<p><strong>ಬಿಜಾಪುರ</strong>: ನಕ್ಸಲರು ಇರಿಸಿದ ಕಚ್ಚಾ ಬಾಂಬ್ (ಐಇಡಿ) ಸ್ಫೋಟಗೊಂಡು 16 ವರ್ಷದ ಬಾಲಕನೊಬ್ಬ ಗಾಯಗೊಂಡಿರುವ ಘಟನೆ ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.</p>.<p>ಕೊಂಡಪಡ್ಗು ಗ್ರಾಮದ ನಿವಾಸಿಯಾಗಿರುವ ಬಾಲಕ, ಜಾನುವಾರುಗಳನ್ನು ಮೇಯಿಸಲು ಸಂಜೆ ಹತ್ತಿರದ ಅರಣ್ಯ ಪ್ರದೇಶಕ್ಕೆ ತೆರಳಿದಾಗ, ಅಲ್ಲಿದ್ದ ಬಾಂಬ್ ಸ್ಫೋಟಗೊಂಡಿದೆ. ಆತನ ಕಾಲುಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುವ ಭದ್ರತಾ ಸಿಬ್ಬಂದಿ ಇದೇ ಮಾರ್ಗವಾಗಿ ಹೋಗುತ್ತಾರೆ. ಹೀಗಾಗಿ ಅವರನ್ನು ಗುರಿಯಾಗಿಸಿ ನಕ್ಸಲರು ಕಚ್ಚಾ ಬಾಂಬ್ ಇರಿಸುತ್ತಾರೆ ಎಂದು ಪೊಲೀಸರು ತಿಳಿಸಿದರು.</p>.<p>ಹೆಚ್ಚು ಜಾಗರೂಕರಾಗಿರುವಂತೆ ಪೊಲೀಸರು ಸ್ಥಳೀಯ ಜನರಿಗೆ ಪೊಲೀಸರು ಮನವಿ ಮಾಡಿದ್ದಾರೆ. ಅರಣ್ಯ ಪ್ರದೇಶದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು, ವ್ಯಕ್ತಿಗಳು ಕಂಡು ಬಂದರೆ ಕೂಡಲೇ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. </p>.<p>ಜುಲೈ 13ರಂದು ನಡೆದ ಇಂಥದ್ದೇ ಘಟನೆಯೊಂದರಲ್ಲಿ ಬಾಲಕಿ ಸೇರಿದಂತೆ ಮೂವರು ಗಾಯಗೊಂಡಿದ್ದರು. </p>.<p>ರಾಜ್ಯದ 7 ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತರ್ ಪ್ರದೇಶದಲ್ಲಿ, ನಕ್ಸಲರು ಇರಿಸಿದ್ದ ಕಚ್ಚಾ ಬಾಂಬ್ಗಳಿಂದಾಗಿ ಈ ವರ್ಷ ಒಟ್ಟು 25 ಜನರು ಸಾವಿಗೀಡಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಜಾಪುರ</strong>: ನಕ್ಸಲರು ಇರಿಸಿದ ಕಚ್ಚಾ ಬಾಂಬ್ (ಐಇಡಿ) ಸ್ಫೋಟಗೊಂಡು 16 ವರ್ಷದ ಬಾಲಕನೊಬ್ಬ ಗಾಯಗೊಂಡಿರುವ ಘಟನೆ ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.</p>.<p>ಕೊಂಡಪಡ್ಗು ಗ್ರಾಮದ ನಿವಾಸಿಯಾಗಿರುವ ಬಾಲಕ, ಜಾನುವಾರುಗಳನ್ನು ಮೇಯಿಸಲು ಸಂಜೆ ಹತ್ತಿರದ ಅರಣ್ಯ ಪ್ರದೇಶಕ್ಕೆ ತೆರಳಿದಾಗ, ಅಲ್ಲಿದ್ದ ಬಾಂಬ್ ಸ್ಫೋಟಗೊಂಡಿದೆ. ಆತನ ಕಾಲುಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುವ ಭದ್ರತಾ ಸಿಬ್ಬಂದಿ ಇದೇ ಮಾರ್ಗವಾಗಿ ಹೋಗುತ್ತಾರೆ. ಹೀಗಾಗಿ ಅವರನ್ನು ಗುರಿಯಾಗಿಸಿ ನಕ್ಸಲರು ಕಚ್ಚಾ ಬಾಂಬ್ ಇರಿಸುತ್ತಾರೆ ಎಂದು ಪೊಲೀಸರು ತಿಳಿಸಿದರು.</p>.<p>ಹೆಚ್ಚು ಜಾಗರೂಕರಾಗಿರುವಂತೆ ಪೊಲೀಸರು ಸ್ಥಳೀಯ ಜನರಿಗೆ ಪೊಲೀಸರು ಮನವಿ ಮಾಡಿದ್ದಾರೆ. ಅರಣ್ಯ ಪ್ರದೇಶದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು, ವ್ಯಕ್ತಿಗಳು ಕಂಡು ಬಂದರೆ ಕೂಡಲೇ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. </p>.<p>ಜುಲೈ 13ರಂದು ನಡೆದ ಇಂಥದ್ದೇ ಘಟನೆಯೊಂದರಲ್ಲಿ ಬಾಲಕಿ ಸೇರಿದಂತೆ ಮೂವರು ಗಾಯಗೊಂಡಿದ್ದರು. </p>.<p>ರಾಜ್ಯದ 7 ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತರ್ ಪ್ರದೇಶದಲ್ಲಿ, ನಕ್ಸಲರು ಇರಿಸಿದ್ದ ಕಚ್ಚಾ ಬಾಂಬ್ಗಳಿಂದಾಗಿ ಈ ವರ್ಷ ಒಟ್ಟು 25 ಜನರು ಸಾವಿಗೀಡಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>