<p><strong>ನವದೆಹಲಿ</strong>: ನ್ಯಾಯಾಧೀಶರು ಮತ್ತು ಸಿಬ್ಬಂದಿಯ ಒಟ್ಟಾರೆ ಆರೋಗ್ಯವನ್ನು ಉತ್ತೇಜಿಸಲು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕಾಗಿ ಸಮಗ್ರ ಆರೈಕೆಯನ್ನು ಒದಗಿಸುವ ಅತ್ಯಾಧುನಿಕ 'ಆಯುಷ್ ಹೊಲಿಸ್ಟಿಕ್ ವೆಲ್ನೆಸ್ ಸೆಂಟರ್' ಅನ್ನು ಇಂದು (ಗುರುವಾರ) ಸುಪ್ರೀಂ ಕೋರ್ಟ್ ಆವರಣದಲ್ಲಿ ಉದ್ಘಾಟಿಸಲಾಯಿತು.</p>.<p>ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ. ವೈ ಚಂದ್ರಚೂಡ್ ಅವರು ಸಹವರ್ತಿ ನ್ಯಾಯಾಧೀಶರ ಸಮ್ಮುಖದಲ್ಲಿ ಕೇಂದ್ರವನ್ನು ಉದ್ಘಾಟಿಸಿದರು.</p><p>ಇದೇ ಕೇಂದ್ರದಲ್ಲಿ ಪರಿಣಿತ ಸೇವೆಗಳನ್ನು ಒದಗಿಸುವ ಕುರಿತಾದ ತಿಳುವಳಿಕೆ ಒಪ್ಪಂದಕ್ಕೆ ಸುಪ್ರೀಂ ಕೋರ್ಟ್ ಮತ್ತು ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ನಡುವಿನ ಒಪ್ಪಂದಕ್ಕೆ ಸಹಿ ಹಾಕಲಾಯಿತು.</p><p>‘ನನಗೆ ಇದು ತೃಪ್ತಿದಾಯಕ ಕ್ಷಣವಾಗಿದೆ. ನಾನು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡಾಗಿನಿಂದ ನಾನು ಇದಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಆಯುರ್ವೇದ ಮತ್ತು ಸಮಗ್ರ ಜೀವನಶೈಲಿಯ ಪ್ರತಿಪಾದಕ’ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಅವರು ತಮ್ಮ ಭಾಷಣದ ವೇಳೆ ಹೇಳಿದ್ದಾರೆ.</p><p>‘ನಾವು 2,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ಹೊಂದಿದ್ದೇವೆ. ನ್ಯಾಯಾಧೀಶರು ಮತ್ತು ಅವರ ಕುಟುಂಬಗಳಿಗೆ ಮಾತ್ರವಲ್ಲದೆ, ನಮ್ಮ ಸಿಬ್ಬಂದಿಗೂ ಸಮಗ್ರ ಜೀವನ ಮಾದರಿಯನ್ನು ಒದಗಿಸಬೇಕು. ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎಲ್ಲಾ ವೈದ್ಯರಿಗೆ ನಾನು ತುಂಬಾ ಕೃತಜ್ಞತನಾಗಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.</p><p>ಸಮಾರಂಭದಲ್ಲಿ ಕೇಂದ್ರ ಆಯುಷ್ ಇಲಾಖೆ ಸಚಿವ ಸರ್ಬಾನಂದ ಸೋನೋವಾಲ್ ಮತ್ತು ಆಯುಷ್ ರಾಜ್ಯ ಖಾತೆ ಸಚಿವ ಡಾ. ಮುಂಜಪರಾ ಮಹೇಂದ್ರಭಾಯಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನ್ಯಾಯಾಧೀಶರು ಮತ್ತು ಸಿಬ್ಬಂದಿಯ ಒಟ್ಟಾರೆ ಆರೋಗ್ಯವನ್ನು ಉತ್ತೇಜಿಸಲು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕಾಗಿ ಸಮಗ್ರ ಆರೈಕೆಯನ್ನು ಒದಗಿಸುವ ಅತ್ಯಾಧುನಿಕ 'ಆಯುಷ್ ಹೊಲಿಸ್ಟಿಕ್ ವೆಲ್ನೆಸ್ ಸೆಂಟರ್' ಅನ್ನು ಇಂದು (ಗುರುವಾರ) ಸುಪ್ರೀಂ ಕೋರ್ಟ್ ಆವರಣದಲ್ಲಿ ಉದ್ಘಾಟಿಸಲಾಯಿತು.</p>.<p>ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ. ವೈ ಚಂದ್ರಚೂಡ್ ಅವರು ಸಹವರ್ತಿ ನ್ಯಾಯಾಧೀಶರ ಸಮ್ಮುಖದಲ್ಲಿ ಕೇಂದ್ರವನ್ನು ಉದ್ಘಾಟಿಸಿದರು.</p><p>ಇದೇ ಕೇಂದ್ರದಲ್ಲಿ ಪರಿಣಿತ ಸೇವೆಗಳನ್ನು ಒದಗಿಸುವ ಕುರಿತಾದ ತಿಳುವಳಿಕೆ ಒಪ್ಪಂದಕ್ಕೆ ಸುಪ್ರೀಂ ಕೋರ್ಟ್ ಮತ್ತು ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ನಡುವಿನ ಒಪ್ಪಂದಕ್ಕೆ ಸಹಿ ಹಾಕಲಾಯಿತು.</p><p>‘ನನಗೆ ಇದು ತೃಪ್ತಿದಾಯಕ ಕ್ಷಣವಾಗಿದೆ. ನಾನು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡಾಗಿನಿಂದ ನಾನು ಇದಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಆಯುರ್ವೇದ ಮತ್ತು ಸಮಗ್ರ ಜೀವನಶೈಲಿಯ ಪ್ರತಿಪಾದಕ’ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಅವರು ತಮ್ಮ ಭಾಷಣದ ವೇಳೆ ಹೇಳಿದ್ದಾರೆ.</p><p>‘ನಾವು 2,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ಹೊಂದಿದ್ದೇವೆ. ನ್ಯಾಯಾಧೀಶರು ಮತ್ತು ಅವರ ಕುಟುಂಬಗಳಿಗೆ ಮಾತ್ರವಲ್ಲದೆ, ನಮ್ಮ ಸಿಬ್ಬಂದಿಗೂ ಸಮಗ್ರ ಜೀವನ ಮಾದರಿಯನ್ನು ಒದಗಿಸಬೇಕು. ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎಲ್ಲಾ ವೈದ್ಯರಿಗೆ ನಾನು ತುಂಬಾ ಕೃತಜ್ಞತನಾಗಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.</p><p>ಸಮಾರಂಭದಲ್ಲಿ ಕೇಂದ್ರ ಆಯುಷ್ ಇಲಾಖೆ ಸಚಿವ ಸರ್ಬಾನಂದ ಸೋನೋವಾಲ್ ಮತ್ತು ಆಯುಷ್ ರಾಜ್ಯ ಖಾತೆ ಸಚಿವ ಡಾ. ಮುಂಜಪರಾ ಮಹೇಂದ್ರಭಾಯಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>