<p><strong>ನವದೆಹಲಿ:</strong> ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದ್ದ ₹2,800 ಕೋಟಿ ಮೊತ್ತದ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢದ ಅಬಕಾರಿ ಇಲಾಖೆಯ ನಿವೃತ್ತ ಆಯುಕ್ತ ನಿರಂಜನ್ ದಾಸ್ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಸೇರಿದ ₹100 ಕೋಟಿಗೂ ಅಧಿಕ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ಮಂಗಳವಾರ ತಿಳಿಸಿದೆ.</p>.<p>2019ರಿಂದ 2023ರ ಅವಧಿಯಲ್ಲಿ ಛತ್ತೀಸಗಢದ ಅಬಕಾರಿ ಇಲಾಖೆಯನ್ನು ಸಂಪೂರ್ಣವಾಗಿ ಹೈಜಾಕ್ ಮಾಡಿದ್ದು, ಹಿರಿಯ ಅಧಿಕಾರಿಗಳು, ರಾಜಕಾರಣಿಗಳು ಸೇರಿಕೊಂಡು ಕ್ರಿಮಿನಲ್ ಸಿಂಡಿಕೇಟ್ ರಚಿಸಿದ್ದರು ಎಂದು ಇ.ಡಿ ತಿಳಿಸಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ, ಐಷಾರಾಮಿ ಬಂಗ್ಲೆ, ಫ್ಲ್ಯಾಟ್, ವಾಣಿಜ್ಯ ಕಟ್ಟಡಗಳು, ಕೃಷಿ ಭೂಮಿ ಹಾಗೂ ಜೀವವಿಮೆ, ಷೇರು, ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಸೇರಿದಂತೆ ಹಲವು ಬ್ಯಾಂಕ್ಗಳಲ್ಲಿ ಹೂಡಿಕೆ ಮಾಡಿದ 197 ದಾಖಲೆ ಪತ್ರಗಳನ್ನು ತಾತ್ಕಲಿಕವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಇ.ಡಿ ತಿಳಿಸಿದೆ.</p>.<p>ಇದರಲ್ಲಿ ಐಎಎಸ್ ಅಧಿಕಾರಿ ನಿರಂಜನ್ ದಾಸ್ಗೆ ಸೇರಿದ ₹38.21 ಕೋಟಿ ಆಸ್ತಿ ಸೇರಿದ್ದರೆ, ಉಳಿದವು ಅಬಕಾರಿ ಇಲಾಖೆಯ ಇತರೆ ಅಧಿಕಾರಿಗಳಿಗೆ ಸೇರಿದ 30 ಆಸ್ತಿಗಳಾಗಿವೆ ಎಂದು ಇ.ಡಿಯು ಬಿಡುಗಡೆಗೊಳಿಸಿದ ಪ್ರಕಟಣೆಯಲ್ಲಿ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದ್ದ ₹2,800 ಕೋಟಿ ಮೊತ್ತದ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢದ ಅಬಕಾರಿ ಇಲಾಖೆಯ ನಿವೃತ್ತ ಆಯುಕ್ತ ನಿರಂಜನ್ ದಾಸ್ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಸೇರಿದ ₹100 ಕೋಟಿಗೂ ಅಧಿಕ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ಮಂಗಳವಾರ ತಿಳಿಸಿದೆ.</p>.<p>2019ರಿಂದ 2023ರ ಅವಧಿಯಲ್ಲಿ ಛತ್ತೀಸಗಢದ ಅಬಕಾರಿ ಇಲಾಖೆಯನ್ನು ಸಂಪೂರ್ಣವಾಗಿ ಹೈಜಾಕ್ ಮಾಡಿದ್ದು, ಹಿರಿಯ ಅಧಿಕಾರಿಗಳು, ರಾಜಕಾರಣಿಗಳು ಸೇರಿಕೊಂಡು ಕ್ರಿಮಿನಲ್ ಸಿಂಡಿಕೇಟ್ ರಚಿಸಿದ್ದರು ಎಂದು ಇ.ಡಿ ತಿಳಿಸಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ, ಐಷಾರಾಮಿ ಬಂಗ್ಲೆ, ಫ್ಲ್ಯಾಟ್, ವಾಣಿಜ್ಯ ಕಟ್ಟಡಗಳು, ಕೃಷಿ ಭೂಮಿ ಹಾಗೂ ಜೀವವಿಮೆ, ಷೇರು, ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಸೇರಿದಂತೆ ಹಲವು ಬ್ಯಾಂಕ್ಗಳಲ್ಲಿ ಹೂಡಿಕೆ ಮಾಡಿದ 197 ದಾಖಲೆ ಪತ್ರಗಳನ್ನು ತಾತ್ಕಲಿಕವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಇ.ಡಿ ತಿಳಿಸಿದೆ.</p>.<p>ಇದರಲ್ಲಿ ಐಎಎಸ್ ಅಧಿಕಾರಿ ನಿರಂಜನ್ ದಾಸ್ಗೆ ಸೇರಿದ ₹38.21 ಕೋಟಿ ಆಸ್ತಿ ಸೇರಿದ್ದರೆ, ಉಳಿದವು ಅಬಕಾರಿ ಇಲಾಖೆಯ ಇತರೆ ಅಧಿಕಾರಿಗಳಿಗೆ ಸೇರಿದ 30 ಆಸ್ತಿಗಳಾಗಿವೆ ಎಂದು ಇ.ಡಿಯು ಬಿಡುಗಡೆಗೊಳಿಸಿದ ಪ್ರಕಟಣೆಯಲ್ಲಿ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>