<p><strong>ಡೆಹ್ರಾಡೂನ್</strong>: ಮಕ್ಕಳ ಕಳ್ಳಸಾಗಣೆಯಲ್ಲಿ ತೊಡಗಿದ್ದ ಗ್ಯಾಂಗ್ ಅನ್ನು ಉತ್ತರ ಪ್ರದೇಶ ಪೊಲೀಸರು ಬೇಧಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಜನವರಿ 2ರಂದು ಯಮುನಾ ಕಾಲೋನಿಯ ನಿವಾಸಿ ರೀನಾ ಎಂಬುವರು, ತಮ್ಮ ಇಬ್ಬರು ಮಕ್ಕಳಾದ ಆಕಾಶ್ (5) ಮತ್ತು ವಿಕಾಸ್ (2) ಅಪಹರಣವಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು ಎಂದು ಡೆಹ್ರಾಡೂನ್ ಹಿರಿಯ ಪೊಲೀಸ್ ಅಧೀಕ್ಷಕ ಅಜಯ್ ಸಿಂಗ್ ಹೇಳಿದ್ದಾರೆ.</p><p>ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಅಪಹರಣಕಾರರಲ್ಲಿ ಒಬ್ಬರು ಆಕಾಶ್ನನ್ನು ಯಮುನಾ ಕಾಲೋನಿಯ ಗೇಟ್ ಬಳಿ ತಂದು ಬಿಟ್ಟು ಹೋಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ರೀನಾ ಅವರ ಸೋದರ ಸಂಬಂಧಿ ರಾಕೇಶ್ (52) ಎಂಬುವರು ಅವರ ಮನೆಗೆ ಆಗಾಗ್ಗೆ ಭೇಟಿ ನೀಡುತ್ತಿದ್ದು, ಜನವರಿ 2ರ ಸಂಜೆ ಕಾಲೋನಿ ಗೇಟ್ ಬಳಿ ಆಕಾಶ್ನನ್ನು ವಾಹನದಿಂದ ಇಳಿಸುವುದನ್ನು ಕೆಲವರು ನೋಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದರು. ಈ ಕುರಿತು ಪೊಲೀಸರು ತನಿಖೆ ನಡೆಸಿದಾಗ, ರಾಕೇಶ್ ತನ್ನೊಂದಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ರಾಹುಲ್ ಮತ್ತು ಅವರ ಮಗಳು ತಾನಿಯಾ ಎಂಬುವವರ ಜೊತೆಗೂಡಿ ಮಕ್ಕಳನ್ನು ಅಪಹರಿಸಿರುವುದು ತಿಳಿದು ಬಂದಿದೆ ಎಂದು ಅಜಯ್ ಹೇಳಿದ್ದಾರೆ.</p><p>ದೂರಿನ ಬಗ್ಗೆ ತಿಳಿಯುತ್ತಿದ್ದಂತೆ ಮೂವರು ಆರೋಪಿಗಳು ಪರಾರಿಯಾಗಿದ್ದರು. ರಾಕೇಶ್ ಮತ್ತು ತಾನಿಯಾ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ, ಆದರೆ, ರಾಹುಲ್ ಪರಾರಿಯಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.</p><p>ಮತ್ತೊಂದು ಮಗು ವಿಕಾಸ್ನನ್ನು ಪ್ರಿಯಾಂಕಾ ಮತ್ತು ಸ್ಯಾಂಟಿ ಎಂಬ ಅಣ್ಣ–ತಂಗಿ ಜೋಡಿಗೆ ₹2 ಲಕ್ಷಕ್ಕೆ ಮಾರಾಟ ಮಾಡಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ಬಹಿರಂಗಪಡಿಸಿದ್ದಾರೆ. ಬಳಿಕ ಅವರನ್ನೂ ಬಂಧಿಸಲಾಯಿತು. ಮಗುವನ್ನು ರಕ್ಷಿಸಲಾಗಿದೆ ಎಂದು ಅಜಯ್ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್</strong>: