<p><strong>ಮುಂಬೈ</strong>: ಮಕ್ಕಳ ಕಳ್ಳಸಾಗಣೆ ಅತ್ಯಂತ ಗಂಭೀರ ಮತ್ತು ಘೋರ ಶೋಷಣೆಗಳಲ್ಲಿ ಒಂದಾಗಿದೆ. ಇದು ಮಗು ಮತ್ತು ಅದರ ಕುಟುಂಬದ ಮೇಲೆ ಪರಿಣಾಮ ಬೀರುವುದಲ್ಲದೆ, ಸಮಾಜದ ವ್ಯವಸ್ಥೆಗೂ ಧಕ್ಕೆ ಉಂಟು ಮಾಡುತ್ತದೆ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.</p>.<p>ಹತ್ತು ತಿಂಗಳ ಮಗು ಅಪಹರಣ ಪ್ರಕರಣದಲ್ಲಿ ಬಂಧಿತ ವ್ಯಕ್ತಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ. </p>.<p>2021ರ ಆಗಸ್ಟ್ನಲ್ಲಿ ಉಪನಗರ ಬಾಂದ್ರಾದ ಫುಟ್ಪಾತ್ನಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಅಪಹರಿಸಲಾಗಿತ್ತು. ಪೊಲೀಸರ ಪ್ರಕಾರ, ಆರೋಪಿ ಪರಂಡಮ್ ಗುಡೆಂಟಿ ಎಂಬಾತ ಮಗುವನ್ನು ತೆಲಂಗಾಣದ ಮಕ್ಕಳಿಲ್ಲದ ದಂಪತಿಗೆ ₹1.05 ಲಕ್ಷಕ್ಕೆ ಮಾರಾಟ ಮಾಡಿದ್ದಾನೆ.</p>.<p>ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಅವರ ಏಕಸದಸ್ಯ ಪೀಠವು ಫುಟ್ಪಾತ್ ನಿವಾಸಿಗಳು, ವಿಶೇಷವಾಗಿ ಬೀದಿ ಮಕ್ಕಳು ಸಮಾಜದ ಅತ್ಯಂತ ದುರ್ಬಲ ವರ್ಗದವರಾಗಿದ್ದು, ಶೋಷಣೆಗೆ ಒಳಗಾಗುತ್ತಾರೆ ಎಂದು ಹೇಳಿದೆ.</p>.<p>ಅಪರಾಧದ ಗಂಭೀರತೆ ಪರಿಗಣಿಸಿ ಆರೋಪಿಗೆ ಜಾಮೀನು ನೀಡುವುದಿಲ್ಲ ಎಂದು ಹೇಳಿದೆ. </p>.<p>ಗುಡೆಂಟಿ ವಿರುದ್ಧ ಕ್ರಿಮಿನಲ್ ಪಿತೂರಿ, ಅಪಹರಣ, ಅಕ್ರಮ ಬಂಧನ ಮತ್ತು ಕಳ್ಳಸಾಗಣೆ ಆರೋಪಗಳ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಸಲ್ಲಿಸಿದ ಮಾಹಿತಿ ಪ್ರಕಾರ ಗುಡೆಂಟಿ ಮಕ್ಕಳ ಅಪಹರಣ ಮತ್ತು ಮಾರಾಟದ ದಂಧೆಯಲ್ಲಿ ಭಾಗಿಯಾಗಿದ್ದಾನೆ ಎಂಬುದನ್ನು ಸೂಚಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಕ್ಕಳ ಕಳ್ಳಸಾಗಣೆ ಅತ್ಯಂತ ಗಂಭೀರ ಮತ್ತು ಘೋರ ಶೋಷಣೆಗಳಲ್ಲಿ ಒಂದಾಗಿದೆ. ಇದು ಮಗು ಮತ್ತು ಅದರ ಕುಟುಂಬದ ಮೇಲೆ ಪರಿಣಾಮ ಬೀರುವುದಲ್ಲದೆ, ಸಮಾಜದ ವ್ಯವಸ್ಥೆಗೂ ಧಕ್ಕೆ ಉಂಟು ಮಾಡುತ್ತದೆ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.</p>.<p>ಹತ್ತು ತಿಂಗಳ ಮಗು ಅಪಹರಣ ಪ್ರಕರಣದಲ್ಲಿ ಬಂಧಿತ ವ್ಯಕ್ತಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ. </p>.<p>2021ರ ಆಗಸ್ಟ್ನಲ್ಲಿ ಉಪನಗರ ಬಾಂದ್ರಾದ ಫುಟ್ಪಾತ್ನಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಅಪಹರಿಸಲಾಗಿತ್ತು. ಪೊಲೀಸರ ಪ್ರಕಾರ, ಆರೋಪಿ ಪರಂಡಮ್ ಗುಡೆಂಟಿ ಎಂಬಾತ ಮಗುವನ್ನು ತೆಲಂಗಾಣದ ಮಕ್ಕಳಿಲ್ಲದ ದಂಪತಿಗೆ ₹1.05 ಲಕ್ಷಕ್ಕೆ ಮಾರಾಟ ಮಾಡಿದ್ದಾನೆ.</p>.<p>ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಅವರ ಏಕಸದಸ್ಯ ಪೀಠವು ಫುಟ್ಪಾತ್ ನಿವಾಸಿಗಳು, ವಿಶೇಷವಾಗಿ ಬೀದಿ ಮಕ್ಕಳು ಸಮಾಜದ ಅತ್ಯಂತ ದುರ್ಬಲ ವರ್ಗದವರಾಗಿದ್ದು, ಶೋಷಣೆಗೆ ಒಳಗಾಗುತ್ತಾರೆ ಎಂದು ಹೇಳಿದೆ.</p>.<p>ಅಪರಾಧದ ಗಂಭೀರತೆ ಪರಿಗಣಿಸಿ ಆರೋಪಿಗೆ ಜಾಮೀನು ನೀಡುವುದಿಲ್ಲ ಎಂದು ಹೇಳಿದೆ. </p>.<p>ಗುಡೆಂಟಿ ವಿರುದ್ಧ ಕ್ರಿಮಿನಲ್ ಪಿತೂರಿ, ಅಪಹರಣ, ಅಕ್ರಮ ಬಂಧನ ಮತ್ತು ಕಳ್ಳಸಾಗಣೆ ಆರೋಪಗಳ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಸಲ್ಲಿಸಿದ ಮಾಹಿತಿ ಪ್ರಕಾರ ಗುಡೆಂಟಿ ಮಕ್ಕಳ ಅಪಹರಣ ಮತ್ತು ಮಾರಾಟದ ದಂಧೆಯಲ್ಲಿ ಭಾಗಿಯಾಗಿದ್ದಾನೆ ಎಂಬುದನ್ನು ಸೂಚಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>