<p><strong>ಪ್ರಯಾಗರಾಜ್</strong>: ದೇಶದಲ್ಲಿ ಕ್ರೈಸ್ತ ಧರ್ಮವನ್ನು ರಹಸ್ಯವಾಗಿ ಪಾಲಿಸುವವರ ಬಗ್ಗೆ ಆತಂಕ ವ್ಯಕ್ತಪಡಿಸಿರುವ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ), ಮತಾಂತರವಾದವರು ಮೀಸಲಾತಿ ಸವಲತ್ತುಗಳಿಗಾಗಿ ತಮ್ಮ ಮೂಲ ದಾಖಲೆಗಳನ್ನು ಬದಲಿಸಿಕೊಳ್ಳದೇ ಹಿಂದುಗಳಾಗಿಯೇ ಉಳಿದಿದ್ದಾರೆ ಎಂದು ಆರೋಪಿಸಿದೆ.</p>.<p>ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಎಚ್ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ, ‘ಕೆಲವರು ಕ್ರೈಸ್ತ ಧರ್ಮವನ್ನು ನಂಬಿ, ಆಚರಣೆ ಮಾಡುತ್ತಿದ್ದಾರೆ. ಅವರು ಮತಾಂತರವಾಗಿದ್ದಾರೆ ಎಂದು ಸರ್ಕಾರಕ್ಕಾಗಲಿ, ಸಮಾಜಕ್ಕಾಗಲಿ ಗೊತ್ತಾಗುವುದೇ ಇಲ್ಲ. ಚರ್ಚ್ಗಳಿಗೆ ಮಾತ್ರ ಆ ವ್ಯಕ್ತಿಗಳ ನಿಜವಾದ ಧರ್ಮಾಚರಣೆ ಗೊತ್ತಿರುತ್ತದೆ’ ಎಂದರು.</p>.<p>‘ಮತಾಂತರಗೊಂಡವರ ಹೆಸರು ಬದಲಿಸದೇ ಚರ್ಚ್ಗಳು ತಂತ್ರಗಾರಿಕೆ ಅನುಸರಿಸುತ್ತಿವೆ. ಹೀಗಾಗಿ ಮತಾಂತರ ಗೋಪ್ಯವಾಗಿ ಉಳಿಯುತ್ತಿದೆ. ಚರ್ಚ್ಗಳೂ ಮತಾಂತರವನ್ನು ಒಪ್ಪಿಕೊಳ್ಳುತ್ತಿಲ್ಲ. ಇದೇ ಕಾರಣಕ್ಕೆ ಕ್ರೈಸ್ತರ ಜನಸಂಖ್ಯೆಯಲ್ಲಿ ಬದಲಾವಣೆ ಕಾಣುತ್ತಿಲ್ಲ’ ಎಂದು ಮಿಲಿಂದ್ ಆರೋಪಿಸಿದರು.</p>.<p>‘ಕೆಲವು ಹಳ್ಳಿಗಳಲ್ಲಿ ಸಾಕಷ್ಟು ಚರ್ಚ್ಗಳಿರುತ್ತವೆ. ಆದರೆ ಮತದಾರರ ಪಟ್ಟಿ ಪರಿಶೀಲಿಸಿದಾಗ ಆ ಹಳ್ಳಿಗಳಲ್ಲಿ ಕ್ರೈಸ್ತರೇ ಇಲ್ಲ ಎಂದು ತೋರಿಸುತ್ತದೆ. ಕ್ರೈಸ್ತರೇ ಇಲ್ಲ ಎನ್ನುವುದಾದರೆ ಅಲ್ಲಿ ಚರ್ಚ್ಗಳನ್ನೇಕೆ ಸ್ಥಾಪಿಸಿದ್ದಾರೆ. ಅವುಗಳ ಉದ್ದೇಶ ಮತಾಂತರ ಮಾಡುವುದು. ಭಾರತದಲ್ಲಿ ಹಿಂದೂಗಳನ್ನು ದುರ್ಬಲಗೊಳಿಸಲು ಸ್ಥಳೀಯ ಹಾಗೂ ವಿದೇಶಿ ಪ್ರಯತ್ನ ನಡೆದಿದೆ’ ಎಂದು ಮಿಲಿಂದ್ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗರಾಜ್</strong>: