<p><strong>ಪಾಲಕ್ಕಾಡ್</strong>: ಐದು ವರ್ಷದ ಬಾಲಕಿಯ ಖಾಸಗಿ ಭಾಗಗಳಿಗೆ ಬರೆ ಹಾಕಿರುವ ಅಮಾನವೀಯ ಘಟನೆ ಕೇರಳದ ಪಾಲಕ್ಕಾಡ್ನಲ್ಲಿ ನಡೆದಿದೆ.</p><p>ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕಾಗಿ ಬಾಲಕಿಯ ಖಾಸಗಿ ಭಾಗಗಳಿಗೆ ಆಕೆಯ ಮಲತಾಯಿಯೇ ಬರೆ ಹಾಕಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಈ ಘಟನೆ ಕಳೆದ ವಾರ ನಡೆದಿದೆ. ಅಂಗನವಾಡಿಗೆ ತೆರಳಿದ್ದ ಬಾಲಕಿ ತರಗತಿಯಲ್ಲಿ ಕುಳಿತುಕೊಳ್ಳಲು ಕಷ್ಟಪಡುತ್ತಿದ್ದಳು. ಇದನ್ನು ಗಮನಿಸಿದ ಅಂಗನವಾಡಿ ಶಿಕ್ಷಕಿ ಈ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಬಾಲಕಿ ತನಗಾದ ನೋವನ್ನು ಹೇಳಿಕೊಂಡಿದ್ದಾಳೆ.</p>. ಎಂಇಎಸ್ ಮುಖಂಡ ಶುಭಂ ಶೆಳಕೆ ಗಡೀಪಾರು ಮಾಡಿ: ಕರ್ನಾಟಕ ರಕ್ಷಣಾ ವೇದಿಕೆ.ಪೆಂಕಾಕ್ ಸಿಲಾಟ್ನಲ್ಲಿ ಕಂಚಿನ ಪದಕ: ಪ್ರೋತ್ಸಾಹದ ನಿರೀಕ್ಷೆಯಲ್ಲಿ ಕ್ರೀಡಾಪಟುಗಳು. <p>ಈ ಬಗ್ಗೆ ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.</p><p>ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಹಾಗೂ ಬಾಲ ನ್ಯಾಯ ಕಾಯ್ದೆಗೆ ಸಂಬಂಧಿಸಿದ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. </p><p>ಬಾಲಕಿಯ ತಂದೆಯು ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರಸ್ತುತ ಬಾಲಕಿ ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲ್ಯೂಸಿ) ಆರೈಕೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.ಹೆಣ್ಣೆಂದರೇ ಬೆಚ್ಚಿ ಬೀಳುವ ಈತ 56 ವರ್ಷದಿಂದ ಒಂಟಿ, ಏನಿದು ಸಮಸ್ಯೆ?! .ಯಾದಗಿರಿ: ಮದ್ಯದ ನಶೆಯಲ್ಲಿ ಕ್ರಿಮಿನಾಶಕ ಕುಡಿದು ವ್ಯಕ್ತಿ ಸಾವು.10 ವರ್ಷಗಳಲ್ಲಿ ಮೋದಿ ಆಸ್ತಿ ಶೇ 86, ರಾಹುಲ್ ಗಾಂಧಿ ಆಸ್ತಿ ಶೇ 117 ಏರಿಕೆ.ಸಂವಹನ ಕೊರತೆಯಿಂದ ಭಾರತ–ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ವಿಫಲ: ಲುಟ್ನಿಕ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಲಕ್ಕಾಡ್</strong>: ಐದು ವರ್ಷದ ಬಾಲಕಿಯ ಖಾಸಗಿ ಭಾಗಗಳಿಗೆ ಬರೆ ಹಾಕಿರುವ ಅಮಾನವೀಯ ಘಟನೆ ಕೇರಳದ ಪಾಲಕ್ಕಾಡ್ನಲ್ಲಿ ನಡೆದಿದೆ.</p><p>ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕಾಗಿ ಬಾಲಕಿಯ ಖಾಸಗಿ ಭಾಗಗಳಿಗೆ ಆಕೆಯ ಮಲತಾಯಿಯೇ ಬರೆ ಹಾಕಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಈ ಘಟನೆ ಕಳೆದ ವಾರ ನಡೆದಿದೆ. ಅಂಗನವಾಡಿಗೆ ತೆರಳಿದ್ದ ಬಾಲಕಿ ತರಗತಿಯಲ್ಲಿ ಕುಳಿತುಕೊಳ್ಳಲು ಕಷ್ಟಪಡುತ್ತಿದ್ದಳು. ಇದನ್ನು ಗಮನಿಸಿದ ಅಂಗನವಾಡಿ ಶಿಕ್ಷಕಿ ಈ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಬಾಲಕಿ ತನಗಾದ ನೋವನ್ನು ಹೇಳಿಕೊಂಡಿದ್ದಾಳೆ.</p>. ಎಂಇಎಸ್ ಮುಖಂಡ ಶುಭಂ ಶೆಳಕೆ ಗಡೀಪಾರು ಮಾಡಿ: ಕರ್ನಾಟಕ ರಕ್ಷಣಾ ವೇದಿಕೆ.ಪೆಂಕಾಕ್ ಸಿಲಾಟ್ನಲ್ಲಿ ಕಂಚಿನ ಪದಕ: ಪ್ರೋತ್ಸಾಹದ ನಿರೀಕ್ಷೆಯಲ್ಲಿ ಕ್ರೀಡಾಪಟುಗಳು. <p>ಈ ಬಗ್ಗೆ ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.</p><p>ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಹಾಗೂ ಬಾಲ ನ್ಯಾಯ ಕಾಯ್ದೆಗೆ ಸಂಬಂಧಿಸಿದ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. </p><p>ಬಾಲಕಿಯ ತಂದೆಯು ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರಸ್ತುತ ಬಾಲಕಿ ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲ್ಯೂಸಿ) ಆರೈಕೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.ಹೆಣ್ಣೆಂದರೇ ಬೆಚ್ಚಿ ಬೀಳುವ ಈತ 56 ವರ್ಷದಿಂದ ಒಂಟಿ, ಏನಿದು ಸಮಸ್ಯೆ?! .ಯಾದಗಿರಿ: ಮದ್ಯದ ನಶೆಯಲ್ಲಿ ಕ್ರಿಮಿನಾಶಕ ಕುಡಿದು ವ್ಯಕ್ತಿ ಸಾವು.10 ವರ್ಷಗಳಲ್ಲಿ ಮೋದಿ ಆಸ್ತಿ ಶೇ 86, ರಾಹುಲ್ ಗಾಂಧಿ ಆಸ್ತಿ ಶೇ 117 ಏರಿಕೆ.ಸಂವಹನ ಕೊರತೆಯಿಂದ ಭಾರತ–ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ವಿಫಲ: ಲುಟ್ನಿಕ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>