<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿರುವ ತಾರಕೇಶ್ವರ ಎಂಬಲ್ಲಿ ನಾಲ್ಕು ವರ್ಷದ ಮಗುವನ್ನು ರೈಲ್ವೆ ಶೆಡ್ನಿಂದ ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.</p>.ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ಕಾರಿನ ಮೇಲೆ ದಾಳಿ: ಆರೋಪ.<p>ರೈಲ್ವೆ ಶೆಡ್ನಲ್ಲಿ ಅಜ್ಜಿಯ ಪಕ್ಕದಲ್ಲಿ ಮಲಗಿದ್ದ ಮಗುವನ್ನು ಅಪಹರಿಸಿ ಕೃತ್ಯ ಎಸಗಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಶನಿವಾರ ಮಧ್ಯಾಹ್ನ, ಸಮೀಪದ ನಾಲೆಯ ಬಳಿ ಪ್ರಜ್ಞೆ ರಹಿತವಾಗಿ ಬಿದ್ದಿದ್ದ ಮಗುವಿನ ದೇಹದಲ್ಲಿ ಗಾಯದ ಗುರತುಗಳಿದ್ದವು ಎಂದು ಅವರು ಹೇಳಿದ್ದಾರೆ.</p><p>ಬಂಜಾರ ಸಮುದಾಯಕ್ಕೆ ಸೇರಿದ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಳಿಕ ಚಂದನನಗರ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಎಲ್ಲರಿಗೂ SIR ನಮೂನೆ ಸಿಗುವವರೆಗೆ ನಾನು ಅರ್ಜಿ ಭರ್ತಿ ಮಾಡಲ್ಲ: ಮಮತಾ ಬ್ಯಾನರ್ಜಿ.<p>ಏತನ್ಮಧ್ಯೆ,ತಾರಕೇಶ್ವರ ಠಾಣೆಯ ಪೊಲೀಸರು ಆರಂಭದಲ್ಲಿ ಘಟನೆಯ ಬಗ್ಗೆ ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.</p><p>‘ಸತ್ಯವನ್ನು ನಿಗ್ರಹಿಸುವ ಮೂಲಕ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ನಕಲಿ ಚಿತ್ರಣವನ್ನು ರಕ್ಷಿಸಲು ಅಪರಾಧವನ್ನು ಕಡಗಣಿಸಲಾಗುತ್ತಿದೆ’ ಎಂದು ಅವರು ಎಕ್ಸ್ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.</p><p>‘ಮಮತಾ ಬ್ಯಾನರ್ಜಿಯವರೇ ನೀವು ವಿಫಲ ಮುಖ್ಯಮಂತ್ರಿ. ನಿಮ್ಮ ಆಡಳಿತದಲ್ಲಿ ಪಶ್ಚಿಮ ಬಂಗಾಳದ ಕಾನೂನು ಮತ್ತು ಸುವ್ಯವಸ್ಥೆ ನೆಲಕಚ್ಚಿದೆ’ ಎಂದು ಅವರು ಹೇಳಿದ್ದಾರೆ.</p> .ಎಸ್ಐಆರ್ ವಿರುದ್ಧ ಬೀದಿಗಿಳಿದ ಮಮತಾ ಬ್ಯಾನರ್ಜಿ: 3.8 ಕಿ.ಮೀ ಕಾಲ್ನಡಿಗೆ ಜಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿರುವ ತಾರಕೇಶ್ವರ ಎಂಬಲ್ಲಿ ನಾಲ್ಕು ವರ್ಷದ ಮಗುವನ್ನು ರೈಲ್ವೆ ಶೆಡ್ನಿಂದ ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.</p>.ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ಕಾರಿನ ಮೇಲೆ ದಾಳಿ: ಆರೋಪ.<p>ರೈಲ್ವೆ ಶೆಡ್ನಲ್ಲಿ ಅಜ್ಜಿಯ ಪಕ್ಕದಲ್ಲಿ ಮಲಗಿದ್ದ ಮಗುವನ್ನು ಅಪಹರಿಸಿ ಕೃತ್ಯ ಎಸಗಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಶನಿವಾರ ಮಧ್ಯಾಹ್ನ, ಸಮೀಪದ ನಾಲೆಯ ಬಳಿ ಪ್ರಜ್ಞೆ ರಹಿತವಾಗಿ ಬಿದ್ದಿದ್ದ ಮಗುವಿನ ದೇಹದಲ್ಲಿ ಗಾಯದ ಗುರತುಗಳಿದ್ದವು ಎಂದು ಅವರು ಹೇಳಿದ್ದಾರೆ.</p><p>ಬಂಜಾರ ಸಮುದಾಯಕ್ಕೆ ಸೇರಿದ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಳಿಕ ಚಂದನನಗರ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಎಲ್ಲರಿಗೂ SIR ನಮೂನೆ ಸಿಗುವವರೆಗೆ ನಾನು ಅರ್ಜಿ ಭರ್ತಿ ಮಾಡಲ್ಲ: ಮಮತಾ ಬ್ಯಾನರ್ಜಿ.<p>ಏತನ್ಮಧ್ಯೆ,ತಾರಕೇಶ್ವರ ಠಾಣೆಯ ಪೊಲೀಸರು ಆರಂಭದಲ್ಲಿ ಘಟನೆಯ ಬಗ್ಗೆ ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.</p><p>‘ಸತ್ಯವನ್ನು ನಿಗ್ರಹಿಸುವ ಮೂಲಕ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ನಕಲಿ ಚಿತ್ರಣವನ್ನು ರಕ್ಷಿಸಲು ಅಪರಾಧವನ್ನು ಕಡಗಣಿಸಲಾಗುತ್ತಿದೆ’ ಎಂದು ಅವರು ಎಕ್ಸ್ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.</p><p>‘ಮಮತಾ ಬ್ಯಾನರ್ಜಿಯವರೇ ನೀವು ವಿಫಲ ಮುಖ್ಯಮಂತ್ರಿ. ನಿಮ್ಮ ಆಡಳಿತದಲ್ಲಿ ಪಶ್ಚಿಮ ಬಂಗಾಳದ ಕಾನೂನು ಮತ್ತು ಸುವ್ಯವಸ್ಥೆ ನೆಲಕಚ್ಚಿದೆ’ ಎಂದು ಅವರು ಹೇಳಿದ್ದಾರೆ.</p> .ಎಸ್ಐಆರ್ ವಿರುದ್ಧ ಬೀದಿಗಿಳಿದ ಮಮತಾ ಬ್ಯಾನರ್ಜಿ: 3.8 ಕಿ.ಮೀ ಕಾಲ್ನಡಿಗೆ ಜಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>