<p><strong>ನವದೆಹಲಿ</strong>:<a href="www.prajavani.net/tags/arunachal-pradesh" target="_blank">ಅರುಣಾಚಲ ಪ್ರದೇಶ </a>ರಾಜ್ಯ ರಚನೆಯಾದ ದಿನದ ಕಾರ್ಯಕ್ರಮದಲ್ಲಿ ಗೃಹ ಸಚಿವ <a href="https://www.prajavani.net/tags/amit-shah" target="_blank">ಅಮಿತ್ ಶಾ</a> ಪಾಲ್ಗೊಳ್ಳುವುದಕ್ಕೆ ಚೀನಾ ತಕರಾರು ಎತ್ತಿದೆ.<br />ಅರುಣಾಚಲ ಪ್ರದೇಶ ದಕ್ಷಿಣ ಟಿಬೆಟ್ನ ಭಾಗ ಎಂದು ಚೀನಾ ವಾದಿಸುತ್ತಿದ್ದೆ. ಹಾಗಾಗಿ ಗೃಹ ಸಚಿವರು ಬೀಜಿಂಗ್ನ ಪ್ರಾದೇಶಿಕ ಸಾರ್ವಭೌಮತ್ವ ಮತ್ತು ರಾಜಕೀಯವಾಗಿರುವ ಪರಸ್ಪರ ನಂಬಿಕೆಯನ್ನು ಹಾಳು ಮಾಡಿದ್ದಾರೆ ಎಂದು ಚೀನಾ ಹೇಳಿದೆ.</p>.<p>ಅರುಣಾಚಲ ಪ್ರದೇಶದ 34ನೇ ರಾಜ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಶಾ, ಕೈಗಾರಿಕೆ ಮತ್ತು ರಸ್ತೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಈಶಾನ್ಯ ರಾಜ್ಯಗಳಿಗೆ ಭಾರತೀಯ ನಾಯಕರು ಭೇಟಿ ನೀಡುವುದನ್ನು ಚೀನಾ ವಿರೋಧಿಸುತ್ತಲೇ ಬಂದಿದೆ.<br />ಚೀನಾ-ಭಾರತ ಗಡಿಯ ಪೂರ್ವ ವಲಯದಲ್ಲಿ ಅಥವಾ ಚೀನಾದ ಟಿಬೆಟ್ ಪ್ರದೇಶದ ದಕ್ಷಿಣ ಭಾಗದಲ್ಲಿ ಚೀನಾದ ನಿಲುವು ಸ್ಥಿರ ಮತ್ತು ಸ್ಪಷ್ಟವಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆನ್ ಶುವಾಂಗ್ ಹೇಳಿದ್ದಾರೆ.</p>.<p>ಚೀನಾ ಸರ್ಕಾರವು ಅರುಣಾಚಲ ಪ್ರದೇಶ ಎಂದು ಕರೆಯುವ ಭಾಗವನ್ನು ಯಾವತ್ತೂ ಅಂಗೀಕರಿಸಿಲ್ಲ ಮತ್ತು ಚೀನಾದ ಟಿಬೆಟ್ ಪ್ರದೇಶದ ದಕ್ಷಿಣ ಭಾಗಕ್ಕೆ ಭಾರತದ ಯಾವುದೇ ರಾಜಕಾರಣಿ ಬರುವುದನ್ನು ನಾವು ವಿರೋಧಿಸುತ್ತೇವೆ ಎಂದು ಅವರು ಹೇಳಿದ್ದಾರೆ.</p>.<p>ಅದೇ ವೇಳೆ ಗಡಿ ಸಮಸ್ಯೆ ಉಲ್ಬಣವಾಗುವಂತೆ ಮಾಡುವ ಯಾವುದೇ ಕಾರ್ಯವನ್ನು ಕೈಗೊಳ್ಳಬೇಡಿ ಎಂದು ಭಾರತಕ್ಕೆ ಮನವಿ ಮಾಡಿದ ಚೀನಾ ಗಡಿಭಾಗದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಿ ಎಂದಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:<a