<p><strong>ದಂತೇವಾಡ (ಛತ್ತೀಸಗಢ):</strong> ಛತ್ತೀಸಗಢದ ದಂತೇವಾಡ ಜಿಲ್ಲೆಯಲ್ಲಿ 37 ನಕ್ಸಲರು ಅಧಿಕಾರಿಗಳ ಮುಂದೆ ಭಾನುವಾರ ಶರಣಾಗಿದ್ದಾರೆ. ಇವರಲ್ಲಿ 27 ಜನರ ಸುಳಿವು ನೀಡಿದವರಿಗೆ ಒಟ್ಟಾರೆ ₹65 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p><p>ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಆರಂಭಿಸಿದ ಪುನರ್ವಸತಿ ಯೋಜನೆಯಡಿ 12 ಮಹಿಳೆಯರು ಸೇರಿದಂತೆ ನಕ್ಸಲರು ಹಿರಿಯ ಪೊಲೀಸ್ ಅಧಿಕಾರಿ ಮತ್ತು ಸಿಆರ್ಫಿಎಫ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ದಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರಾಯ್ ತಿಳಿಸಿದ್ದಾರೆ.</p><p>‘ಶರಣಾದವರ ಪೈಕಿ ಅನಿತಾ, ಗೀತಾ, ರಂಜನ್ ಮತ್ತು ಭೀಮ ಅವರ ಸುಳಿವು ನೀಡಿದವರಿಗೆ ತಲಾ ₹8 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಸರ್ಕಾರದ ಪುನರ್ವಸತಿ ನೀತಿಯಡಿ ಶರಣಾದ ನಕ್ಸಲರಿಗೆ ಇತರ ಸೌಲಭ್ಯಗಳೊಂದಿಗೆ ತಲಾ ₹50,000 ಸಹಾಯಧನ ನೀಡಲಾಗುವುದು’ ಎಂದು ಅವರು ಹೇಳಿದರು.</p>.ಆಂಧ್ರಪ್ರದೇಶ: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ.ಆಂಧ್ರಪ್ರದೇಶ: ₹25 ಲಕ್ಷ ಇನಾಮು ಘೊಷಣೆಯಾಗಿದ್ದ ನಕ್ಸಲ್ ದಂಪತಿ ಶರಣು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಂತೇವಾಡ (ಛತ್ತೀಸಗಢ):</strong> ಛತ್ತೀಸಗಢದ ದಂತೇವಾಡ ಜಿಲ್ಲೆಯಲ್ಲಿ 37 ನಕ್ಸಲರು ಅಧಿಕಾರಿಗಳ ಮುಂದೆ ಭಾನುವಾರ ಶರಣಾಗಿದ್ದಾರೆ. ಇವರಲ್ಲಿ 27 ಜನರ ಸುಳಿವು ನೀಡಿದವರಿಗೆ ಒಟ್ಟಾರೆ ₹65 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p><p>ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಆರಂಭಿಸಿದ ಪುನರ್ವಸತಿ ಯೋಜನೆಯಡಿ 12 ಮಹಿಳೆಯರು ಸೇರಿದಂತೆ ನಕ್ಸಲರು ಹಿರಿಯ ಪೊಲೀಸ್ ಅಧಿಕಾರಿ ಮತ್ತು ಸಿಆರ್ಫಿಎಫ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ದಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರಾಯ್ ತಿಳಿಸಿದ್ದಾರೆ.</p><p>‘ಶರಣಾದವರ ಪೈಕಿ ಅನಿತಾ, ಗೀತಾ, ರಂಜನ್ ಮತ್ತು ಭೀಮ ಅವರ ಸುಳಿವು ನೀಡಿದವರಿಗೆ ತಲಾ ₹8 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಸರ್ಕಾರದ ಪುನರ್ವಸತಿ ನೀತಿಯಡಿ ಶರಣಾದ ನಕ್ಸಲರಿಗೆ ಇತರ ಸೌಲಭ್ಯಗಳೊಂದಿಗೆ ತಲಾ ₹50,000 ಸಹಾಯಧನ ನೀಡಲಾಗುವುದು’ ಎಂದು ಅವರು ಹೇಳಿದರು.</p>.ಆಂಧ್ರಪ್ರದೇಶ: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ.ಆಂಧ್ರಪ್ರದೇಶ: ₹25 ಲಕ್ಷ ಇನಾಮು ಘೊಷಣೆಯಾಗಿದ್ದ ನಕ್ಸಲ್ ದಂಪತಿ ಶರಣು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>