<p><strong>ಬಿಜಾಪುರ:</strong> ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ನಕ್ಸಲ್ ಮುಖಂಡ ದಿಲೀಪ್ ಬೇಡ್ಜಾ ಸೇರಿ ಇಬ್ಬರು ನಕ್ಸಲರು ಹತರಾಗಿದ್ದಾರೆ.</p><p>ಇಲ್ಲಿನ ವಾಯವ್ಯ ಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶನಿವಾರ ಬೆಳಗ್ಗೆ ಎನ್ಕೌಂಟರ್ ನಡೆಸಿದ್ದವು. ಈ ವೇಳೆ ನಕ್ಸಲರು ಪ್ರತಿದಾಳಿ ನಡೆಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಈ ಘಟನೆಯಲ್ಲಿ ಪೊಲೀಸರಿಗೆ ಬೇಕಾಗಿದ್ದ ಹಿರಿಯ ನಕ್ಸಲ್ ದಿಲೀಪ್ ಬೇಡ್ಜಾ ಮೃತಪಟ್ಟಿದ್ದಾರೆ. ಹತರಾದ ಮತ್ತೊಬ್ಬ ನಕ್ಸಲ್ ಗುರುತು ಇನ್ನೂ ದೃಢಪಡಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಿಲೀಪ್ ಬೇಡ್ಜಾ ಸುಳಿವು ಕೊಟ್ಟವರಿಗೆ ಪೊಲೀಸ್ ಇಲಾಖೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿತ್ತು.</p><p>ಛತ್ತೀಸಗಢ ಪೊಲೀಸ್ ಇಲಾಖೆಯ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಹಾಗೂ ಜಿಲ್ಲಾ ಮೀಸಲು ಪೊಲೀಸ್ (ಡಿಆರ್ಜಿ) ಸಿಆರ್ಪಿಎಫ್ನ ಕೋಬ್ರಾ ಪಡೆಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.</p><p>ಸ್ಥಳದಲ್ಲಿ ಹಲವು ಎಕೆ–47 ಗನ್ಗಳು, ರೈಫಲ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಜಾಪುರ:</strong> ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ನಕ್ಸಲ್ ಮುಖಂಡ ದಿಲೀಪ್ ಬೇಡ್ಜಾ ಸೇರಿ ಇಬ್ಬರು ನಕ್ಸಲರು ಹತರಾಗಿದ್ದಾರೆ.</p><p>ಇಲ್ಲಿನ ವಾಯವ್ಯ ಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶನಿವಾರ ಬೆಳಗ್ಗೆ ಎನ್ಕೌಂಟರ್ ನಡೆಸಿದ್ದವು. ಈ ವೇಳೆ ನಕ್ಸಲರು ಪ್ರತಿದಾಳಿ ನಡೆಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಈ ಘಟನೆಯಲ್ಲಿ ಪೊಲೀಸರಿಗೆ ಬೇಕಾಗಿದ್ದ ಹಿರಿಯ ನಕ್ಸಲ್ ದಿಲೀಪ್ ಬೇಡ್ಜಾ ಮೃತಪಟ್ಟಿದ್ದಾರೆ. ಹತರಾದ ಮತ್ತೊಬ್ಬ ನಕ್ಸಲ್ ಗುರುತು ಇನ್ನೂ ದೃಢಪಡಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಿಲೀಪ್ ಬೇಡ್ಜಾ ಸುಳಿವು ಕೊಟ್ಟವರಿಗೆ ಪೊಲೀಸ್ ಇಲಾಖೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿತ್ತು.</p><p>ಛತ್ತೀಸಗಢ ಪೊಲೀಸ್ ಇಲಾಖೆಯ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಹಾಗೂ ಜಿಲ್ಲಾ ಮೀಸಲು ಪೊಲೀಸ್ (ಡಿಆರ್ಜಿ) ಸಿಆರ್ಪಿಎಫ್ನ ಕೋಬ್ರಾ ಪಡೆಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.</p><p>ಸ್ಥಳದಲ್ಲಿ ಹಲವು ಎಕೆ–47 ಗನ್ಗಳು, ರೈಫಲ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>