<p>ನವದೆಹಲಿ: ಹೊಸ ಮಸೂದೆಗಳ ಶೀರ್ಷಿಕೆಯಲ್ಲಿ ಹಿಂದಿ ಬಳಕೆ ಹೆಚ್ಚಿರುವ ಕುರಿತಂತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ, ಇದು ಹಿಂದಿ ಮಾತನಾಡದ ಜನರಿಗೆ ಅಪಮಾನ ಎಂದಿದ್ದಾರೆ.</p><p>ಮಸೂದೆ ಅಥವಾ ಕಾಯ್ದೆಗಳ ಹಿಂದಿ ಹೆಸರನ್ನು ಇಂಗ್ಲಿಷ್ ಪದಗಳನ್ನು ಬಳಸಿ ಬರೆಯಲಾಗುತ್ತಿದ್ದು, ಹಿಂದಿ ಭಾಷಿಕರಲ್ಲದ ಜನರ ಹೆಸರಿನ ಮೂಲಕ ಮಸೂದೆಯನ್ನು ಅರ್ಥ ಮಾಡಿಕೊಳ್ಳಲಾರರು ಎಂದಿದ್ದಾರೆ.</p><p>ಸಂಸತ್ತಿನಲ್ಲಿ ಮಂಡಿಸುವ ಮಸೂದೆಗಳ ಹೆಸರಲ್ಲಿ ಹಿಂದಿ ಭಾಷೆಯ ಪದಗಳನ್ನು ಇಂಗ್ಲಿಷ್ನಲ್ಲಿ ಬರೆಯುವುದು ಹೆಚ್ಚಾಗಿದ್ದು, ಇದನ್ನು ನಾನು ವಿರೋಧಿಸುತ್ತೇನೆ ಎಂದಿದ್ದಾರೆ.</p> <p>ಇಲ್ಲಿಯವರೆಗೆ, ಮಸೂದೆಯ ಶೀರ್ಷಿಕೆಯನ್ನು ಇಂಗ್ಲಿಷ್ ಆವೃತ್ತಿಯಲ್ಲಿ ಇಂಗ್ಲಿಷ್ ಪದಗಳಲ್ಲಿ ಮತ್ತು ಹಿಂದಿ ಆವೃತ್ತಿಯಲ್ಲಿ ಹಿಂದಿ ಪದಗಳಲ್ಲಿ ಬರೆಯುವುದು ಪದ್ಧತಿಯಾಗಿತ್ತು. 75 ವರ್ಷಗಳ ಈ ರೂಢಿಯಲ್ಲಿ ಯಾವುದೇ ತೊಂದರೆ ಇಲ್ಲದಿದ್ದಾಗ, ಸರ್ಕಾರ ಏಕೆ ಬದಲಾವಣೆ ಮಾಡಬೇಕು ಎಂದುಅವರು ಪ್ರಶ್ನಿಸಿದ್ದಾರೆ.</p><p>‘ಈ ಬದಲಾವಣೆಯು ಹಿಂದಿ ಮಾತನಾಡದ ಜನರಿಗೆ ಮತ್ತು ಹಿಂದಿ ಹೊರತುಪಡಿಸಿ ಬೇರೆ ಅಧಿಕೃತ ಭಾಷೆಯನ್ನು ಮಾತನಾಡುವ ರಾಜ್ಯಗಳಿಗೆ ಅವಮಾನವಾಗಿದೆ’ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.</p><p>ಇಂಗ್ಲಿಷ್ ಸಹಾಯಕ ಅಧಿಕೃತ ಭಾಷೆಯಾಗಿ ಮಾತ್ರ ಉಳಿಯುತ್ತದೆ ಎಂಬ ಭರವಸೆಯನ್ನು ಹಿಂದಿನ ಸರ್ಕಾರಗಳು ನೀಡಿದ್ದವು. ಆ ಭರವಸೆ ಅಪಾಯದಲ್ಲಿರುವ ಆತಂಕ ಕಾಡುತ್ತಿದೆ ಎಂದು ಚಿದಂಬರಂ ಹೇಳಿದ್ದಾರೆ.</p> .