<p><strong>ರಾಯ್ಪುರ:</strong> ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಪತ್ರಕರ್ತನ ಹತ್ಯೆಯ ಪ್ರಮುಖ ಆರೋಪಿ ಸುರೇಶ್ ಚಂದ್ರಕರ್ ಎನ್ನುವಾತನನ್ನು ಹೈದರಾಬಾದ್ನಲ್ಲಿ ವಿಶೇಷ ತನಿಖಾ ದಳ (ಎಸ್ಐಟಿ) ವಶಕ್ಕೆ ಪಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p><p>ಪತ್ರಕರ್ತ ಮುಕೇಶ್ ಚಂದ್ರಕರ್ರನ್ನು ಹತ್ಯೆ ಮಾಡಿದ್ದ ಪ್ರಕರಣ ಜ.3 ರಂದು ಬೆಳಕಿಗೆ ಬಂದಿತ್ತು. ಆ ಬಳಿಕ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದ.</p><p>ವೃತ್ತಿಯಲ್ಲಿ ಗುತ್ತಿಗೆದಾರನಾಗಿರುವ ಆರೋಪಿ ಸುರೇಶ್ನನ್ನು ಪತ್ತೆ ಮಾಡಲು ಎಸ್ಐಟಿ ರಚನೆ ಮಾಡಲಾಗಿತ್ತು. ಭಾನುವಾರ ರಾತ್ರಿ ಅಧಿಕಾರಿಗಳು ಸುರೇಶ್ನನ್ನು ವಶಕ್ಕೆ ಪಡೆದಿದ್ದಾರೆ. </p><p>ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಸುರೇಶ್ ಸಹೋದರರಾದ ರಿತೇಶ್ ಚಂದ್ರಕರ್ ಮತ್ತು ದಿನೇಶ್ ಚಂದ್ರಕರ್ ಮತ್ತು ಮೇಲ್ವಿಚಾರಕ ಮಹೇಂದ್ರ ರಾಂಟೆಕೆ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.</p><p>ಪತ್ರಕರ್ತ ಮುಕೇಶ್ ಚಂದ್ರಕರ್ (33) ಜ.1 ರಂದು ನಾಪತ್ತೆಯಾಗಿದ್ದರು. ಜ.3 ರಂದು ಸುರೇಶ್ಗೆ ಸೇರಿದ್ದ ಜಾಗದಲ್ಲಿದ್ದ ಸೆಪ್ಟಿಕ್ ಟ್ಯಾಂಕ್ನಲ್ಲಿ ಶವವಾಗಿ ಪತ್ತೆಯಾಗಿದ್ದರು. </p><p>ಮುಕೇಶ್ ಚಂದ್ರಕರ್ ‘ಬಸ್ತಾರ್ ಜಂಕ್ಷನ್’ ಹೆಸರಿನಲ್ಲಿ ಯೂಟ್ಯೂಬ್ ಚಾನಲ್ ಹೊಂದಿದ್ದರು, ಜತೆಗೆ ಬೇರೆ ಬೇರೆ ಪತ್ರಿಕೆಗಳಿಗೆ ಬರೆಯುತ್ತಿದ್ದರು. ರಸ್ತೆ ಕಾಮಗಾರಿಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ ನಂತರ ಅವರ ಹತ್ಯೆ ನಡೆದಿದೆ. </p>.ಛತ್ತೀಸಗಢ ಪತ್ರಕರ್ತನ ಹತ್ಯೆ ಬಗ್ಗೆ ತನಿಖೆಗೆ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಪುರ:</strong> ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಪತ್ರಕರ್ತನ ಹತ್ಯೆಯ ಪ್ರಮುಖ ಆರೋಪಿ ಸುರೇಶ್ ಚಂದ್ರಕರ್ ಎನ್ನುವಾತನನ್ನು ಹೈದರಾಬಾದ್ನಲ್ಲಿ ವಿಶೇಷ ತನಿಖಾ ದಳ (ಎಸ್ಐಟಿ) ವಶಕ್ಕೆ ಪಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p><p>ಪತ್ರಕರ್ತ ಮುಕೇಶ್ ಚಂದ್ರಕರ್ರನ್ನು ಹತ್ಯೆ ಮಾಡಿದ್ದ ಪ್ರಕರಣ ಜ.3 ರಂದು ಬೆಳಕಿಗೆ ಬಂದಿತ್ತು. ಆ ಬಳಿಕ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದ.</p><p>ವೃತ್ತಿಯಲ್ಲಿ ಗುತ್ತಿಗೆದಾರನಾಗಿರುವ ಆರೋಪಿ ಸುರೇಶ್ನನ್ನು ಪತ್ತೆ ಮಾಡಲು ಎಸ್ಐಟಿ ರಚನೆ ಮಾಡಲಾಗಿತ್ತು. ಭಾನುವಾರ ರಾತ್ರಿ ಅಧಿಕಾರಿಗಳು ಸುರೇಶ್ನನ್ನು ವಶಕ್ಕೆ ಪಡೆದಿದ್ದಾರೆ. </p><p>ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಸುರೇಶ್ ಸಹೋದರರಾದ ರಿತೇಶ್ ಚಂದ್ರಕರ್ ಮತ್ತು ದಿನೇಶ್ ಚಂದ್ರಕರ್ ಮತ್ತು ಮೇಲ್ವಿಚಾರಕ ಮಹೇಂದ್ರ ರಾಂಟೆಕೆ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.</p><p>ಪತ್ರಕರ್ತ ಮುಕೇಶ್ ಚಂದ್ರಕರ್ (33) ಜ.1 ರಂದು ನಾಪತ್ತೆಯಾಗಿದ್ದರು. ಜ.3 ರಂದು ಸುರೇಶ್ಗೆ ಸೇರಿದ್ದ ಜಾಗದಲ್ಲಿದ್ದ ಸೆಪ್ಟಿಕ್ ಟ್ಯಾಂಕ್ನಲ್ಲಿ ಶವವಾಗಿ ಪತ್ತೆಯಾಗಿದ್ದರು. </p><p>ಮುಕೇಶ್ ಚಂದ್ರಕರ್ ‘ಬಸ್ತಾರ್ ಜಂಕ್ಷನ್’ ಹೆಸರಿನಲ್ಲಿ ಯೂಟ್ಯೂಬ್ ಚಾನಲ್ ಹೊಂದಿದ್ದರು, ಜತೆಗೆ ಬೇರೆ ಬೇರೆ ಪತ್ರಿಕೆಗಳಿಗೆ ಬರೆಯುತ್ತಿದ್ದರು. ರಸ್ತೆ ಕಾಮಗಾರಿಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ ನಂತರ ಅವರ ಹತ್ಯೆ ನಡೆದಿದೆ. </p>.ಛತ್ತೀಸಗಢ ಪತ್ರಕರ್ತನ ಹತ್ಯೆ ಬಗ್ಗೆ ತನಿಖೆಗೆ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>