<p><strong>ಮುಂಬೈ:</strong> ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡುವ ಕೊಲಿಜಿಯಂ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲಾಗುವುದು ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಶುಕ್ರವಾರ ಹೇಳಿದ್ದಾರೆ.</p>.<p>52ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡ ಪ್ರಯುಕ್ತ ಬಾಂಬೆ ಬಾರ್ ಅಸೋಸಿಯೇಷನ್ನಿಂದ ಬಾಂಬೆ ಹೈಕೋರ್ಟ್ನಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ. </p>.<p class="title">ಅರ್ಹತೆ ವಿಚಾರದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ. ನಾವು ಸಮಾಜದ ಎಲ್ಲ ವರ್ಗದವರ ಪ್ರಾತಿನಿಧ್ಯವನ್ನು ಹೊಂದಿದ್ದೇವೆ. ಶಿಫಾರಸುಗೊಳ್ಳುವ ಎಲ್ಲ ಹೆಸರುಗಳ ಫಾಲೋಅಪ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.</p>.<p class="title">ಸಂಜೀವ್ ಖನ್ನಾ ಅವರು ಮುಖ್ಯ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ಕೊಲಿಜಿಯಂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಪ್ರಯತ್ನಿಸಿದ್ದರು. ನಾಗಪುರದಲ್ಲಿ ಕಳೆದ ವಾರ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ, ಕೊಲಿಜಿಯಂ ವ್ಯವಸ್ಥೆಯಲ್ಲಿ ಹಸ್ತಕ್ಷೇಪದ ಕುರಿತು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ದೀಪಂಕರ್ ದತ್ತ ಅವರು ಮಾತನಾಡಿದ್ದರು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡುವ ಕೊಲಿಜಿಯಂ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲಾಗುವುದು ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಶುಕ್ರವಾರ ಹೇಳಿದ್ದಾರೆ.</p>.<p>52ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡ ಪ್ರಯುಕ್ತ ಬಾಂಬೆ ಬಾರ್ ಅಸೋಸಿಯೇಷನ್ನಿಂದ ಬಾಂಬೆ ಹೈಕೋರ್ಟ್ನಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ. </p>.<p class="title">ಅರ್ಹತೆ ವಿಚಾರದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ. ನಾವು ಸಮಾಜದ ಎಲ್ಲ ವರ್ಗದವರ ಪ್ರಾತಿನಿಧ್ಯವನ್ನು ಹೊಂದಿದ್ದೇವೆ. ಶಿಫಾರಸುಗೊಳ್ಳುವ ಎಲ್ಲ ಹೆಸರುಗಳ ಫಾಲೋಅಪ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.</p>.<p class="title">ಸಂಜೀವ್ ಖನ್ನಾ ಅವರು ಮುಖ್ಯ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ಕೊಲಿಜಿಯಂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಪ್ರಯತ್ನಿಸಿದ್ದರು. ನಾಗಪುರದಲ್ಲಿ ಕಳೆದ ವಾರ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ, ಕೊಲಿಜಿಯಂ ವ್ಯವಸ್ಥೆಯಲ್ಲಿ ಹಸ್ತಕ್ಷೇಪದ ಕುರಿತು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ದೀಪಂಕರ್ ದತ್ತ ಅವರು ಮಾತನಾಡಿದ್ದರು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>