<p><strong>ಪಟ್ನಾ:</strong> ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್ ಬಣ) ಅಧ್ಯಕ್ಷ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇನ್ಸ್ಟಾಗ್ರಾಮ್ ಬಳಕೆದಾರರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. </p><p>ಬೆದರಿಕೆ ಕುರಿತಾದ ಸ್ಕ್ರೀನ್ಶಾಟ್ಗಳನ್ನು ಆಧರಿಸಿ ಲೋಕ ಜನಶಕ್ತಿ ಪಕ್ಷದ ವಕ್ತಾರ ರಾಜೇಶ್ ಭಟ್ ಅವರು ಪಟ್ನಾದ ಸೈಬರ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ದೂರಿನ ಪ್ರತಿಯನ್ನು ಪಕ್ಷವು ತನ್ನ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದೆ.</p><p>ಹಾಜಿಪುರ ಸಂಸದರಾದ ಚಿರಾಗ್ ಪಾಸ್ವಾನ್ ಅವರ ಮೇಲೆ ಬಾಂಬ್ ಹಾಕುವುದಾಗಿ ‘ಟೈಗರ್ ಮೆರಾಜ್ ಇದ್ರಿಸಿ’ ಎಂಬುವರು ಇನ್ಸ್ಟಾಗ್ರಾಮ್ನಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ರಾಜೇಶ್ ಭಟ್ ವಿವರಿಸಿದ್ದಾರೆ. </p><p>ಚಿರಾಗ್ ಪಾಸ್ವಾನ್ ಅವರ ಜನಪ್ರಿಯತೆ ಸಹಿಸಲಾಗದವರು, ಕ್ರಿಮಿನಲ್ ಹಿನ್ನೆಲೆಯುಳ್ಳವರು ಈ ರೀತಿ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಭಟ್ ಆಗ್ರಹಿಸಿದ್ದಾರೆ. </p><p>ರಾಷ್ಟ್ರೀಯ ಜನತಾದಳ (ಆರ್ಜೆಡಿ) ಬೆಂಬಲಿಗರು ಮಾತ್ರ ಈ ರೀತಿ ಮಾಡಲು ಸಾಧ್ಯ ಎಂದು ಲೋಕ ಜನಶಕ್ತಿ ಪಕ್ಷದ ನಾಯಕರೊಬ್ಬರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್ ಬಣ) ಅಧ್ಯಕ್ಷ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇನ್ಸ್ಟಾಗ್ರಾಮ್ ಬಳಕೆದಾರರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. </p><p>ಬೆದರಿಕೆ ಕುರಿತಾದ ಸ್ಕ್ರೀನ್ಶಾಟ್ಗಳನ್ನು ಆಧರಿಸಿ ಲೋಕ ಜನಶಕ್ತಿ ಪಕ್ಷದ ವಕ್ತಾರ ರಾಜೇಶ್ ಭಟ್ ಅವರು ಪಟ್ನಾದ ಸೈಬರ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ದೂರಿನ ಪ್ರತಿಯನ್ನು ಪಕ್ಷವು ತನ್ನ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದೆ.</p><p>ಹಾಜಿಪುರ ಸಂಸದರಾದ ಚಿರಾಗ್ ಪಾಸ್ವಾನ್ ಅವರ ಮೇಲೆ ಬಾಂಬ್ ಹಾಕುವುದಾಗಿ ‘ಟೈಗರ್ ಮೆರಾಜ್ ಇದ್ರಿಸಿ’ ಎಂಬುವರು ಇನ್ಸ್ಟಾಗ್ರಾಮ್ನಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ರಾಜೇಶ್ ಭಟ್ ವಿವರಿಸಿದ್ದಾರೆ. </p><p>ಚಿರಾಗ್ ಪಾಸ್ವಾನ್ ಅವರ ಜನಪ್ರಿಯತೆ ಸಹಿಸಲಾಗದವರು, ಕ್ರಿಮಿನಲ್ ಹಿನ್ನೆಲೆಯುಳ್ಳವರು ಈ ರೀತಿ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಭಟ್ ಆಗ್ರಹಿಸಿದ್ದಾರೆ. </p><p>ರಾಷ್ಟ್ರೀಯ ಜನತಾದಳ (ಆರ್ಜೆಡಿ) ಬೆಂಬಲಿಗರು ಮಾತ್ರ ಈ ರೀತಿ ಮಾಡಲು ಸಾಧ್ಯ ಎಂದು ಲೋಕ ಜನಶಕ್ತಿ ಪಕ್ಷದ ನಾಯಕರೊಬ್ಬರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>