<p><strong>ನವದೆಹಲಿ</strong>: ಛತ್ತೀಸಗಢದಲ್ಲಿ ನಡೆದಿದೆ ಎನ್ನಲಾದ ₹2,800 ಕೋಟಿ ಮೊತ್ತದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ವಿವಿಧೆಡೆ ದಾಳಿ ನಡೆಸಿ ₹ 53 ಲಕ್ಷ ನಗದು ಮತ್ತು ₹ 4 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದೆ.</p>.<p>ರಾಯಪುರ, ದುರ್ಗ್, ಭಿಲಾಯ್ ಮತ್ತು ಬಿಲಾಸ್ಪುರಗಳಲ್ಲಿರುವ ಮದ್ಯದ ವ್ಯಾಪಾರಿಗಳು, ಲೆಕ್ಕ ಪರಿಶೋಧಕರು, ಉದ್ಯಮಿಗಳ ಮನೆ ಮತ್ತು ಕಾರ್ಪೊರೇಟ್ ಸಂಸ್ಥೆಗಳ ಕಚೇರಿಗಳ ಮೇಲೆ ಏಪ್ರಿಲ್ 30ರಂದು ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು.</p>.<p>‘₹53 ಲಕ್ಷ ನಗದು, 3.23 ಕೆ.ಜಿ.ಚಿನ್ನದ ಆಭರಣ, ₹ 4.86 ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳನ್ನು ಪರಿಶೀಲನೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಆರೋಪವನ್ನು ಸಾಬೀತುಪಡಿಸುವ ಹಲವು ದಾಖಲೆಗಳು ಮತ್ತು ಡಿಜಿಟಲ್ ಸಾಕ್ಷ್ಯಗಳು ಸಿಕ್ಕಿವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>2019ರಿಂದ 2022ರ ನಡುವೆ ಭೂಪೇಶ್ ಬಾಘೆಲ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ಇ.ಡಿ ಈ ಹಿಂದೆಯೂ ಹಲವು ಬಾರಿ ದಾಳಿ ನಡೆಸಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-51-168790621</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಛತ್ತೀಸಗಢದಲ್ಲಿ ನಡೆದಿದೆ ಎನ್ನಲಾದ ₹2,800 ಕೋಟಿ ಮೊತ್ತದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ವಿವಿಧೆಡೆ ದಾಳಿ ನಡೆಸಿ ₹ 53 ಲಕ್ಷ ನಗದು ಮತ್ತು ₹ 4 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದೆ.</p>.<p>ರಾಯಪುರ, ದುರ್ಗ್, ಭಿಲಾಯ್ ಮತ್ತು ಬಿಲಾಸ್ಪುರಗಳಲ್ಲಿರುವ ಮದ್ಯದ ವ್ಯಾಪಾರಿಗಳು, ಲೆಕ್ಕ ಪರಿಶೋಧಕರು, ಉದ್ಯಮಿಗಳ ಮನೆ ಮತ್ತು ಕಾರ್ಪೊರೇಟ್ ಸಂಸ್ಥೆಗಳ ಕಚೇರಿಗಳ ಮೇಲೆ ಏಪ್ರಿಲ್ 30ರಂದು ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು.</p>.<p>‘₹53 ಲಕ್ಷ ನಗದು, 3.23 ಕೆ.ಜಿ.ಚಿನ್ನದ ಆಭರಣ, ₹ 4.86 ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳನ್ನು ಪರಿಶೀಲನೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಆರೋಪವನ್ನು ಸಾಬೀತುಪಡಿಸುವ ಹಲವು ದಾಖಲೆಗಳು ಮತ್ತು ಡಿಜಿಟಲ್ ಸಾಕ್ಷ್ಯಗಳು ಸಿಕ್ಕಿವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>2019ರಿಂದ 2022ರ ನಡುವೆ ಭೂಪೇಶ್ ಬಾಘೆಲ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ಇ.ಡಿ ಈ ಹಿಂದೆಯೂ ಹಲವು ಬಾರಿ ದಾಳಿ ನಡೆಸಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-51-168790621</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>