<p><strong>ಅಮರಾವತಿ:</strong> ‘ನಿವೃತ್ತಿ ನಂತರ ಸರ್ಕಾರದ ಯಾವುದೇ ಹುದ್ದೆಯನ್ನು ಒಪ್ಪಿಕೊಳ್ಳುವುದಿಲ್ಲ. ಬದಲಿಗೆ ಸಮಾಲೋಚನೆ ಮತ್ತು ಮಧ್ಯಸ್ಥಿಕೆಯ ವೃತ್ತಿಯಲ್ಲಿ ಮುಂದುವರಿಯುವೆ’ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ.</p><p>ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಲ್ಲಿ ಸ್ಥಾಪಿಸಲಾಗಿರುವ ದಿ. ಟಿ.ಆರ್. ಗಿಲ್ಡಾ ಸ್ಮಾರಕ ಇ–ಗ್ರಂಥಾಲಯ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ನ. 23ರಂದು ನಾನು ನಿವೃತ್ತನಾಗುತ್ತಿದ್ದೇನೆ. ನಂತರದಲ್ಲಿ ಯಾವುದೇ ಸರ್ಕಾರದ ಹುದ್ದೆಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂಬುದನ್ನು ಈ ಹಿಂದೆಯೂ ಹೇಳಿದ್ದೆ’ ಎಂದಿದ್ದಾರೆ.</p><p>ಅಮರಾವತಿಯ ದಾರಾಪುರ ಗ್ರಾಮಕ್ಕೆ ಭೇಟಿ ನೀಡಿದ ಅವರು, ಬಿಹಾರ ಮತ್ತು ಕೇರಳದ ರಾಜ್ಯಪರೂ ಆಗಿದ್ದ ತಮ್ಮ ತಂದೆ ಆರ್.ಎಸ್. ಗವಾಯಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಗ್ರಾಮದಲ್ಲಿ ನಡೆದ ಸ್ಮರಣೆ ಕಾರ್ಯಕ್ರಮದಲ್ಲಿ ಅವರ ಇಡೀ ಕುಟುಂಬ ಪಾಲ್ಗೊಂಡಿತ್ತು. </p><p>ದಾದಾಸಾಹೇಬ್ ಗವಾಯಿ ಎಂದೇ ಕರೆಯಲಾಗುತ್ತಿದ್ದ ಆರ್.ಎಸ್. ಗವಾಯಿ ಅವರ ಹೆಸರನ್ನು ಗ್ರಾಮದ ದ್ವಾರಕ್ಕೆ ಇಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ‘ನಿವೃತ್ತಿ ನಂತರ ಸರ್ಕಾರದ ಯಾವುದೇ ಹುದ್ದೆಯನ್ನು ಒಪ್ಪಿಕೊಳ್ಳುವುದಿಲ್ಲ. ಬದಲಿಗೆ ಸಮಾಲೋಚನೆ ಮತ್ತು ಮಧ್ಯಸ್ಥಿಕೆಯ ವೃತ್ತಿಯಲ್ಲಿ ಮುಂದುವರಿಯುವೆ’ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ.</p><p>ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಲ್ಲಿ ಸ್ಥಾಪಿಸಲಾಗಿರುವ ದಿ. ಟಿ.ಆರ್. ಗಿಲ್ಡಾ ಸ್ಮಾರಕ ಇ–ಗ್ರಂಥಾಲಯ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ನ. 23ರಂದು ನಾನು ನಿವೃತ್ತನಾಗುತ್ತಿದ್ದೇನೆ. ನಂತರದಲ್ಲಿ ಯಾವುದೇ ಸರ್ಕಾರದ ಹುದ್ದೆಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂಬುದನ್ನು ಈ ಹಿಂದೆಯೂ ಹೇಳಿದ್ದೆ’ ಎಂದಿದ್ದಾರೆ.</p><p>ಅಮರಾವತಿಯ ದಾರಾಪುರ ಗ್ರಾಮಕ್ಕೆ ಭೇಟಿ ನೀಡಿದ ಅವರು, ಬಿಹಾರ ಮತ್ತು ಕೇರಳದ ರಾಜ್ಯಪರೂ ಆಗಿದ್ದ ತಮ್ಮ ತಂದೆ ಆರ್.ಎಸ್. ಗವಾಯಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಗ್ರಾಮದಲ್ಲಿ ನಡೆದ ಸ್ಮರಣೆ ಕಾರ್ಯಕ್ರಮದಲ್ಲಿ ಅವರ ಇಡೀ ಕುಟುಂಬ ಪಾಲ್ಗೊಂಡಿತ್ತು. </p><p>ದಾದಾಸಾಹೇಬ್ ಗವಾಯಿ ಎಂದೇ ಕರೆಯಲಾಗುತ್ತಿದ್ದ ಆರ್.ಎಸ್. ಗವಾಯಿ ಅವರ ಹೆಸರನ್ನು ಗ್ರಾಮದ ದ್ವಾರಕ್ಕೆ ಇಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>