<p><strong>ಕೋಲ್ಕತ್ತ</strong>: ಅಂಗರಕ್ಷಕ ಸಾವಿಗೀಡಾದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರಿಗೆ ಸಿಐಡಿ ಸಮನ್ಸ್ ನೀಡಿದೆ.</p>.<p>ಸಿಐಡಿ ಪ್ರಧಾನ ಕಚೇರಿಯಲ್ಲಿ ತನಿಖಾ ಅಧಿಕಾರಿಗಳ ಮುಂದೆ ಸೋಮವಾರ ಹಾಜರಾಗುವಂತೆ ಸುವೇಂದು ಅವರಿಗೆ ಸೂಚಿಸಲಾಗಿದೆ. ಸುವೇಂದು ಅವರ ಅಂಗರಕ್ಷಕರಾಗಿದ್ದ ಸುಭಬ್ರತಾ ಚಕ್ರವರ್ತಿ ಅವರ ಅಸಹಜ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಿಐಡಿ ವಿಶೇಷ ತಂಡವನ್ನು ರಚಿಸಿದೆ.</p>.<p>ಇತ್ತೀಚೆಗೆ ಚಕ್ರವರ್ತಿ ಅವರು, ತಮ್ಮ ಸರ್ವಿಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡಿದ್ದರು. ತಮ್ಮ ಪತಿಯ ಸಾವಿನ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಚಕ್ರವರ್ತಿ ಅವರ ಪತ್ನಿ ಕೊಂಟೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/cid-takes-over-probe-into-death-of-bengal-lop-suvendu-adhikaris-bodyguard-847361.html " target="_blank">ಸುವೇಂದು ಅಧಿಕಾರಿಯ ಅಂಗರಕ್ಷಕನ ಸಾವು: ತನಿಖೆ ಕೈಗೆತ್ತಿಕೊಂಡ ಪಶ್ಚಿಮ ಬಂಗಾಳ ಸಿಐಡಿ </a></p>.<p>ಸಿಐಡಿ ಇದುವರೆಗೆ 11 ಪೊಲೀಸರು ಸೇರಿದಂತೆ 15 ಮಂದಿಯ ವಿಚಾರಣೆ ನಡೆಸಿದೆ. ಪುರ್ಬಾ ಮೆದಿನಿಪುರದಲ್ಲಿರುವ ಸುವೇಂದು ಅಧಿಕಾರಿ ನಿವಾಸ ‘ಶಾಂತಿ ಕುಂಜ’ಗೂ ಸಿಐಡಿ ತಂಡ ಭೇಟಿ ನೀಡಿ ಪರಿಶೀಲಿಸಿದೆ.</p>.<p>ರಾಜ್ಯ ಶಸ್ತ್ರಾಸ್ತ್ರ ಪೊಲೀಸ್ ಪಡೆಯಲ್ಲಿದ್ದ ಚಕ್ರವರ್ತಿ ಅವರನ್ನು ಸುವೇಂದು ಅಧಿಕಾರಿ ಅವರ ಭದ್ರತೆಗೆ ನಿಯೋಜಿಸಲಾಗಿತ್ತು. ಸುವೇಂದು ಅವರು ಟಿಎಂಸಿ ಸಂಸದರಾಗಿದ್ದ ಅವಧಿಯಿಂದಲೂ ಭದ್ರತಾ ತಂಡದಲ್ಲಿ ಚಕ್ರವರ್ತಿ ಇದ್ದರು. 2015ರಲ್ಲಿ ಸುವೇಂದು ಸಚಿವರಾದ ಬಳಿಕವೂ ಮುಂದುವರಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಅಂಗರಕ್ಷಕ ಸಾವಿಗೀಡಾದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರಿಗೆ ಸಿಐಡಿ ಸಮನ್ಸ್ ನೀಡಿದೆ.</p>.<p>ಸಿಐಡಿ ಪ್ರಧಾನ ಕಚೇರಿಯಲ್ಲಿ ತನಿಖಾ ಅಧಿಕಾರಿಗಳ ಮುಂದೆ ಸೋಮವಾರ ಹಾಜರಾಗುವಂತೆ ಸುವೇಂದು ಅವರಿಗೆ ಸೂಚಿಸಲಾಗಿದೆ. ಸುವೇಂದು ಅವರ ಅಂಗರಕ್ಷಕರಾಗಿದ್ದ ಸುಭಬ್ರತಾ ಚಕ್ರವರ್ತಿ ಅವರ ಅಸಹಜ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಿಐಡಿ ವಿಶೇಷ ತಂಡವನ್ನು ರಚಿಸಿದೆ.</p>.<p>ಇತ್ತೀಚೆಗೆ ಚಕ್ರವರ್ತಿ ಅವರು, ತಮ್ಮ ಸರ್ವಿಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡಿದ್ದರು. ತಮ್ಮ ಪತಿಯ ಸಾವಿನ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಚಕ್ರವರ್ತಿ ಅವರ ಪತ್ನಿ ಕೊಂಟೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/cid-takes-over-probe-into-death-of-bengal-lop-suvendu-adhikaris-bodyguard-847361.html " target="_blank">ಸುವೇಂದು ಅಧಿಕಾರಿಯ ಅಂಗರಕ್ಷಕನ ಸಾವು: ತನಿಖೆ ಕೈಗೆತ್ತಿಕೊಂಡ ಪಶ್ಚಿಮ ಬಂಗಾಳ ಸಿಐಡಿ </a></p>.<p>ಸಿಐಡಿ ಇದುವರೆಗೆ 11 ಪೊಲೀಸರು ಸೇರಿದಂತೆ 15 ಮಂದಿಯ ವಿಚಾರಣೆ ನಡೆಸಿದೆ. ಪುರ್ಬಾ ಮೆದಿನಿಪುರದಲ್ಲಿರುವ ಸುವೇಂದು ಅಧಿಕಾರಿ ನಿವಾಸ ‘ಶಾಂತಿ ಕುಂಜ’ಗೂ ಸಿಐಡಿ ತಂಡ ಭೇಟಿ ನೀಡಿ ಪರಿಶೀಲಿಸಿದೆ.</p>.<p>ರಾಜ್ಯ ಶಸ್ತ್ರಾಸ್ತ್ರ ಪೊಲೀಸ್ ಪಡೆಯಲ್ಲಿದ್ದ ಚಕ್ರವರ್ತಿ ಅವರನ್ನು ಸುವೇಂದು ಅಧಿಕಾರಿ ಅವರ ಭದ್ರತೆಗೆ ನಿಯೋಜಿಸಲಾಗಿತ್ತು. ಸುವೇಂದು ಅವರು ಟಿಎಂಸಿ ಸಂಸದರಾಗಿದ್ದ ಅವಧಿಯಿಂದಲೂ ಭದ್ರತಾ ತಂಡದಲ್ಲಿ ಚಕ್ರವರ್ತಿ ಇದ್ದರು. 2015ರಲ್ಲಿ ಸುವೇಂದು ಸಚಿವರಾದ ಬಳಿಕವೂ ಮುಂದುವರಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>