‘ಸಭೆ ಮತ್ತು ಸಮಾರಂಭ ನಡೆಸಬಾರದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ
ಕಟ್ಟುನಿಟ್ಟಾಗಿ ಹೇಳಿದೆ. ಹೀಗಿದ್ದರೂ, ಸರ್ಕಾರದ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳನ್ನು ಕೆಲವರು ಉಲ್ಲಂಘಿಸುತ್ತಿದ್ದಾರೆ. ಜೊತೆಗೆ
ಕೆಲವರು ಕೋಮು ಸೌಹಾರ್ದಕ್ಕೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ನಾಗರಿಕರು ತಮ್ಮ ಮೂಲಭೂತ
ಹಕ್ಕುಗಳ ಬಗ್ಗೆ ಗಂಭೀರ ಕಾಳಜಿಯನ್ನು ತೋರಿಸುತ್ತಾರೆ. ಆದರೆ, ನಂತರ ಮೂಲಭೂತ ಕರ್ತವ್ಯಗಳನ್ನು ಮರೆತುಬಿಡುತ್ತಾರೆ’ ಎಂದು
ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದರು.