<p><strong>ರಾಯಪುರ</strong>: ‘ಛತ್ತೀಸಗಢದಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಮಗ ಚೈತನ್ಯ ಬಘೇಲ್ ನೇರವಾಗಿ ಭಾಗಿಯಾಗಿದ್ದು, ಹಗರಣದ ಮೂಲಕ ಬಂದ ₹1,000 ಕೋಟಿ ಹಣವನ್ನು ವೈಯಕ್ತಿವಾಗಿ ನಿರ್ವಹಿಸಿದ್ದಾರೆ’ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಆರೋಪಿಸಿದೆ.</p>.<p>ಚೈತನ್ಯ ಅವರು ಈ ಜಾಲದ ಇತರ ಸದಸ್ಯರ ಜತೆಗೂಡಿ ಪಿತೂರಿ ನಡೆಸಿದ್ದಾರೆ ಮತ್ತು ಅಪರಾಧವನ್ನು ಮುಚ್ಚಿಹಾಕುವ ಪ್ರಯತ್ನಿಸಿದ್ದಾರೆ ಎಂದು ಹೇಳಿದೆ. ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಿಗೆ ಸೋಮವಾರ ಸಲ್ಲಿಸಿದ ನಾಲ್ಕನೇ ಪೂರಕ ಪ್ರಾಸಿಕ್ಯೂಷನ್ ದೂರಿನಲ್ಲಿ ಇ.ಡಿ ಈ ಅಂಶಗಳನ್ನು ಉಲ್ಲೇಖಿಸಿದೆ.</p>.<p>ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜುಲೈ 18ರಂದು ದುರ್ಗಾ ಜಿಲ್ಲೆಯ ಭಿಲಾಯ್ ಪಟ್ಟಣದಲ್ಲಿ ಚೈತನ್ಯ ಅವರನ್ನು ಬಂಧಿಸಿದ್ದರು. ಅದಕ್ಕೂ ಮೊದಲು ಅವರ ಮನೆಯಲ್ಲಿ ಶೋಧ ನಡೆಸಿದ್ದರು. </p>.<p class="bodytext">ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ (2019ರಿಂದ 2022) ಅವಧಿಯಲ್ಲಿ ₹2,500 ಕೋಟಿ ಮೊತ್ತದ ಮದ್ಯ ಹಗರಣ ನಡೆದಿದೆ. </p>.<p class="bodytext">ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಇದುವರೆಗೆ ಒಂದು ಪ್ರಾಸಿಕ್ಯೂಷನ್ ದೂರು ಅಲ್ಲದೆ, ನಾಲ್ಕು ಹೆಚ್ಚುವರಿ ದೂರುಗಳನ್ನು ಸಲ್ಲಿಸಿದೆ. ‘ಈ ಹಗರಣದಿಂದಾಗಿ ರಾಜ್ಯದ ಬೊಕ್ಕಸಕ್ಕೆ ತೀವ್ರ ನಷ್ಟವಾಗಿದೆ’ ಎಂದು ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ</strong>: ‘ಛತ್ತೀಸಗಢದಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಮಗ ಚೈತನ್ಯ ಬಘೇಲ್ ನೇರವಾಗಿ ಭಾಗಿಯಾಗಿದ್ದು, ಹಗರಣದ ಮೂಲಕ ಬಂದ ₹1,000 ಕೋಟಿ ಹಣವನ್ನು ವೈಯಕ್ತಿವಾಗಿ ನಿರ್ವಹಿಸಿದ್ದಾರೆ’ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಆರೋಪಿಸಿದೆ.</p>.<p>ಚೈತನ್ಯ ಅವರು ಈ ಜಾಲದ ಇತರ ಸದಸ್ಯರ ಜತೆಗೂಡಿ ಪಿತೂರಿ ನಡೆಸಿದ್ದಾರೆ ಮತ್ತು ಅಪರಾಧವನ್ನು ಮುಚ್ಚಿಹಾಕುವ ಪ್ರಯತ್ನಿಸಿದ್ದಾರೆ ಎಂದು ಹೇಳಿದೆ. ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಿಗೆ ಸೋಮವಾರ ಸಲ್ಲಿಸಿದ ನಾಲ್ಕನೇ ಪೂರಕ ಪ್ರಾಸಿಕ್ಯೂಷನ್ ದೂರಿನಲ್ಲಿ ಇ.ಡಿ ಈ ಅಂಶಗಳನ್ನು ಉಲ್ಲೇಖಿಸಿದೆ.</p>.<p>ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜುಲೈ 18ರಂದು ದುರ್ಗಾ ಜಿಲ್ಲೆಯ ಭಿಲಾಯ್ ಪಟ್ಟಣದಲ್ಲಿ ಚೈತನ್ಯ ಅವರನ್ನು ಬಂಧಿಸಿದ್ದರು. ಅದಕ್ಕೂ ಮೊದಲು ಅವರ ಮನೆಯಲ್ಲಿ ಶೋಧ ನಡೆಸಿದ್ದರು. </p>.<p class="bodytext">ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ (2019ರಿಂದ 2022) ಅವಧಿಯಲ್ಲಿ ₹2,500 ಕೋಟಿ ಮೊತ್ತದ ಮದ್ಯ ಹಗರಣ ನಡೆದಿದೆ. </p>.<p class="bodytext">ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಇದುವರೆಗೆ ಒಂದು ಪ್ರಾಸಿಕ್ಯೂಷನ್ ದೂರು ಅಲ್ಲದೆ, ನಾಲ್ಕು ಹೆಚ್ಚುವರಿ ದೂರುಗಳನ್ನು ಸಲ್ಲಿಸಿದೆ. ‘ಈ ಹಗರಣದಿಂದಾಗಿ ರಾಜ್ಯದ ಬೊಕ್ಕಸಕ್ಕೆ ತೀವ್ರ ನಷ್ಟವಾಗಿದೆ’ ಎಂದು ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>