<p><strong>ಚೆನ್ನೈ:</strong> ತಮ್ಮ ವಿರುದ್ಧದ ಪ್ರಕರಣದಲ್ಲಿ ಮತ್ತೆ ವಾದ ಮಂಡನೆಗೆ ಅವಕಾಶ ನೀಡುವಂತೆ ಕೋರಿ ಡಿಎಂಕೆ ಸಚಿವ ವಿ.ಸೆಂಥಿಲ್ ಬಾಲಾಜಿ ಸಲ್ಲಿಸಿರುವ ಹೊಸ ಅರ್ಜಿಗೆ ಸಂಬಂಧಿಸಿ ಇಲ್ಲಿನ ಸೆಷನ್ಸ್ ಕೋರ್ಟ್, ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.) ಗುರುವಾರ ನೋಟಿಸ್ ಜಾರಿ ಮಾಡಿದೆ.</p>.<p>ಹಣ ಅಕ್ರಮ ವರ್ಗಾವಣೆ ಪ್ರಕರಣವೊಂದರಲ್ಲಿ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಕಳೆದ ವರ್ಷ ಜೂನ್ನಲ್ಲಿ ಬಂಧಿಸಿತ್ತು. ಪ್ರಕರಣ ರದ್ದು ಕೋರಿ ಬಾಲಾಜಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ, ಬಾಲಾಜಿ ಪರ ವಾದ ಮಂಡನೆಯನ್ನು ಕೋರ್ಟ್ ಮುಕ್ತಾಯಗೊಳಿಸಿತ್ತು.</p>.<p>ಬಾಲಾಜಿ ಅವರ ಅರ್ಜಿ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿ.ವಿ.ಆನಂದ್, ಇ.ಡಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏಪ್ರಿಲ್ 4ಕ್ಕೆ ಮುಂದೂಡಿದರು.</p>.<p>ತಮ್ಮ ವಿರುದ್ಧದ ಪ್ರಕರಣ ರದ್ದು ಮಾಡುವಂತೆ ಕೋರಿ ಸಚಿವ ಸೆಂಥಿಲ್ ಬಾಲಾಜಿ ಸಲ್ಲಿಸಿದ್ದ ಮೂಲ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಎಸ್. ಅಲ್ಲಿ ಅವರು, ಮಾ.22ರಂದು ಆದೇಶವನ್ನು ಕಾಯ್ದಿರಿಸಿದ್ದರು. ಈ ನಡುವೆ, ಬಾಲಾಜಿ ಅವರು ಹೊಸದಾಗಿ ಈ ಅರ್ಜಿ ಸಲ್ಲಿಸಿದ್ದಾರೆ.</p>.<p>‘ಎರಡು ಮೂಲ ಚಲನ್ಗಳನ್ನು ಹಾಜರುಪಡಿಸುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ಹೊಸದಾಗಿ ಸಲ್ಲಿಸಿದ್ದ ಅರ್ಜಿಯಲ್ಲಿ ಬಾಲಾಜಿ ಕೋರಿದ್ದರು. ಅದರಂತೆ, ಬ್ಯಾಂಕ್ ಅಧಿಕಾರಿಗಳಿಗೆ ಕೋರ್ಟ್, ಸಮನ್ಸ್ ಜಾರಿ ಮಾಡಿತು.</p>.<p>‘ಈ ಹಿಂದೆ ಸೂಚನೆ ನೀಡಿದ್ದರೂ ಬ್ಯಾಂಕ್ ಅಧಿಕಾರಿಗಳು ಮೂಲ ಚಲನ್ಗಳನ್ನು ಹಾಜರುಪಡಿಸದ ಕಾರಣ, ಸಮರ್ಥ ವಾದ ಮಂಡನೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಮತ್ತೆ ವಾದ ಮಂಡನೆಗೆ ಅವಕಾಶ ನೀಡಬೇಕು. ಇಲ್ಲದೇ ಹೋದರೆ ನನಗೆ ಸರಿಪಡಿಸಲಾಗದ ಹಾನಿ ಮತ್ತು ಸಮಸ್ಯೆಯಾಗಲಿದೆ’ ಎಂದು ಅವರು ಅರ್ಜಿಯಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮ್ಮ ವಿರುದ್ಧದ ಪ್ರಕರಣದಲ್ಲಿ ಮತ್ತೆ ವಾದ ಮಂಡನೆಗೆ ಅವಕಾಶ ನೀಡುವಂತೆ ಕೋರಿ ಡಿಎಂಕೆ ಸಚಿವ ವಿ.