<p><strong>ರಾಯಪುರ್</strong>: ಛತ್ತೀಸ್ಗಡದ ಕಾಂಗ್ರೆಸ್ ಸರ್ಕಾರವೂ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗೋ ಮೂತ್ರವನ್ನು ಖರೀದಿಸಲು ಮುಂದಾಗಿದೆ.</p>.<p>‘ಈಗಾಗಲೇ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ‘ಗೋದಾನ ನ್ಯಾಯ ಯೋಜನೆ’ ಅಂಗವಾಗಿ ಬರುವ ‘ಹರೇಲಿ’ ಹಬ್ಬದಿಂದ ಗೋಮೂತ್ರ ಖರೀದಿ ಪ್ರಕ್ರಿಯೆಯನ್ನು ಆರಂಭಗೊಳಿಸಲಾಗುವುದು’ ಎಂದು ಗೋದಾನ ನ್ಯಾಯ ಯೋಜನೆ ನಿರ್ದೇಶಕ ಅಯ್ಯಜ್ ತಂಬೋಳಿ ಹೇಳಿದ್ದಾರೆ.</p>.<p>ಪ್ರತಿ ಲೀಟರ್ ಗೋ ಮೂತ್ರಕ್ಕೆ ₹4 ದರ ನಿಗದಿಪಡಿಸಲಾಗಿದೆ.</p>.<p>‘ಜಿಲ್ಲಾ ಕೇಂದ್ರಗಳಲ್ಲಿರುವ ಗೋಠಾಣೆಗಳು (ಗೋಶಾಲೆ) ಗೋಮೂತ್ರ ಖರೀದಿಸಲಿವೆ. ಆಯಾ ಜಿಲ್ಲೆಯ ರೈತರು ಸಂಗ್ರಹಿಸಿ ಗೋಮೂತ್ರವನ್ನು ಈ ಗೋಠಾಣೆಗಳಿಗೆ ತಂದು ನೀಡಬೇಕು’ ಎಂದು ಅವರು ತಿಳಿಸಿದ್ದಾರೆ.</p>.<p>‘ಗೋದಾನ ನ್ಯಾಯ ಯೋಜನೆ 2020 ರಲ್ಲಿ ಆರಂಭಿಸಲಾಯಿತು. ಈಗಾಗಲೇ ಈ ಯೋಜನೆಯಲ್ಲಿ ಸಗಣಿಯನ್ನು ಪ್ರತಿ ಕೆಜಿಗೆ ₹2ರಂತೆ ನೀಡಿ ಖರೀದಿಸಲಾಗುತ್ತಿದೆ. ಇಲ್ಲಿವರೆಗೆ 150 ಕೋಟಿ ರೂಪಾಯಿಯ ಸಗಣಿ ಖರೀದಿಸಿ ಸಾವಯವ ಮಿಷನ್ಗೆ ನೀಡಲಾಗಿದೆ’ ಎಂದಿದ್ದಾರೆ.</p>.<p>‘ಈಗ ಗೋಮೂತ್ರ ಖರೀದಿಯಿಂದ ರೈತರಿಗೆ ಆರ್ಥಿಕವಾಗಿ ಅನುಕೂಲ ಆಗಲಿದ್ದು ಅಲ್ಲದೇ ರಾಜ್ಯದಲ್ಲಿ ಸಾವಯವ ಮಿಷನ್ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು’ ಎಂದು ಅಯ್ಯಜ್ ತಿಳಿಸಿದ್ದಾರೆ.</p>.<p><a href="https://www.prajavani.net/india-news/ncp-congress-mlas-vote-for-droupadi-murmu-in-presidential-poll-955547.html" itemprop="url">ಮುರ್ಮು ಅವರಿಗೆ ಆತ್ಮಸಾಕ್ಷಿ ಆಧಾರ ಮತ ಹಾಕಿದೆವು: ಎನ್ಸಿಪಿ, ಕಾಂಗ್ರೆಸ್ ಶಾಸಕರು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ್</strong>: ಛತ್ತೀಸ್ಗಡದ ಕಾಂಗ್ರೆಸ್ ಸರ್ಕಾರವೂ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗೋ ಮೂತ್ರವನ್ನು ಖರೀದಿಸಲು ಮುಂದಾಗಿದೆ.