ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೋ-ಟಿಬೆಟಿಯನ್ ಬಾರ್ಡರ್‌ ಪೊಲೀಸ್‌ ಶಿಬಿರದಲ್ಲಿ ಕಿತ್ತಾಟ: 6 ಸಿಬ್ಬಂದಿ ಸಾವು

Last Updated 4 ಡಿಸೆಂಬರ್ 2019, 10:09 IST
ಅಕ್ಷರ ಗಾತ್ರ

ಛತ್ತೀಸಗಡ: ಇಲ್ಲಿನ ನಾರಾಯಣ್‌ಪುರಜಿಲ್ಲೆಯ ಕದೇನರ್ ಇಂಡೋ ಟಿಬೆಟಿಯನ್ ಬಾರ್ಡರ್‌ಪೊಲೀಸ್‌ಶಿಬಿರದಲ್ಲಿಸಹೋದ್ಯೋಗಿಗಳ ನಡುವೆ ವಾಗ್ವಾದ ನಡೆದು6 ಮಂದಿ ಸಿಬ್ಬಂದಿ ಗುಂಡಿಗೆ ಬಲಿಯಾಗಿದ್ದಾರೆ. ಈ ಜಗಳದಲ್ಲಿ ಇಬ್ಬರಿಗೆ ಗಾಯಗಳಾಗಿವೆ.

ಜಗಳ ತಾರಕಕ್ಕೇರಿದಾಗ ಸಿಬ್ಬಂದಿಯೊಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಬಸ್ತಾರ್‌ನ ಐಜಿಪಿ ಸುಂದರರಾಜ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಗುಂಡು ಹಾರಿಸಿದ ನಂತರ ಅದೇ ವ್ಯಕ್ತಿಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾರಾಯಣ್‌ಪುರ ಪೊಲೀಸ್ ಅಧಿಕಾರಿ ಮೋಹಿತ್ ಗಾರ್ಗ್ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಜಗಳಕ್ಕೆ ಕಾರಣ ಏನೆಂದು ಸದ್ಯ ತಿಳಿದು ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT