<p><strong>ನವದೆಹಲಿ:</strong> ಬಾಲಕನ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ದೆಹಲಿ ನ್ಯಾಯಾಲಯವೊಂದು 15 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದು, ಬಾಲಕಿಯರು ಮಾತ್ರವೇ ಇಂಥ ಹೀನ ಅಪರಾಧಗಳಿಗೆ ಒಳಗಾಗುತ್ತಾರೆ ಎಂಬುದು ‘ಕಟ್ಟುಕತೆ’ ಎಂದು ಅಭಿಪ್ರಾಯಪಟ್ಟಿದೆ.</p>.<p>ಘಟನೆಯು 2019ರಲ್ಲಿ ನಡೆದಿತ್ತು. ಹೆಚ್ಚವರಿ ಸೆಪನ್ಸ್ ನ್ಯಾಯಾಧೀಶ ಅನು ಅಗರ್ವಾಲ್ ಅವರು ಪ್ರಕರಣದ ವಿಚಾರಣೆ ನಡೆಸಿದರು. ಪೋಕ್ಸೊ ಕಾಯ್ದೆಯ ಸೆಕ್ಷನ್ 6 (ಬಲವಂತದ ಲೈಂಗಿಕ ದೌರ್ಜನ್ಯ) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377ರ (ಅಸ್ವಾಭಾವಿಕ ಅಪರಾಧ) ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಒಂದು ತಿಂಗಳಲ್ಲಿ ₹2 ಲಕ್ಷ ಪರಿಹಾರ ನೀಡುವಂತೆಯೂ ಸೂಚಿಸಲಾಗಿದೆ.</p>.<p>‘ಈ ಸಮಾಜವು ತೋಳ್ಬಲವನ್ನು ಭಾವನಾತ್ಮಕ ಶಕ್ತಿಯನ್ನಾಗಿ ತಪ್ಪಾಗಿ ಅರ್ಥೈಸಿದೆ. ಈ ಕಾರಣದಿಂದ ಇಂಥ ಅಪರಾಧ ಕೃತ್ಯಗಳಲ್ಲಿ ಸಂತ್ರಸ್ತರಾಗುವ ಬಾಲಕರು ಹೆಚ್ಚಿನ ಮಾನಸಿಕ ತುಮುಲಕ್ಕೆ ಒಳಗಾಗುತ್ತಾರೆ. ನಮಗೆ ಶಕ್ತಿಯಿಲ್ಲ ಎಂದುಕೊಳ್ಳುತ್ತಾರೆ. ನಾಚಿಕೆ ಪಟ್ಟುಕೊಳ್ಳುತ್ತಾರೆ’ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.</p>.<p>‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಂಥ ಪ್ರಕರಣಗಳಲ್ಲಿ ಶೇ 54.68ರಷ್ಟು ಸಂತ್ರಸ್ತರು ಬಾಲಕರೇ ಆಗಿದ್ದಾರೆ’ ಎನ್ನುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ನೀಡಿದ ಮಾಹಿತಿಯನ್ನು ವಿಚಾರಣೆ ವೇಳೆ, ಪಬ್ಲಿಕ್ ಪ್ರಾಸಿಕ್ಯೂಟರ್ ಅರುಣ್ ಕೆ.ವಿ. ನ್ಯಾಯಾಲಯದ ಮುಂದಿಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಾಲಕನ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ದೆಹಲಿ ನ್ಯಾಯಾಲಯವೊಂದು 15 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದು, ಬಾಲಕಿಯರು ಮಾತ್ರವೇ ಇಂಥ ಹೀನ ಅಪರಾಧಗಳಿಗೆ ಒಳಗಾಗುತ್ತಾರೆ ಎಂಬುದು ‘ಕಟ್ಟುಕತೆ’ ಎಂದು ಅಭಿಪ್ರಾಯಪಟ್ಟಿದೆ.</p>.<p>ಘಟನೆಯು 2019ರಲ್ಲಿ ನಡೆದಿತ್ತು. ಹೆಚ್ಚವರಿ ಸೆಪನ್ಸ್ ನ್ಯಾಯಾಧೀಶ ಅನು ಅಗರ್ವಾಲ್ ಅವರು ಪ್ರಕರಣದ ವಿಚಾರಣೆ ನಡೆಸಿದರು. ಪೋಕ್ಸೊ ಕಾಯ್ದೆಯ ಸೆಕ್ಷನ್ 6 (ಬಲವಂತದ ಲೈಂಗಿಕ ದೌರ್ಜನ್ಯ) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377ರ (ಅಸ್ವಾಭಾವಿಕ ಅಪರಾಧ) ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಒಂದು ತಿಂಗಳಲ್ಲಿ ₹2 ಲಕ್ಷ ಪರಿಹಾರ ನೀಡುವಂತೆಯೂ ಸೂಚಿಸಲಾಗಿದೆ.</p>.<p>‘ಈ ಸಮಾಜವು ತೋಳ್ಬಲವನ್ನು ಭಾವನಾತ್ಮಕ ಶಕ್ತಿಯನ್ನಾಗಿ ತಪ್ಪಾಗಿ ಅರ್ಥೈಸಿದೆ. ಈ ಕಾರಣದಿಂದ ಇಂಥ ಅಪರಾಧ ಕೃತ್ಯಗಳಲ್ಲಿ ಸಂತ್ರಸ್ತರಾಗುವ ಬಾಲಕರು ಹೆಚ್ಚಿನ ಮಾನಸಿಕ ತುಮುಲಕ್ಕೆ ಒಳಗಾಗುತ್ತಾರೆ. ನಮಗೆ ಶಕ್ತಿಯಿಲ್ಲ ಎಂದುಕೊಳ್ಳುತ್ತಾರೆ. ನಾಚಿಕೆ ಪಟ್ಟುಕೊಳ್ಳುತ್ತಾರೆ’ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.</p>.<p>‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಂಥ ಪ್ರಕರಣಗಳಲ್ಲಿ ಶೇ 54.68ರಷ್ಟು ಸಂತ್ರಸ್ತರು ಬಾಲಕರೇ ಆಗಿದ್ದಾರೆ’ ಎನ್ನುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ನೀಡಿದ ಮಾಹಿತಿಯನ್ನು ವಿಚಾರಣೆ ವೇಳೆ, ಪಬ್ಲಿಕ್ ಪ್ರಾಸಿಕ್ಯೂಟರ್ ಅರುಣ್ ಕೆ.ವಿ. ನ್ಯಾಯಾಲಯದ ಮುಂದಿಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>