ದೇಶದಲ್ಲಿ ಕ್ರೈಸ್ತ ಧರ್ಮವನ್ನು ರಹಸ್ಯವಾಗಿ ಪಾಲಿಸುವವರ ಬಗ್ಗೆ ಆತಂಕ ವ್ಯಕ್ತಪಡಿಸಿರುವ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ), ಮತಾಂತರವಾದವರು ಮೀಸಲಾತಿ ಸವಲತ್ತುಗಳಿಗಾಗಿ ತಮ್ಮ ಮೂಲ ದಾಖಲೆಗಳನ್ನು ಬದಲಿಸಿಕೊಳ್ಳದೇ ಹಿಂದುಗಳಾಗಿಯೇ ಉಳಿದಿದ್ದಾರೆ ಎಂದು ಆರೋಪಿಸಿದೆ.</p>.<p>ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಎಚ್ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ, ‘ಕೆಲವರು ಕ್ರೈಸ್ತ ಧರ್ಮವನ್ನು ನಂಬಿ, ಆಚರಣೆ ಮಾಡುತ್ತಿದ್ದಾರೆ. ಅವರು ಮತಾಂತರವಾಗಿದ್ದಾರೆ ಎಂದು ಸರ್ಕಾರಕ್ಕಾಗಲಿ, ಸಮಾಜಕ್ಕಾಗಲಿ ಗೊತ್ತಾಗುವುದೇ ಇಲ್ಲ. ಚರ್ಚ್ಗಳಿಗೆ ಮಾತ್ರ ಆ ವ್ಯಕ್ತಿಗಳ ನಿಜವಾದ ಧರ್ಮಾಚರಣೆ ಗೊತ್ತಿರುತ್ತದೆ’ ಎಂದರು.</p>.<p>‘ಮತಾಂತರಗೊಂಡವರ ಹೆಸರು ಬದಲಿಸದೇ ಚರ್ಚ್ಗಳು ತಂತ್ರಗಾರಿಕೆ ಅನುಸರಿಸುತ್ತಿವೆ. ಹೀಗಾಗಿ ಮತಾಂತರ ಗೋಪ್ಯವಾಗಿ ಉಳಿಯುತ್ತಿದೆ. ಚರ್ಚ್ಗಳೂ ಮತಾಂತರವನ್ನು ಒಪ್ಪಿಕೊಳ್ಳುತ್ತಿಲ್ಲ. ಇದೇ ಕಾರಣಕ್ಕೆ ಕ್ರೈಸ್ತರ ಜನಸಂಖ್ಯೆಯಲ್ಲಿ ಬದಲಾವಣೆ ಕಾಣುತ್ತಿಲ್ಲ’ ಎಂದು ಮಿಲಿಂದ್ ಆರೋಪಿಸಿದರು.</p>.<p>‘ಕೆಲವು ಹಳ್ಳಿಗಳಲ್ಲಿ ಸಾಕಷ್ಟು ಚರ್ಚ್ಗಳಿರುತ್ತವೆ. ಆದರೆ ಮತದಾರರ ಪಟ್ಟಿ ಪರಿಶೀಲಿಸಿದಾಗ ಆ ಹಳ್ಳಿಗಳಲ್ಲಿ ಕ್ರೈಸ್ತರೇ ಇಲ್ಲ ಎಂದು ತೋರಿಸುತ್ತದೆ. ಕ್ರೈಸ್ತರೇ ಇಲ್ಲ ಎನ್ನುವುದಾದರೆ ಅಲ್ಲಿ ಚರ್ಚ್ಗಳನ್ನೇಕೆ ಸ್ಥಾಪಿಸಿದ್ದಾರೆ. ಅವುಗಳ ಉದ್ದೇಶ ಮತಾಂತರ ಮಾಡುವುದು. ಭಾರತದಲ್ಲಿ ಹಿಂದೂಗಳನ್ನು ದುರ್ಬಲಗೊಳಿಸಲು ಸ್ಥಳೀಯ ಹಾಗೂ ವಿದೇಶಿ ಪ್ರಯತ್ನ ನಡೆದಿದೆ’ ಎಂದು ಮಿಲಿಂದ್ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>