ಟಿಕೆಟ್ ಕೈತಪ್ಪಿರುವ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಸ್ವನ್ ಅವರು, ‘ನಾನು ಮಾಡಿರುವ ತಪ್ಪೇನು? ನನ್ನ ಪ್ರಾಮಾಣಿಕತೆಯ ಬಗ್ಗೆ ಅನುಮಾನವೇ? ನಾನು ನನ್ನ ಕ್ಷೇತ್ರದ ಜನರ ಒಳಿತಿಗಾಗಿ ಕಷ್ಟಪಟ್ಟಿದ್ದೇನೆ. ಪ್ರಧಾನಿ ಮೋದಿಯವರ ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸಿದ್ದೇನೆ. ನನ್ನ ಪ್ರಶ್ನೆಗಳಿಗೆ ಯಾರಲ್ಲೂ ಉತ್ತರವಿಲ್ಲ. ಎಲ್ಲರೂ ಮೌನವಾಗಿದ್ದರೆ’ ಎಂದು ಬೇಸರ ವ್ಯಕ್ತಪಡಿಸಿದರು.