<p><strong>ಗುವಾಹಟಿ: </strong><a href="https://WWW.prajavani.net/tags/citizenship-amendment-bill-0" target="_blank">ಪೌರತ್ವ ತಿದ್ದುಪಡಿ ಮಸೂದೆ </a>ವಿರೋಧಿಸಿ ಅಸ್ಸಾಂನಲ್ಲಿ ನಡೆಯುತ್ತಿರುವ <a href="WWW.prajavani.net/tags/cab-protest" target="_blank">ಪ್ರತಿಭಟನೆ</a> ವೇಳೆ ಗುಂಡು ತಾಗಿ ಇಬ್ಬರು ಪ್ರತಿಭಟನಕಾರರು ಸಾವಿಗೀಡಾಗಿದ್ದಾರೆ.</p>.<p>ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿದ್ದು, ಜನರು ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದು ಅಸ್ಸಾಂ ಪೊಲೀಸ್ ಮಹಾ ನಿರ್ದೇಶಕ ಭಾಸ್ಕರ್ ಜ್ಯೋತಿ ಮಹಾಂತ ವಿನಂತಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://WWW.prajavani.net/stories/national/cab-protest-airlines-cancel-flights-to-assam-689695.html" target="_blank">ಪೌರತ್ವ ಮಸೂದೆ ವಿರೋಧಿಸಿ ಅಸ್ಸಾಂ ಉದ್ವಿಗ್ನ:ವಿಮಾನ ಸೇವೆ ರದ್ದು</a></p>.<p>ಪ್ರತಿಭಟನೆ ಬಗ್ಗೆ ಪ್ರಚೋದನಾತ್ಮಕ ದೃಶ್ಯಗಳನ್ನು ಅಥವಾ ವರದಿಗಳನ್ನು ಬಿತ್ತರಿಸಬೇಡಿ ಎಂದು ಮಹಾಂತಾ ಮಾಧ್ಯಮಗಳಿಗೆ ಒತ್ತಾಯಿಸಿದ್ದಾರೆ.</p>.<p>ಕೆಲವು ದುಷ್ಟ ಶಕ್ತಿಗಳು ಮತ್ತು ರಾಜಕೀಯ ನಂಟು ಹೊಂದಿರುವವರು ರಾಜ್ಯದಲ್ಲಿ ಗಲಭೆಯ್ನುಂಟು ಮಾಡಲು ಯತ್ನಿಸುತ್ತಿದ್ದಾರೆ. ಪ್ರತಿಭಟನೆಗಳು ಪ್ರಜಾಸತ್ತಾತ್ಮಕವಾಗಿದ್ದರೆ ನಾವೇನೂ ಮಾಡಲಾರೆವು. ಜನರು ಕಾನೂನು ಕೈಗೆತ್ತಿಕೊಂಡು ಕ್ಷೋಭೆಯನ್ನುಂಟು ಮಾಡಬೇಡಿ ಎಂದು ನಾನು ವಿನಂತಿಸುತ್ತಿದ್ದೇನೆ ಎಂದು ಮಹಾಂತ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.</p>.<p>ಪ್ರತಿಭಟನಕಾರರುಮಾಡುತ್ತಿರುವ ದಾಳಿ ಒಳ್ಳೆಯದಲ್ಲ. ಜನರು ಕಾನೂನು ಕೈಗೆತ್ತಿಕೊಂಡರೆ ಅದು ಸಮಸ್ಯೆಯನ್ನು ಸೃಷ್ಟಿಸುತ್ತದೆ ಎಂದು ಮಹಾಂತ ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ: </strong><a href="https://WWW.prajavani.net/tags/citizenship-amendment-bill-0" target="_blank">ಪೌರತ್ವ ತಿದ್ದುಪಡಿ ಮಸೂದೆ </a>ವಿರೋಧಿಸಿ ಅಸ್ಸಾಂನಲ್ಲಿ ನಡೆಯುತ್ತಿರುವ <a href="WWW.prajavani.net/tags/cab-protest" target="_blank">ಪ್ರತಿಭಟನೆ</a> ವೇಳೆ ಗುಂಡು ತಾಗಿ ಇಬ್ಬರು ಪ್ರತಿಭಟನಕಾರರು ಸಾವಿಗೀಡಾಗಿದ್ದಾರೆ.</p>.<p>ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿದ್ದು, ಜನರು ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದು ಅಸ್ಸಾಂ ಪೊಲೀಸ್ ಮಹಾ ನಿರ್ದೇಶಕ ಭಾಸ್ಕರ್ ಜ್ಯೋತಿ ಮಹಾಂತ ವಿನಂತಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://WWW.prajavani.net/stories/national/cab-protest-airlines-cancel-flights-to-assam-689695.html" target="_blank">ಪೌರತ್ವ ಮಸೂದೆ ವಿರೋಧಿಸಿ ಅಸ್ಸಾಂ ಉದ್ವಿಗ್ನ:ವಿಮಾನ ಸೇವೆ ರದ್ದು</a></p>.<p>ಪ್ರತಿಭಟನೆ ಬಗ್ಗೆ ಪ್ರಚೋದನಾತ್ಮಕ ದೃಶ್ಯಗಳನ್ನು ಅಥವಾ ವರದಿಗಳನ್ನು ಬಿತ್ತರಿಸಬೇಡಿ ಎಂದು ಮಹಾಂತಾ ಮಾಧ್ಯಮಗಳಿಗೆ ಒತ್ತಾಯಿಸಿದ್ದಾರೆ.</p>.<p>ಕೆಲವು ದುಷ್ಟ ಶಕ್ತಿಗಳು ಮತ್ತು ರಾಜಕೀಯ ನಂಟು ಹೊಂದಿರುವವರು ರಾಜ್ಯದಲ್ಲಿ ಗಲಭೆಯ್ನುಂಟು ಮಾಡಲು ಯತ್ನಿಸುತ್ತಿದ್ದಾರೆ. ಪ್ರತಿಭಟನೆಗಳು ಪ್ರಜಾಸತ್ತಾತ್ಮಕವಾಗಿದ್ದರೆ ನಾವೇನೂ ಮಾಡಲಾರೆವು. ಜನರು ಕಾನೂನು ಕೈಗೆತ್ತಿಕೊಂಡು ಕ್ಷೋಭೆಯನ್ನುಂಟು ಮಾಡಬೇಡಿ ಎಂದು ನಾನು ವಿನಂತಿಸುತ್ತಿದ್ದೇನೆ ಎಂದು ಮಹಾಂತ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.</p>.<p>ಪ್ರತಿಭಟನಕಾರರುಮಾಡುತ್ತಿರುವ ದಾಳಿ ಒಳ್ಳೆಯದಲ್ಲ. ಜನರು ಕಾನೂನು ಕೈಗೆತ್ತಿಕೊಂಡರೆ ಅದು ಸಮಸ್ಯೆಯನ್ನು ಸೃಷ್ಟಿಸುತ್ತದೆ ಎಂದು ಮಹಾಂತ ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>