ಸೆಂಥಿಲ್ ಬಾಲಾಜಿ ಸಲ್ಲಿಸಿರುವ ಹೊಸ ಅರ್ಜಿಗೆ ಸಂಬಂಧಿಸಿ ಇಲ್ಲಿನ ಸೆಷನ್ಸ್ ಕೋರ್ಟ್, ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.) ಗುರುವಾರ ನೋಟಿಸ್ ಜಾರಿ ಮಾಡಿದೆ.</p>.<p>ಹಣ ಅಕ್ರಮ ವರ್ಗಾವಣೆ ಪ್ರಕರಣವೊಂದರಲ್ಲಿ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಕಳೆದ ವರ್ಷ ಜೂನ್ನಲ್ಲಿ ಬಂಧಿಸಿತ್ತು. ಪ್ರಕರಣ ರದ್ದು ಕೋರಿ ಬಾಲಾಜಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ, ಬಾಲಾಜಿ ಪರ ವಾದ ಮಂಡನೆಯನ್ನು ಕೋರ್ಟ್ ಮುಕ್ತಾಯಗೊಳಿಸಿತ್ತು.</p>.<p>ಬಾಲಾಜಿ ಅವರ ಅರ್ಜಿ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿ.ವಿ.ಆನಂದ್, ಇ.ಡಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏಪ್ರಿಲ್ 4ಕ್ಕೆ ಮುಂದೂಡಿದರು.</p>.<p>ತಮ್ಮ ವಿರುದ್ಧದ ಪ್ರಕರಣ ರದ್ದು ಮಾಡುವಂತೆ ಕೋರಿ ಸಚಿವ ಸೆಂಥಿಲ್ ಬಾಲಾಜಿ ಸಲ್ಲಿಸಿದ್ದ ಮೂಲ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಎಸ್. ಅಲ್ಲಿ ಅವರು, ಮಾ.22ರಂದು ಆದೇಶವನ್ನು ಕಾಯ್ದಿರಿಸಿದ್ದರು. ಈ ನಡುವೆ, ಬಾಲಾಜಿ ಅವರು ಹೊಸದಾಗಿ ಈ ಅರ್ಜಿ ಸಲ್ಲಿಸಿದ್ದಾರೆ.</p>.<p>‘ಎರಡು ಮೂಲ ಚಲನ್ಗಳನ್ನು ಹಾಜರುಪಡಿಸುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ಹೊಸದಾಗಿ ಸಲ್ಲಿಸಿದ್ದ ಅರ್ಜಿಯಲ್ಲಿ ಬಾಲಾಜಿ ಕೋರಿದ್ದರು. ಅದರಂತೆ, ಬ್ಯಾಂಕ್ ಅಧಿಕಾರಿಗಳಿಗೆ ಕೋರ್ಟ್, ಸಮನ್ಸ್ ಜಾರಿ ಮಾಡಿತು.</p>.<p>‘ಈ ಹಿಂದೆ ಸೂಚನೆ ನೀಡಿದ್ದರೂ ಬ್ಯಾಂಕ್ ಅಧಿಕಾರಿಗಳು ಮೂಲ ಚಲನ್ಗಳನ್ನು ಹಾಜರುಪಡಿಸದ ಕಾರಣ, ಸಮರ್ಥ ವಾದ ಮಂಡನೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಮತ್ತೆ ವಾದ ಮಂಡನೆಗೆ ಅವಕಾಶ ನೀಡಬೇಕು. ಇಲ್ಲದೇ ಹೋದರೆ ನನಗೆ ಸರಿಪಡಿಸಲಾಗದ ಹಾನಿ ಮತ್ತು ಸಮಸ್ಯೆಯಾಗಲಿದೆ’ ಎಂದು ಅವರು ಅರ್ಜಿಯಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>