<p><strong>ಬಿಲಾಸ್ಪುರ(ಛತ್ತೀಸಗಢ):</strong> ಮಾನವ ಕಳ್ಳಸಾಗಣೆ, ಬಲವಂತದ ಮತಾಂತರದ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಇಬ್ಬರು ಸನ್ಯಾಸಿನಿಯರು ಸೇರಿದಂತೆ ಮೂವರಿಗೆ ಛತ್ತೀಸಗಢದ ಬಿಲಾಸ್ಪುರ ಜಿಲ್ಲಾ ವಿಶೇಷ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.</p><p>₹50000 ಬಾಂಡ್ನೊಂದಿಗೆ ಇಬ್ಬರು ಸಾಕ್ಷಿದಾರರಿಂದ ಶ್ಯೂರಿಟಿ ಪಡೆದ ನ್ಯಾಯಾಲಯವು, ಸನ್ಯಾಸಿನಿಯರು ಹಾಗೂ ಮತ್ತೊಬ್ಬ ವ್ಯಕ್ತಿ ದೇಶ ತೊರೆಯದಂತೆ ಮತ್ತು ಅವರ ಪಾಸ್ಪೋರ್ಟ್ಗಳನ್ನು ಒಪ್ಪಿಸುವಂತೆ ಷರತ್ತು ವಿಧಿಸಿದೆ.</p><p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿರಾಜುದ್ದೀನ್ ಖುರೇಷಿ ಅವರು, ಕೇರಳದ ಕ್ಯಾಥೋಲಿಕ್ ಸನ್ಯಾಸಿನಿಯರಾದ ಪ್ರೀತಿ ಮೇರಿ, ವಂದನಾ ಫ್ರಾನ್ಸಿಸ್ ಹಾಗೂ ಸುಕಮಾನ್ ಮಾಂಡವಿ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.</p><p><strong>ಪ್ರಕರಣವೇನು?</strong></p><p>ನಾರಾಯಣಪುರದಿಂದ ಮೂವರು ಬಾಲಕಿಯರನ್ನು ಬಲವಂತರವಾಗಿ ಮತಾಂತರಿಸಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಮೇಲೆ ಸ್ಥಳೀಯ ಬಜರಂಗದಳದ ಕಾರ್ಯಕರ್ತರು ನೀಡಿದ ದೂರಿನ ಅನ್ವಯ ಸರ್ಕಾರಿ ರೈಲ್ವೇ ಪೊಲೀಸರು ಜುಲೈ 25ರಂದು ದುರ್ಗ್ ರೈಲು ನಿಲ್ದಾಣದ ಬಳಿ ಸನ್ಯಾಸಿನಿಯರನ್ನು ಬಂಧಿಸಿದ್ದರು.</p><p>ಕ್ರೈಸ್ತ ಸನ್ಯಾಸಿನಿಯರ ಬಂಧನ ಖಂಡಿಸಿದ ವಿರೋಧ ಪಕ್ಷದ ನಾಯಕರು, ಬಿಜೆಪಿಯ ದ್ವೇಷದ ಕ್ರಮ ಎಂದು ಆರೋಪಿಸಿದ್ದರು. ಮುಂಗಾರು ಅಧಿವೇಶನದ ವೇಳೆ ಸಂಸತ್ ಆವರಣದಲ್ಲಿ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಲಾಸ್ಪುರ(ಛತ್ತೀಸಗಢ):</strong> ಮಾನವ ಕಳ್ಳಸಾಗಣೆ, ಬಲವಂತದ ಮತಾಂತರದ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಇಬ್ಬರು ಸನ್ಯಾಸಿನಿಯರು ಸೇರಿದಂತೆ ಮೂವರಿಗೆ ಛತ್ತೀಸಗಢದ ಬಿಲಾಸ್ಪುರ ಜಿಲ್ಲಾ ವಿಶೇಷ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.</p><p>₹50000 ಬಾಂಡ್ನೊಂದಿಗೆ ಇಬ್ಬರು ಸಾಕ್ಷಿದಾರರಿಂದ ಶ್ಯೂರಿಟಿ ಪಡೆದ ನ್ಯಾಯಾಲಯವು, ಸನ್ಯಾಸಿನಿಯರು ಹಾಗೂ ಮತ್ತೊಬ್ಬ ವ್ಯಕ್ತಿ ದೇಶ ತೊರೆಯದಂತೆ ಮತ್ತು ಅವರ ಪಾಸ್ಪೋರ್ಟ್ಗಳನ್ನು ಒಪ್ಪಿಸುವಂತೆ ಷರತ್ತು ವಿಧಿಸಿದೆ.</p><p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿರಾಜುದ್ದೀನ್ ಖುರೇಷಿ ಅವರು, ಕೇರಳದ ಕ್ಯಾಥೋಲಿಕ್ ಸನ್ಯಾಸಿನಿಯರಾದ ಪ್ರೀತಿ ಮೇರಿ, ವಂದನಾ ಫ್ರಾನ್ಸಿಸ್ ಹಾಗೂ ಸುಕಮಾನ್ ಮಾಂಡವಿ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.</p><p><strong>ಪ್ರಕರಣವೇನು?</strong></p><p>ನಾರಾಯಣಪುರದಿಂದ ಮೂವರು ಬಾಲಕಿಯರನ್ನು ಬಲವಂತರವಾಗಿ ಮತಾಂತರಿಸಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಮೇಲೆ ಸ್ಥಳೀಯ ಬಜರಂಗದಳದ ಕಾರ್ಯಕರ್ತರು ನೀಡಿದ ದೂರಿನ ಅನ್ವಯ ಸರ್ಕಾರಿ ರೈಲ್ವೇ ಪೊಲೀಸರು ಜುಲೈ 25ರಂದು ದುರ್ಗ್ ರೈಲು ನಿಲ್ದಾಣದ ಬಳಿ ಸನ್ಯಾಸಿನಿಯರನ್ನು ಬಂಧಿಸಿದ್ದರು.</p><p>ಕ್ರೈಸ್ತ ಸನ್ಯಾಸಿನಿಯರ ಬಂಧನ ಖಂಡಿಸಿದ ವಿರೋಧ ಪಕ್ಷದ ನಾಯಕರು, ಬಿಜೆಪಿಯ ದ್ವೇಷದ ಕ್ರಮ ಎಂದು ಆರೋಪಿಸಿದ್ದರು. ಮುಂಗಾರು ಅಧಿವೇಶನದ ವೇಳೆ ಸಂಸತ್ ಆವರಣದಲ್ಲಿ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>