<p><strong>ನವದೆಹಲಿ</strong>: ಗಡಿಯಲ್ಲಿನ ವಿವಾದ ಪರಿಹರಿಸುವ ಮಾತುಕತೆಗಾಗಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಸೋಮವಾರ ಭಾರತಕ್ಕೆ ಬರಲಿದ್ದಾರೆ.</p>.<p>ಗ್ಯಾಲ್ವನ್ ಕಣಿವೆಯಲ್ಲಿ 2020ರಲ್ಲಿ ನಡೆದ ಘರ್ಷಣೆಯ ನಂತರ ಎರಡೂ ದೇಶಗಳ ನಡುವಿನ ಬಾಂಧವ್ಯವನ್ನು ವೃದ್ಧಿಗೊಳಿಸುವ ಮಾತುಕತೆಯಲ್ಲಿ ಅವರು ಭಾಗಿಯಾಗಲಿದ್ದಾರೆ.</p>.<p>ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ 50ಕ್ಕೆ ಹೆಚ್ಚಿಸಿದ ನಂತರ, ಭಾರತ– ಅಮೆರಿಕದ ನಡುವಿನ ಸಂಬಂಧದಲ್ಲಿ ತುಸು ಬಿರುಕು ಕಾಣಿಸಿಕೊಂಡಿರುವ ಹೊತ್ತಿನಲ್ಲಿ ವಾಂಗ್ ಎರಡು ದಿನ ಭೇಟಿ ನೀಡುತ್ತಿರುವುದು ಮಹತ್ವದ ವಿದ್ಯಮಾನವಾಗಿದೆ. </p>.<p>ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಜತೆ ವಾಂಗ್ ಗಡಿ ಸಮಸ್ಯೆ ಕುರಿತಂತೆ ಚರ್ಚಿಸಲಿದ್ದಾರೆ. ಇದು 24ನೇ ಸುತ್ತಿನ ಚರ್ಚೆಯಾಗಿದೆ. ಈ ಇಬ್ಬರೂ ಗಡಿ ಸಮಸ್ಯೆಯ ಪರಿಹಾರಕ್ಕಾಗಿ ಎರಡೂ ದೇಶಗಳಿಂದ ನಿಯೋಜನೆಗೊಂಡಿರುವ ವಿಶೇಷ ಪ್ರತಿನಿಧಿಗಳಾಗಿದ್ದಾರೆ.</p>.<p>ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಎರಡೂ ದೇಶಗಳ 50 ಸಾವಿರದಿಂದ 60 ಸಾವಿರ ಸೈನಿಕರು ಜಮಾಯಿಸಿದ್ದು, ಮುಂಚೂಣಿ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ಜೊತೆಗೆ ಶಾಂತ ವಾತಾವರಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.</p>.<p>ವಿದೇಶಾಂಗ ಸಚಿವ ಎಸ್. ಜೈಶಂಕರ್ ಸಹ ವಾಂಗ್ ಯಿ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಗಡಿಯಲ್ಲಿನ ವಿವಾದ ಪರಿಹರಿಸುವ ಮಾತುಕತೆಗಾಗಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಸೋಮವಾರ ಭಾರತಕ್ಕೆ ಬರಲಿದ್ದಾರೆ.</p>.<p>ಗ್ಯಾಲ್ವನ್ ಕಣಿವೆಯಲ್ಲಿ 2020ರಲ್ಲಿ ನಡೆದ ಘರ್ಷಣೆಯ ನಂತರ ಎರಡೂ ದೇಶಗಳ ನಡುವಿನ ಬಾಂಧವ್ಯವನ್ನು ವೃದ್ಧಿಗೊಳಿಸುವ ಮಾತುಕತೆಯಲ್ಲಿ ಅವರು ಭಾಗಿಯಾಗಲಿದ್ದಾರೆ.</p>.<p>ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ 50ಕ್ಕೆ ಹೆಚ್ಚಿಸಿದ ನಂತರ, ಭಾರತ– ಅಮೆರಿಕದ ನಡುವಿನ ಸಂಬಂಧದಲ್ಲಿ ತುಸು ಬಿರುಕು ಕಾಣಿಸಿಕೊಂಡಿರುವ ಹೊತ್ತಿನಲ್ಲಿ ವಾಂಗ್ ಎರಡು ದಿನ ಭೇಟಿ ನೀಡುತ್ತಿರುವುದು ಮಹತ್ವದ ವಿದ್ಯಮಾನವಾಗಿದೆ. </p>.<p>ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಜತೆ ವಾಂಗ್ ಗಡಿ ಸಮಸ್ಯೆ ಕುರಿತಂತೆ ಚರ್ಚಿಸಲಿದ್ದಾರೆ. ಇದು 24ನೇ ಸುತ್ತಿನ ಚರ್ಚೆಯಾಗಿದೆ. ಈ ಇಬ್ಬರೂ ಗಡಿ ಸಮಸ್ಯೆಯ ಪರಿಹಾರಕ್ಕಾಗಿ ಎರಡೂ ದೇಶಗಳಿಂದ ನಿಯೋಜನೆಗೊಂಡಿರುವ ವಿಶೇಷ ಪ್ರತಿನಿಧಿಗಳಾಗಿದ್ದಾರೆ.</p>.<p>ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಎರಡೂ ದೇಶಗಳ 50 ಸಾವಿರದಿಂದ 60 ಸಾವಿರ ಸೈನಿಕರು ಜಮಾಯಿಸಿದ್ದು, ಮುಂಚೂಣಿ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ಜೊತೆಗೆ ಶಾಂತ ವಾತಾವರಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.</p>.<p>ವಿದೇಶಾಂಗ ಸಚಿವ ಎಸ್. ಜೈಶಂಕರ್ ಸಹ ವಾಂಗ್ ಯಿ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>