ಮಂಜು ಮುಸುಕಿದ ಯಮುನಾ ಎಕ್ಸ್ಪ್ರೆಸ್ ವೇ; ಅಪಘಾತದಲ್ಲಿ ಉರಿದ ವಾಹನಗಳು,13 ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಹೊಸ ಮಸೂದೆಗಳ ಶೀರ್ಷಿಕೆಯಲ್ಲಿ ಹಿಂದಿ ಬಳಕೆ ಹೆಚ್ಚಿರುವ ಕುರಿತಂತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ, ಇದು ಹಿಂದಿ ಮಾತನಾಡದ ಜನರಿಗೆ ಅಪಮಾನ ಎಂದಿದ್ದಾರೆ.</p><p>ಮಸೂದೆ ಅಥವಾ ಕಾಯ್ದೆಗಳ ಹಿಂದಿ ಹೆಸರನ್ನು ಇಂಗ್ಲಿಷ್ ಪದಗಳನ್ನು ಬಳಸಿ ಬರೆಯಲಾಗುತ್ತಿದ್ದು, ಹಿಂದಿ ಭಾಷಿಕರಲ್ಲದ ಜನರ ಹೆಸರಿನ ಮೂಲಕ ಮಸೂದೆಯನ್ನು ಅರ್ಥ ಮಾಡಿಕೊಳ್ಳಲಾರರು ಎಂದಿದ್ದಾರೆ.</p><p>ಸಂಸತ್ತಿನಲ್ಲಿ ಮಂಡಿಸುವ ಮಸೂದೆಗಳ ಹೆಸರಲ್ಲಿ ಹಿಂದಿ ಭಾಷೆಯ ಪದಗಳನ್ನು ಇಂಗ್ಲಿಷ್ನಲ್ಲಿ ಬರೆಯುವುದು ಹೆಚ್ಚಾಗಿದ್ದು, ಇದನ್ನು ನಾನು ವಿರೋಧಿಸುತ್ತೇನೆ ಎಂದಿದ್ದಾರೆ.</p> <p>ಇಲ್ಲಿಯವರೆಗೆ, ಮಸೂದೆಯ ಶೀರ್ಷಿಕೆಯನ್ನು ಇಂಗ್ಲಿಷ್ ಆವೃತ್ತಿಯಲ್ಲಿ ಇಂಗ್ಲಿಷ್ ಪದಗಳಲ್ಲಿ ಮತ್ತು ಹಿಂದಿ ಆವೃತ್ತಿಯಲ್ಲಿ ಹಿಂದಿ ಪದಗಳಲ್ಲಿ ಬರೆಯುವುದು ಪದ್ಧತಿಯಾಗಿತ್ತು. 75 ವರ್ಷಗಳ ಈ ರೂಢಿಯಲ್ಲಿ ಯಾವುದೇ ತೊಂದರೆ ಇಲ್ಲದಿದ್ದಾಗ, ಸರ್ಕಾರ ಏಕೆ ಬದಲಾವಣೆ ಮಾಡಬೇಕು ಎಂದುಅವರು ಪ್ರಶ್ನಿಸಿದ್ದಾರೆ.</p><p>‘ಈ ಬದಲಾವಣೆಯು ಹಿಂದಿ ಮಾತನಾಡದ ಜನರಿಗೆ ಮತ್ತು ಹಿಂದಿ ಹೊರತುಪಡಿಸಿ ಬೇರೆ ಅಧಿಕೃತ ಭಾಷೆಯನ್ನು ಮಾತನಾಡುವ ರಾಜ್ಯಗಳಿಗೆ ಅವಮಾನವಾಗಿದೆ’ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.</p><p>ಇಂಗ್ಲಿಷ್ ಸಹಾಯಕ ಅಧಿಕೃತ ಭಾಷೆಯಾಗಿ ಮಾತ್ರ ಉಳಿಯುತ್ತದೆ ಎಂಬ ಭರವಸೆಯನ್ನು ಹಿಂದಿನ ಸರ್ಕಾರಗಳು ನೀಡಿದ್ದವು. ಆ ಭರವಸೆ ಅಪಾಯದಲ್ಲಿರುವ ಆತಂಕ ಕಾಡುತ್ತಿದೆ ಎಂದು ಚಿದಂಬರಂ ಹೇಳಿದ್ದಾರೆ.</p> .ಮಂಜು ಮುಸುಕಿದ ಯಮುನಾ ಎಕ್ಸ್ಪ್ರೆಸ್ ವೇ; ಅಪಘಾತದಲ್ಲಿ ಉರಿದ ವಾಹನಗಳು,13 ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>