ರಾಯಪುರ/ ಭೋಪಾಲ್: ಛತ್ತೀಸಗಢದ ನೂತನ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರ ಪ್ರಮಾಣ ವಚನ ಸ್ವೀಕಾರವು ಐತಿಹಾಸಿಕ ಸಮಾರಂಭ ಆಗಿರಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅರುಣ್ ಸಾವ್ ಹೇಳಿದ್ದಾರೆ.
ಬುಧವಾರ ಮಧ್ಯಾಹ್ನ 2 ಗಂಟೆಗೆ ರಾಯಪುರದ ವಿಜ್ಞಾನ ಕಾಲೇಜಿನ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 50,000ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ.
ಮೋಹನ್ ಯಾದವ್ ಇಂದು ಪ್ರಮಾಣ: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದು ಇದಕ್ಕಾಗಿ ವ್ಯಾಪಕ ಸಿದ್ಧತೆ ಮಾಡಲಾಗಿದೆ.
ಭೋಪಾಲ್ನ ಲಾಲ್ ಪರೇಡ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ.