<p><strong>ನವದೆಹಲಿ:</strong> ಇತ್ಯರ್ಥವಾಗದೇ ಉಳಿದಿರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಕ್ರಮ ತೆಗೆದುಕೊಳ್ಳುವುದಾಗಿ ಸುಪ್ರೀಂ ಕೋರ್ಟ್ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಇ ಹೇಳಿದ್ದಾರೆ.</p>.<p>ಭಾರತೀಯ ಯುವ ವಕೀಲರ ಸಂಘಟನೆಯು ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.</p>.<p>‘ಪ್ರಕರಣಗಳು ಇತ್ಯರ್ಥವಾಗದೇ ಉಳಿಯುವುದರಿಂದ ವ್ಯವಸ್ಥೆಯ ಕಾರ್ಯನಿರ್ವಹಣೆಗೆ ಭಾರಿ ತೊಡಕಾಗುತ್ತದೆ. ನಮ್ಮಲ್ಲಿ ಸಿವಿಲ್ ವ್ಯಾಜ್ಯಗಳು ಇತ್ಯರ್ಥವಾಗುವಷ್ಟರಲ್ಲಿ ಒಂದೆರಡು ತಲೆಮಾರುಗಳು ಕಳೆದಿರುತ್ತವೆ. ಈ ತೊಡಕುಗಳನ್ನೆಲ್ಲಾ ನಿವಾರಿಸಲು ನನ್ನಲ್ಲಿ ಹೊಸ ಯೋಚನೆಯೊಂದಿದೆ. ನೀವೆಲ್ಲರೂ ಅದಕ್ಕೆ ಸಹಕಾರ ನೀಡಿದರೆ ಗುರಿ ಸಾಧಿಸಬಹುದು’ ಎಂದು ಅವರು ಹೇಳಿದ್ದಾರೆ.</p>.<p>‘ಭಾರಿ ಜನಸಂಖ್ಯೆಯ ಭಾರತದಲ್ಲಿ ಬಡತನವೂ ದೊಡ್ಡ ಪ್ರಮಾಣದಲ್ಲಿದೆ. ಹೀಗಾಗಿ ನ್ಯಾಯವು ಎಲ್ಲರಿಗೂ ಸಿಗುತ್ತಿಲ್ಲ. ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಪ್ರಯತ್ನಿಸಿದಾಗಲೇ ನನಗೆ ಈ ಸತ್ಯ ಗೊತ್ತಾದದ್ದು. ನ್ಯಾಯಾಂಗವು ಎದುರಿಸುತ್ತಿರುವ ಎರಡನೇ ಬಹುದೊಡ್ಡ ಸಮಸ್ಯೆ ಇದು. ಇದನ್ನು ಪರಿಹರಿಸಲೂ ನನ್ನಲ್ಲಿ ಯೋಜನೆಗಳಿವೆ. ಅವನ್ನು ಶೀಘ್ರವೇ ಬಹಿರಂಗಪಡಿಸಲಿದ್ದೇನೆ’ ಎಂದು ಅವರು ಹೇಳಿದ್ದಾರೆ.</p>.<p>ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅಕ್ಟೋಬರ್ 3ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಗೊಗೊಇ ಅವರು ಅಂದೇ ಅಧಿಕಾರ ಸ್ವೀಕರಿಸಲಿದ್ದಾರೆ.</p>.<p>*<br />ಸರ್ಕಾರದ ಬೇರೆ–ಬೇರೆ ಅಂಗಗಳ ಅಧಿಕಾರವನ್ನು ನ್ಯಾಯಾಂಗವು ಕಸಿದುಕೊಂಡು, ಅವುಗಳ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡುವ ಪ್ರಶ್ನೆಯೇ ಇಲ್ಲ.<br /><em><strong>-ರಂಜನ್ ಗೊಗೊಇ, ಸುಪ್ರೀಂ ಕೋರ್ಟ್ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇತ್ಯರ್ಥವಾಗದೇ ಉಳಿದಿರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಕ್ರಮ ತೆಗೆದುಕೊಳ್ಳುವುದಾಗಿ ಸುಪ್ರೀಂ ಕೋರ್ಟ್ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಇ ಹೇಳಿದ್ದಾರೆ.</p>.<p>ಭಾರತೀಯ ಯುವ ವಕೀಲರ ಸಂಘಟನೆಯು ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.</p>.<p>‘ಪ್ರಕರಣಗಳು ಇತ್ಯರ್ಥವಾಗದೇ ಉಳಿಯುವುದರಿಂದ ವ್ಯವಸ್ಥೆಯ ಕಾರ್ಯನಿರ್ವಹಣೆಗೆ ಭಾರಿ ತೊಡಕಾಗುತ್ತದೆ. ನಮ್ಮಲ್ಲಿ ಸಿವಿಲ್ ವ್ಯಾಜ್ಯಗಳು ಇತ್ಯರ್ಥವಾಗುವಷ್ಟರಲ್ಲಿ ಒಂದೆರಡು ತಲೆಮಾರುಗಳು ಕಳೆದಿರುತ್ತವೆ. ಈ ತೊಡಕುಗಳನ್ನೆಲ್ಲಾ ನಿವಾರಿಸಲು ನನ್ನಲ್ಲಿ ಹೊಸ ಯೋಚನೆಯೊಂದಿದೆ. ನೀವೆಲ್ಲರೂ ಅದಕ್ಕೆ ಸಹಕಾರ ನೀಡಿದರೆ ಗುರಿ ಸಾಧಿಸಬಹುದು’ ಎಂದು ಅವರು ಹೇಳಿದ್ದಾರೆ.</p>.<p>‘ಭಾರಿ ಜನಸಂಖ್ಯೆಯ ಭಾರತದಲ್ಲಿ ಬಡತನವೂ ದೊಡ್ಡ ಪ್ರಮಾಣದಲ್ಲಿದೆ. ಹೀಗಾಗಿ ನ್ಯಾಯವು ಎಲ್ಲರಿಗೂ ಸಿಗುತ್ತಿಲ್ಲ. ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಪ್ರಯತ್ನಿಸಿದಾಗಲೇ ನನಗೆ ಈ ಸತ್ಯ ಗೊತ್ತಾದದ್ದು. ನ್ಯಾಯಾಂಗವು ಎದುರಿಸುತ್ತಿರುವ ಎರಡನೇ ಬಹುದೊಡ್ಡ ಸಮಸ್ಯೆ ಇದು. ಇದನ್ನು ಪರಿಹರಿಸಲೂ ನನ್ನಲ್ಲಿ ಯೋಜನೆಗಳಿವೆ. ಅವನ್ನು ಶೀಘ್ರವೇ ಬಹಿರಂಗಪಡಿಸಲಿದ್ದೇನೆ’ ಎಂದು ಅವರು ಹೇಳಿದ್ದಾರೆ.</p>.<p>ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅಕ್ಟೋಬರ್ 3ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಗೊಗೊಇ ಅವರು ಅಂದೇ ಅಧಿಕಾರ ಸ್ವೀಕರಿಸಲಿದ್ದಾರೆ.</p>.<p>*<br />ಸರ್ಕಾರದ ಬೇರೆ–ಬೇರೆ ಅಂಗಗಳ ಅಧಿಕಾರವನ್ನು ನ್ಯಾಯಾಂಗವು ಕಸಿದುಕೊಂಡು, ಅವುಗಳ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡುವ ಪ್ರಶ್ನೆಯೇ ಇಲ್ಲ.<br /><em><strong>-ರಂಜನ್ ಗೊಗೊಇ, ಸುಪ್ರೀಂ ಕೋರ್ಟ್ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>