<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯುವ ಯತ್ನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರು ವಿಚಾರಣೆಗಾಗಿ ಅಟಾರ್ನಿ ಜನರಲ್ ಅವರಿಗೆ ಪತ್ರ ಬರೆದಿದ್ದಾರೆ.</p><p>ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ವಕೀಲ ಸುಭಾಷ್ ಚಂದ್ರನ್ ಕೆ.ಆರ್. ಅವರು ನ್ಯಾಯಾಂಗ ನಿಂದನೆ ಕಾಯ್ದೆ, 1971ರ 15ನೇ ಸೆಕ್ಷನ್ ಅಡಿಯಲ್ಲಿ ಅನುಮತಿ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.</p><p>ಭಾರತದ ಸಂವಿಧಾನವನ್ನು ಸೋಲಿಸುವ, ಸುಪ್ರೀಂ ಕೋರ್ಟ್ನ ಅಧಿಕಾರ ಮತ್ತು ಘನತೆಯನ್ನು ಮುಕ್ಕಾಗಿಸುವ ಅತ್ಯಂತ ಹೀನ ಕೃತ್ಯವಿದು<br>ಸುಭಾಷ್ ಚಂದ್ರನ್ ಅವರು ಅಟಾರ್ನಿ ಜನರಲ್ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.</p><p>ನ್ಯಾಯಾಂಗ ನಿಂದನೆಯಾಗಿರುವ ಬಗ್ಗೆ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ಗೆ ಖುದ್ದಾಗಿ ತಿಳಿದಿದ್ದರೆ, ಇಂಥ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಈ ನ್ಯಾಯಾಲಯಗಳು ಆರಂಭಿಸಬಹುದಾಗಿದೆ ಎಂದು ಕಾಯ್ದೆಯಲ್ಲಿ ಹೇಳಲಾಗಿದೆ.</p><p>ಯಾರು ಬೇಕಾದರು ವ್ಯಕ್ತಿಯೊಬ್ಬರ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಬಹುದು. ಆದರೆ, ಇದಕ್ಕೆ ಹೈಕೋರ್ಟ್ನಲ್ಲಿ ಅಡ್ವೊಕೇಟ್ ಜನರಲ್ ಒಪ್ಪಿಗೆ ನೀಡಬೇಕು. ಸುಪ್ರೀಂ ಕೋರ್ಟ್ನ ಸಂದರ್ಭದಲ್ಲಿ ಅಟಾರ್ನಿ ಜನರಲ್ ಅಥವಾ ಸಾಲಿಸಿಟರಲ್ ಜನರಲ್ ಒಪ್ಪಿಗೆ ನೀಡಬೇಕಾಗುತ್ತದೆ.</p>.ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಹೇಳಿದ್ದೇನು?.ವಕೀಲ ಕಿಶೋರ್ ವಿರುದ್ಧ ಕಾನೂನು ಕ್ರಮವಹಿಸಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯುವ ಯತ್ನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರು ವಿಚಾರಣೆಗಾಗಿ ಅಟಾರ್ನಿ ಜನರಲ್ ಅವರಿಗೆ ಪತ್ರ ಬರೆದಿದ್ದಾರೆ.</p><p>ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ವಕೀಲ ಸುಭಾಷ್ ಚಂದ್ರನ್ ಕೆ.ಆರ್. ಅವರು ನ್ಯಾಯಾಂಗ ನಿಂದನೆ ಕಾಯ್ದೆ, 1971ರ 15ನೇ ಸೆಕ್ಷನ್ ಅಡಿಯಲ್ಲಿ ಅನುಮತಿ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.</p><p>ಭಾರತದ ಸಂವಿಧಾನವನ್ನು ಸೋಲಿಸುವ, ಸುಪ್ರೀಂ ಕೋರ್ಟ್ನ ಅಧಿಕಾರ ಮತ್ತು ಘನತೆಯನ್ನು ಮುಕ್ಕಾಗಿಸುವ ಅತ್ಯಂತ ಹೀನ ಕೃತ್ಯವಿದು<br>ಸುಭಾಷ್ ಚಂದ್ರನ್ ಅವರು ಅಟಾರ್ನಿ ಜನರಲ್ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.</p><p>ನ್ಯಾಯಾಂಗ ನಿಂದನೆಯಾಗಿರುವ ಬಗ್ಗೆ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ಗೆ ಖುದ್ದಾಗಿ ತಿಳಿದಿದ್ದರೆ, ಇಂಥ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಈ ನ್ಯಾಯಾಲಯಗಳು ಆರಂಭಿಸಬಹುದಾಗಿದೆ ಎಂದು ಕಾಯ್ದೆಯಲ್ಲಿ ಹೇಳಲಾಗಿದೆ.</p><p>ಯಾರು ಬೇಕಾದರು ವ್ಯಕ್ತಿಯೊಬ್ಬರ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಬಹುದು. ಆದರೆ, ಇದಕ್ಕೆ ಹೈಕೋರ್ಟ್ನಲ್ಲಿ ಅಡ್ವೊಕೇಟ್ ಜನರಲ್ ಒಪ್ಪಿಗೆ ನೀಡಬೇಕು. ಸುಪ್ರೀಂ ಕೋರ್ಟ್ನ ಸಂದರ್ಭದಲ್ಲಿ ಅಟಾರ್ನಿ ಜನರಲ್ ಅಥವಾ ಸಾಲಿಸಿಟರಲ್ ಜನರಲ್ ಒಪ್ಪಿಗೆ ನೀಡಬೇಕಾಗುತ್ತದೆ.</p>.ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಹೇಳಿದ್ದೇನು?.ವಕೀಲ ಕಿಶೋರ್ ವಿರುದ್ಧ ಕಾನೂನು ಕ್ರಮವಹಿಸಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>