<p><strong>ಜಗದಲ್ಪುರ:</strong> ಛತ್ತೀಸಗಢದ ಬಸ್ತಾರ್ ಜಿಲ್ಲೆಯಲ್ಲಿ ₹3.95 ಕೋಟಿ ಇನಾಮು ಘೋಷಣೆಯಾಗಿದ್ದ ಒಟ್ಟು 108 ನಕ್ಸಲರು ಶರಣಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. </p><p>ನಕ್ಸಲರ ಅಡಗುತಾಣಗಳಿಂದ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ ₹3.61 ಕೋಟಿ ನಗದು ಮತ್ತು ಸುಮಾರು ₹1.64 ಕೋಟಿ ಮೌಲ್ಯದ ಒಂದು ಕೆ.ಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. </p>.ತೆಲಂಗಾಣ : 130 ನಕ್ಸಲರ ಶರಣಾಗತಿ .ಮಹಾರಾಷ್ಟ್ರ: ಇಬ್ಬರು ನಕ್ಸಲರ ಹತ್ಯೆ, ಭದ್ರತಾ ಸಿಬ್ಬಂದಿ ಹುತಾತ್ಮ.<p>ಇದು ದೇಶದಲ್ಲಿ ನಕ್ಸಲ್ ನಿಗ್ರಹ ಚಟುವಟಿಕೆಗಳಲ್ಲಿ ಒಂದೇ ಸ್ಥಳದಿಂದ ವಶಪಡಿಸಿಕೊಳ್ಳಲಾಗದ ಗರಿಷ್ಠ ಪ್ರಮಾಣದ ನಗದು ಹಾಗೂ ಬೆಲೆಬಾಳುವ ವಸ್ತುಗಳಾಗಿವೆ ಎಂದು ಬಸ್ತಾರ್ ವಲಯದ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p><p>ಶರಣಾದ ನಕ್ಸಲರ ಪೈಕಿ ಆರು ಮಂದಿ ವಿಭಾಗೀಯ ಕಮಾಂಡರ್ಗಳಾಗಿದ್ದು, ಅವರ ಸುಳಿವು ನೀಡಿದವರಿಗೆ ತಲಾ ₹8 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಎಕೆ-47, ಇನ್ಸಾಸ್, ಎಸ್ಎಲ್ಆರ್ ರೈಫಲ್, ಲೈಟ್ ಮೆಷಿನ್ ಗನ್, ರೈಫಲ್, ಬ್ಯಾರೆಲ್ ಗ್ರೆನೇಡ್ ಲಾಂಚರ್ ಸೇರಿದಂತೆ 101 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. </p><p>ಬಿಜಾಪುರದಲ್ಲಿ 37, ದಂತೇವಾಡದಲ್ಲಿ 30, ಸುಕ್ಮಾದಲ್ಲಿ 18, ಬಸ್ತಾರ್ನಲ್ಲಿ 16, ನಾರಾಯಣಪುರದಲ್ಲಿ 4, ಕಾಂಕೇರ್ನಲ್ಲಿ ಮೂವರು ನಕ್ಸಲರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಪೊಲೀಸರ ಮುಂದೆ ಶರಣಾಗಿದ್ದಾರೆ. ಇವರೆಲ್ಲ ದಂಡಕಾರಣ್ಯ ವಿಶೇಷ ವಲಯ ಸಮಿತಿಯ ಸದಸ್ಯರಾಗಿದ್ದರು.</p><p>ದೇಶದಲ್ಲಿ ನಕ್ಸಲ್ ನಿಗ್ರಹಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, 2026ರ ಮಾರ್ಚ್ 31ರ ಗಡುವು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗದಲ್ಪುರ:</strong> ಛತ್ತೀಸಗಢದ ಬಸ್ತಾರ್ ಜಿಲ್ಲೆಯಲ್ಲಿ ₹3.95 ಕೋಟಿ ಇನಾಮು ಘೋಷಣೆಯಾಗಿದ್ದ ಒಟ್ಟು 108 ನಕ್ಸಲರು ಶರಣಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. </p><p>ನಕ್ಸಲರ ಅಡಗುತಾಣಗಳಿಂದ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ ₹3.61 ಕೋಟಿ ನಗದು ಮತ್ತು ಸುಮಾರು ₹1.64 ಕೋಟಿ ಮೌಲ್ಯದ ಒಂದು ಕೆ.ಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. </p>.ತೆಲಂಗಾಣ : 130 ನಕ್ಸಲರ ಶರಣಾಗತಿ .ಮಹಾರಾಷ್ಟ್ರ: ಇಬ್ಬರು ನಕ್ಸಲರ ಹತ್ಯೆ, ಭದ್ರತಾ ಸಿಬ್ಬಂದಿ ಹುತಾತ್ಮ.<p>ಇದು ದೇಶದಲ್ಲಿ ನಕ್ಸಲ್ ನಿಗ್ರಹ ಚಟುವಟಿಕೆಗಳಲ್ಲಿ ಒಂದೇ ಸ್ಥಳದಿಂದ ವಶಪಡಿಸಿಕೊಳ್ಳಲಾಗದ ಗರಿಷ್ಠ ಪ್ರಮಾಣದ ನಗದು ಹಾಗೂ ಬೆಲೆಬಾಳುವ ವಸ್ತುಗಳಾಗಿವೆ ಎಂದು ಬಸ್ತಾರ್ ವಲಯದ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p><p>ಶರಣಾದ ನಕ್ಸಲರ ಪೈಕಿ ಆರು ಮಂದಿ ವಿಭಾಗೀಯ ಕಮಾಂಡರ್ಗಳಾಗಿದ್ದು, ಅವರ ಸುಳಿವು ನೀಡಿದವರಿಗೆ ತಲಾ ₹8 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಎಕೆ-47, ಇನ್ಸಾಸ್, ಎಸ್ಎಲ್ಆರ್ ರೈಫಲ್, ಲೈಟ್ ಮೆಷಿನ್ ಗನ್, ರೈಫಲ್, ಬ್ಯಾರೆಲ್ ಗ್ರೆನೇಡ್ ಲಾಂಚರ್ ಸೇರಿದಂತೆ 101 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. </p><p>ಬಿಜಾಪುರದಲ್ಲಿ 37, ದಂತೇವಾಡದಲ್ಲಿ 30, ಸುಕ್ಮಾದಲ್ಲಿ 18, ಬಸ್ತಾರ್ನಲ್ಲಿ 16, ನಾರಾಯಣಪುರದಲ್ಲಿ 4, ಕಾಂಕೇರ್ನಲ್ಲಿ ಮೂವರು ನಕ್ಸಲರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಪೊಲೀಸರ ಮುಂದೆ ಶರಣಾಗಿದ್ದಾರೆ. ಇವರೆಲ್ಲ ದಂಡಕಾರಣ್ಯ ವಿಶೇಷ ವಲಯ ಸಮಿತಿಯ ಸದಸ್ಯರಾಗಿದ್ದರು.</p><p>ದೇಶದಲ್ಲಿ ನಕ್ಸಲ್ ನಿಗ್ರಹಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, 2026ರ ಮಾರ್ಚ್ 31ರ ಗಡುವು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>