<p><strong>ಇಂಫಾಲ್</strong>: ‘ಸಮುದಾಯದ ಜನರು ವಾಸಿಸುವ ಗ್ರಾಮಸ್ಥರಿಗೆ ಕಾನೂನಾತ್ಮಕವಾದ ರಕ್ಷಣೆ ಒದಗಿಸುವುದನ್ನು ಖಚಿತಪಡಿಸಬೇಕು’ ಎಂದು ಚುರಾಚಾಂದ್ಪುರ ಮೈತೇಯಿ ಸಂಘಟನೆಯ ಮುಖಂಡರು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಅದೇ ರೀತಿ, ಕುಕಿ ಬಹುಸಂಖ್ಯಾತರಾಗಿರುವ ಜಿಲ್ಲೆಗಳಿಂದ ಸ್ಥಳಾಂತರಗೊಂಡ ಮೈತೇಯಿ ನಿವಾಸಿಗಳ ಪುನರ್ವಸತಿಗೆ ಕ್ರಮ ಕೈಗೊಳ್ಳಬೇಕು ಎಂದೂ ಒತ್ತಾಯಿಸಿದ್ದಾರೆ.</p>.<p>‘ಚುರಾಚಾಂದ್ಪುರ ಮೈತೇಯಿ ಸಮುದಾಯದವರು ವಾಸಿಸುವ ಹಲವಾರು ಗ್ರಾಮಗಳು ಐತಿಹಾಸಿಕವಾಗಿಯೂ ನಮಗೆ ಸೇರಿದ್ದಾಗಿದೆ. ಹೆಚ್ಚುತ್ತಿರುವ ಒತ್ತುವರಿಯಿಂದ ನೈಜ ಮಾಲೀಕತ್ವಕ್ಕೆ ಅಪಾಯ ಎದುರಾಗಿದೆ. ನಮ್ಮ ಗ್ರಾಮಗಳಿಗೆ ಕಾನೂನಾತ್ಮಕ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಲಾಗಿದೆ’ ಎಂದು ಚುರಾಚಾಂದ್ಪುರ ಏಕೀಕರಣ ಸಮಿತಿ ತಿಳಿಸಿದೆ.</p>.<p>ಗಲಭೆಯಲ್ಲಿ ನಿರ್ವಸಿತರಾದ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು, ನಿರಾಶ್ರಿತ ಶಿಬಿರಗಳಲ್ಲಿ ಹೆಚ್ಚಿನ ಪಾರದರ್ಶಕತೆ ಕಾಪಾಡಿಕೊಳ್ಳಬೇಕು ಎಂದು ಆಗ್ರಹಿಸಿದೆ.</p>.<p>ಮತ್ತೊಂದು ಸಮಿತಿ ಕೂಡ ಮನವಿ ಸಲ್ಲಿಸಿದ್ದು, ನಿರಾಶ್ರಿತರ ಶಿಬಿರಗಳಲ್ಲಿ ಉಚಿತ ವೈದ್ಯಕೀಯ ಸೇವೆ, ಉಚಿತ ಶಿಕ್ಷಣ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್</strong>: ‘ಸಮುದಾಯದ ಜನರು ವಾಸಿಸುವ ಗ್ರಾಮಸ್ಥರಿಗೆ ಕಾನೂನಾತ್ಮಕವಾದ ರಕ್ಷಣೆ ಒದಗಿಸುವುದನ್ನು ಖಚಿತಪಡಿಸಬೇಕು’ ಎಂದು ಚುರಾಚಾಂದ್ಪುರ ಮೈತೇಯಿ ಸಂಘಟನೆಯ ಮುಖಂಡರು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಅದೇ ರೀತಿ, ಕುಕಿ ಬಹುಸಂಖ್ಯಾತರಾಗಿರುವ ಜಿಲ್ಲೆಗಳಿಂದ ಸ್ಥಳಾಂತರಗೊಂಡ ಮೈತೇಯಿ ನಿವಾಸಿಗಳ ಪುನರ್ವಸತಿಗೆ ಕ್ರಮ ಕೈಗೊಳ್ಳಬೇಕು ಎಂದೂ ಒತ್ತಾಯಿಸಿದ್ದಾರೆ.</p>.<p>‘ಚುರಾಚಾಂದ್ಪುರ ಮೈತೇಯಿ ಸಮುದಾಯದವರು ವಾಸಿಸುವ ಹಲವಾರು ಗ್ರಾಮಗಳು ಐತಿಹಾಸಿಕವಾಗಿಯೂ ನಮಗೆ ಸೇರಿದ್ದಾಗಿದೆ. ಹೆಚ್ಚುತ್ತಿರುವ ಒತ್ತುವರಿಯಿಂದ ನೈಜ ಮಾಲೀಕತ್ವಕ್ಕೆ ಅಪಾಯ ಎದುರಾಗಿದೆ. ನಮ್ಮ ಗ್ರಾಮಗಳಿಗೆ ಕಾನೂನಾತ್ಮಕ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಲಾಗಿದೆ’ ಎಂದು ಚುರಾಚಾಂದ್ಪುರ ಏಕೀಕರಣ ಸಮಿತಿ ತಿಳಿಸಿದೆ.</p>.<p>ಗಲಭೆಯಲ್ಲಿ ನಿರ್ವಸಿತರಾದ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು, ನಿರಾಶ್ರಿತ ಶಿಬಿರಗಳಲ್ಲಿ ಹೆಚ್ಚಿನ ಪಾರದರ್ಶಕತೆ ಕಾಪಾಡಿಕೊಳ್ಳಬೇಕು ಎಂದು ಆಗ್ರಹಿಸಿದೆ.</p>.<p>ಮತ್ತೊಂದು ಸಮಿತಿ ಕೂಡ ಮನವಿ ಸಲ್ಲಿಸಿದ್ದು, ನಿರಾಶ್ರಿತರ ಶಿಬಿರಗಳಲ್ಲಿ ಉಚಿತ ವೈದ್ಯಕೀಯ ಸೇವೆ, ಉಚಿತ ಶಿಕ್ಷಣ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>