ಮಕ್ಕಳ ಕಳ್ಳಸಾಗಣೆಯಲ್ಲಿ ತೊಡಗಿದ್ದ ಗ್ಯಾಂಗ್ ಅನ್ನು ಉತ್ತರ ಪ್ರದೇಶ ಪೊಲೀಸರು ಬೇಧಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಜನವರಿ 2ರಂದು ಯಮುನಾ ಕಾಲೋನಿಯ ನಿವಾಸಿ ರೀನಾ ಎಂಬುವರು, ತಮ್ಮ ಇಬ್ಬರು ಮಕ್ಕಳಾದ ಆಕಾಶ್ (5) ಮತ್ತು ವಿಕಾಸ್ (2) ಅಪಹರಣವಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು ಎಂದು ಡೆಹ್ರಾಡೂನ್ ಹಿರಿಯ ಪೊಲೀಸ್ ಅಧೀಕ್ಷಕ ಅಜಯ್ ಸಿಂಗ್ ಹೇಳಿದ್ದಾರೆ.</p><p>ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಅಪಹರಣಕಾರರಲ್ಲಿ ಒಬ್ಬರು ಆಕಾಶ್ನನ್ನು ಯಮುನಾ ಕಾಲೋನಿಯ ಗೇಟ್ ಬಳಿ ತಂದು ಬಿಟ್ಟು ಹೋಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ರೀನಾ ಅವರ ಸೋದರ ಸಂಬಂಧಿ ರಾಕೇಶ್ (52) ಎಂಬುವರು ಅವರ ಮನೆಗೆ ಆಗಾಗ್ಗೆ ಭೇಟಿ ನೀಡುತ್ತಿದ್ದು, ಜನವರಿ 2ರ ಸಂಜೆ ಕಾಲೋನಿ ಗೇಟ್ ಬಳಿ ಆಕಾಶ್ನನ್ನು ವಾಹನದಿಂದ ಇಳಿಸುವುದನ್ನು ಕೆಲವರು ನೋಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದರು. ಈ ಕುರಿತು ಪೊಲೀಸರು ತನಿಖೆ ನಡೆಸಿದಾಗ, ರಾಕೇಶ್ ತನ್ನೊಂದಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ರಾಹುಲ್ ಮತ್ತು ಅವರ ಮಗಳು ತಾನಿಯಾ ಎಂಬುವವರ ಜೊತೆಗೂಡಿ ಮಕ್ಕಳನ್ನು ಅಪಹರಿಸಿರುವುದು ತಿಳಿದು ಬಂದಿದೆ ಎಂದು ಅಜಯ್ ಹೇಳಿದ್ದಾರೆ.</p><p>ದೂರಿನ ಬಗ್ಗೆ ತಿಳಿಯುತ್ತಿದ್ದಂತೆ ಮೂವರು ಆರೋಪಿಗಳು ಪರಾರಿಯಾಗಿದ್ದರು. ರಾಕೇಶ್ ಮತ್ತು ತಾನಿಯಾ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ, ಆದರೆ, ರಾಹುಲ್ ಪರಾರಿಯಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.</p><p>ಮತ್ತೊಂದು ಮಗು ವಿಕಾಸ್ನನ್ನು ಪ್ರಿಯಾಂಕಾ ಮತ್ತು ಸ್ಯಾಂಟಿ ಎಂಬ ಅಣ್ಣ–ತಂಗಿ ಜೋಡಿಗೆ ₹2 ಲಕ್ಷಕ್ಕೆ ಮಾರಾಟ ಮಾಡಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ಬಹಿರಂಗಪಡಿಸಿದ್ದಾರೆ. ಬಳಿಕ ಅವರನ್ನೂ ಬಂಧಿಸಲಾಯಿತು. ಮಗುವನ್ನು ರಕ್ಷಿಸಲಾಗಿದೆ ಎಂದು ಅಜಯ್ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>