</p>.<p>‘ಈಗಾಗಲೇ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ‘ಗೋದಾನ ನ್ಯಾಯ ಯೋಜನೆ’ ಅಂಗವಾಗಿ ಬರುವ ‘ಹರೇಲಿ’ ಹಬ್ಬದಿಂದ ಗೋಮೂತ್ರ ಖರೀದಿ ಪ್ರಕ್ರಿಯೆಯನ್ನು ಆರಂಭಗೊಳಿಸಲಾಗುವುದು’ ಎಂದು ಗೋದಾನ ನ್ಯಾಯ ಯೋಜನೆ ನಿರ್ದೇಶಕ ಅಯ್ಯಜ್ ತಂಬೋಳಿ ಹೇಳಿದ್ದಾರೆ.</p>.<p>ಪ್ರತಿ ಲೀಟರ್ ಗೋ ಮೂತ್ರಕ್ಕೆ ₹4 ದರ ನಿಗದಿಪಡಿಸಲಾಗಿದೆ.</p>.<p>‘ಜಿಲ್ಲಾ ಕೇಂದ್ರಗಳಲ್ಲಿರುವ ಗೋಠಾಣೆಗಳು (ಗೋಶಾಲೆ) ಗೋಮೂತ್ರ ಖರೀದಿಸಲಿವೆ. ಆಯಾ ಜಿಲ್ಲೆಯ ರೈತರು ಸಂಗ್ರಹಿಸಿ ಗೋಮೂತ್ರವನ್ನು ಈ ಗೋಠಾಣೆಗಳಿಗೆ ತಂದು ನೀಡಬೇಕು’ ಎಂದು ಅವರು ತಿಳಿಸಿದ್ದಾರೆ.</p>.<p>‘ಗೋದಾನ ನ್ಯಾಯ ಯೋಜನೆ 2020 ರಲ್ಲಿ ಆರಂಭಿಸಲಾಯಿತು. ಈಗಾಗಲೇ ಈ ಯೋಜನೆಯಲ್ಲಿ ಸಗಣಿಯನ್ನು ಪ್ರತಿ ಕೆಜಿಗೆ ₹2ರಂತೆ ನೀಡಿ ಖರೀದಿಸಲಾಗುತ್ತಿದೆ. ಇಲ್ಲಿವರೆಗೆ 150 ಕೋಟಿ ರೂಪಾಯಿಯ ಸಗಣಿ ಖರೀದಿಸಿ ಸಾವಯವ ಮಿಷನ್ಗೆ ನೀಡಲಾಗಿದೆ’ ಎಂದಿದ್ದಾರೆ.</p>.<p>‘ಈಗ ಗೋಮೂತ್ರ ಖರೀದಿಯಿಂದ ರೈತರಿಗೆ ಆರ್ಥಿಕವಾಗಿ ಅನುಕೂಲ ಆಗಲಿದ್ದು ಅಲ್ಲದೇ ರಾಜ್ಯದಲ್ಲಿ ಸಾವಯವ ಮಿಷನ್ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು’ ಎಂದು ಅಯ್ಯಜ್ ತಿಳಿಸಿದ್ದಾರೆ.</p>.<p><a href="https://www.prajavani.net/india-news/ncp-congress-mlas-vote-for-droupadi-murmu-in-presidential-poll-955547.html" itemprop="url">ಮುರ್ಮು ಅವರಿಗೆ ಆತ್ಮಸಾಕ್ಷಿ ಆಧಾರ ಮತ ಹಾಕಿದೆವು: ಎನ್ಸಿಪಿ, ಕಾಂಗ್ರೆಸ್ ಶಾಸಕರು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>