href="www.prajavani.net/tags/arunachal-pradesh" target="_blank">ಅರುಣಾಚಲ ಪ್ರದೇಶ </a>ರಾಜ್ಯ ರಚನೆಯಾದ ದಿನದ ಕಾರ್ಯಕ್ರಮದಲ್ಲಿ ಗೃಹ ಸಚಿವ <a href="https://www.prajavani.net/tags/amit-shah" target="_blank">ಅಮಿತ್ ಶಾ</a> ಪಾಲ್ಗೊಳ್ಳುವುದಕ್ಕೆ ಚೀನಾ ತಕರಾರು ಎತ್ತಿದೆ.<br />ಅರುಣಾಚಲ ಪ್ರದೇಶ ದಕ್ಷಿಣ ಟಿಬೆಟ್ನ ಭಾಗ ಎಂದು ಚೀನಾ ವಾದಿಸುತ್ತಿದ್ದೆ. ಹಾಗಾಗಿ ಗೃಹ ಸಚಿವರು ಬೀಜಿಂಗ್ನ ಪ್ರಾದೇಶಿಕ ಸಾರ್ವಭೌಮತ್ವ ಮತ್ತು ರಾಜಕೀಯವಾಗಿರುವ ಪರಸ್ಪರ ನಂಬಿಕೆಯನ್ನು ಹಾಳು ಮಾಡಿದ್ದಾರೆ ಎಂದು ಚೀನಾ ಹೇಳಿದೆ.</p>.<p>ಅರುಣಾಚಲ ಪ್ರದೇಶದ 34ನೇ ರಾಜ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಶಾ, ಕೈಗಾರಿಕೆ ಮತ್ತು ರಸ್ತೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಈಶಾನ್ಯ ರಾಜ್ಯಗಳಿಗೆ ಭಾರತೀಯ ನಾಯಕರು ಭೇಟಿ ನೀಡುವುದನ್ನು ಚೀನಾ ವಿರೋಧಿಸುತ್ತಲೇ ಬಂದಿದೆ.<br />ಚೀನಾ-ಭಾರತ ಗಡಿಯ ಪೂರ್ವ ವಲಯದಲ್ಲಿ ಅಥವಾ ಚೀನಾದ ಟಿಬೆಟ್ ಪ್ರದೇಶದ ದಕ್ಷಿಣ ಭಾಗದಲ್ಲಿ ಚೀನಾದ ನಿಲುವು ಸ್ಥಿರ ಮತ್ತು ಸ್ಪಷ್ಟವಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆನ್ ಶುವಾಂಗ್ ಹೇಳಿದ್ದಾರೆ.</p>.<p>ಚೀನಾ ಸರ್ಕಾರವು ಅರುಣಾಚಲ ಪ್ರದೇಶ ಎಂದು ಕರೆಯುವ ಭಾಗವನ್ನು ಯಾವತ್ತೂ ಅಂಗೀಕರಿಸಿಲ್ಲ ಮತ್ತು ಚೀನಾದ ಟಿಬೆಟ್ ಪ್ರದೇಶದ ದಕ್ಷಿಣ ಭಾಗಕ್ಕೆ ಭಾರತದ ಯಾವುದೇ ರಾಜಕಾರಣಿ ಬರುವುದನ್ನು ನಾವು ವಿರೋಧಿಸುತ್ತೇವೆ ಎಂದು ಅವರು ಹೇಳಿದ್ದಾರೆ.</p>.<p>ಅದೇ ವೇಳೆ ಗಡಿ ಸಮಸ್ಯೆ ಉಲ್ಬಣವಾಗುವಂತೆ ಮಾಡುವ ಯಾವುದೇ ಕಾರ್ಯವನ್ನು ಕೈಗೊಳ್ಳಬೇಡಿ ಎಂದು ಭಾರತಕ್ಕೆ ಮನವಿ ಮಾಡಿದ ಚೀನಾ ಗಡಿಭಾಗದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಿ ಎಂದಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>