ಆರ್.ಭಾನುಮತಿ, ಎ.ಎಸ್.ಬೋಪಣ್ಣ ಮತ್ತು ಋಷಿಕೇಶ್ ರಾಯ್ ಅವರನ್ನೋಳಗೊಂಡ ಪೀಠ ಜಾಮೀನು ನೀಡಿದೆ.
ಜಾಮೀನು ತಿರಸ್ಕರಿಸಿ ದೆಹಲಿ ಹೈಕೋರ್ಟ್ ಈಚೆಗೆ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಚಿದಂಬರಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅಕ್ಟೋಬರ್ 22ರಂದು ಸಿಬಿಐ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಚಿದಂಬರಂ ಅವರಿಗೆ ಜಾಮೀನು ನೀಡಿತ್ತು. ಅದೇ ವೇಳೆ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತೊಂದು ಅಪರಾಧದಲ್ಲಿ ಅವರನ್ನು ಬಂಧಿಸಿದೆ.