2014ರ ಲೋಕಸಭೆ ಚುನಾವಣೆಗೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಜೆಪಿ 2013ರಲ್ಲಿ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ನಿತೀಶ್ ಎನ್ಡಿಎಯಿಂದ ಹೊರಬಂದಿದ್ದರು. ನಂತರ, ಆರ್ಜೆಡಿ ಮತ್ತು ಕಾಂಗ್ರೆಸ್ನೊಂದಿಗೆ ಮಹಾಮೈತ್ರಿಕೂಟ ರಚಿಸಿದ ನಿತೀಶ್, 2015 ರಲ್ಲಿ ಮುಖ್ಯಮಂತ್ರಿಯಾಗಿದ್ದರು. 2017 ರಲ್ಲಿ ಆರ್ಜೆಡಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಮೈತ್ರಿ ಮುರಿದು, ಮತ್ತೆ ಎನ್ಡಿಎ ಸೇರಿದ್ದರು. ಮಹಾಮೈತ್ರಿಕೂಟದಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ ಎಂದು ಅವರು ಆರೋಪಿಸಿದ್ದರು.