸಗಢವು ಶ್ರೀರಾಮನ ತಾಯಿಯ ತವರು ಆಗಿರುವುದು ನಮ್ಮ ಅದೃಷ್ಟ. ಜ.22ರಂದು ರಾಜ್ಯದ ಎಲ್ಲೆಡೆ ಹಬ್ಬದ ಸಂಭ್ರಮ ಮನೆಮಾಡಲಿದೆ. ಆ ದಿವಸ ಎಲ್ಲೆಡೆ ಹಣತೆಗಳನ್ನು ಬೆಳಗಿಸಲಾಗುತ್ತದೆ. ರಾಜ್ಯದ ಅಕ್ಕಿ ಗಿರಣಿ ಸಂಘವು ಈಗಾಗಲೇ 300 ಟನ್ ಸುವಾಸನೆಯುಕ್ತ ಅಕ್ಕಿಯನ್ನು ಅಯೋಧ್ಯೆಗೆ ಕಳಿಸಿದೆ. ತರಕಾರಿ ಬೆಳೆಗಾರರು ತರಕಾರಿಯನ್ನು ಕಳಿಸಲಿದ್ದಾರೆ’ ಎಂದು ವಿಷ್ಣುದೇವ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ</strong>: ಜನವರಿ 22ರಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮ ಮೂರ್ತಿ ಪ್ರತಿಷ್ಠಾಪನೆ ಮಾಡಲಿರುವ ಕಾರಣ, ರಾಜ್ಯದಲ್ಲಿ ಆ ದಿನವನ್ನು ‘ಪಾನಮುಕ್ತ’ ದಿನ ಎಂದು ಘೋಷಿಸಿಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಛತ್ತೀಸಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರು ಹೇಳಿದ್ದಾರೆ.</p>.<p>‘ಡಿಸೆಂಬರ್ 25ರಿಂದ ಜನವರಿ 2ರ ವರೆಗೆ ನಾವು ಉತ್ತಮ ಆಡಳಿತ ದಿನವನ್ನು ಆಚರಿಸಿದೆವು. ರಾಮರಾಜ್ಯವು ಉತ್ತಮ ಆಡಳಿತಕ್ಕೆ ಮಾದರಿಯಾಗಿದೆ’ ಎಂದು ಅವರು ಹೇಳಿದರು.</p>.<p>‘ಛತ್ತೀಸಗಢವು ಶ್ರೀರಾಮನ ತಾಯಿಯ ತವರು ಆಗಿರುವುದು ನಮ್ಮ ಅದೃಷ್ಟ. ಜ.22ರಂದು ರಾಜ್ಯದ ಎಲ್ಲೆಡೆ ಹಬ್ಬದ ಸಂಭ್ರಮ ಮನೆಮಾಡಲಿದೆ. ಆ ದಿವಸ ಎಲ್ಲೆಡೆ ಹಣತೆಗಳನ್ನು ಬೆಳಗಿಸಲಾಗುತ್ತದೆ. ರಾಜ್ಯದ ಅಕ್ಕಿ ಗಿರಣಿ ಸಂಘವು ಈಗಾಗಲೇ 300 ಟನ್ ಸುವಾಸನೆಯುಕ್ತ ಅಕ್ಕಿಯನ್ನು ಅಯೋಧ್ಯೆಗೆ ಕಳಿಸಿದೆ. ತರಕಾರಿ ಬೆಳೆಗಾರರು ತರಕಾರಿಯನ್ನು ಕಳಿಸಲಿದ್ದಾರೆ’ ಎಂದು ವಿಷ್ಣುದೇವ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>