<p><strong>ನವದೆಹಲಿ</strong>: ಮುಖ್ಯ ಚುನಾವಣಾ ಆಯುಕ್ತರು ಮತ್ತು ಆಯುಕ್ತರನ್ನು ನೇಮಕ ಮಾಡುವ ಸಮಿತಿಯಿಂದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರನ್ನು ಹೊರಗಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯಿಂದ ಸಿಜೆಐ ಸಂಜೀವ್ ಖನ್ನಾ ಅವರು ಹಿಂದೆಸರಿದಿದ್ದಾರೆ.</p>.<p>ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರೊಂದಿಗೆ ನ್ಯಾಯಪೀಠದಲ್ಲಿ ಕುಳಿತಿದ್ದ ಸಿಜೆಐ ಖನ್ನಾ ಅವರು, ‘ಈಗ ಅರ್ಜಿಗಳ ವಿಚಾರಣೆ ನಡೆಸುವುದಿಲ್ಲ’ ಎಂದು ನ್ಯಾಯಾಲಯದ ಎದುರು ಹಾಜರಿದ್ದ ವಕೀಲರಿಗೆ ತಿಳಿಸಿದರು.</p>.<p>‘ಈ ಅರ್ಜಿಗಳ ವಿಚಾರಣೆಯನ್ನು ನಾನು ನಡೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಯೋಚಿಸುತ್ತಿದ್ದೇನೆ’ ಎಂದು ಹೇಳಿದರು.</p>.<p>ಕೇಂದ್ರದ ಪರ ವಕೀಲರು, ‘ಅದನ್ನು ನೀವೇ ನಿರ್ಧರಿಸಬೇಕು’ ಎಂದು ಪ್ರತಿಕ್ರಿಯಿಸಿದರು.</p>.<p>ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರು, ‘ನ್ಯಾಯಮೂರ್ತಿ ಖನ್ನಾ ನೇತೃತ್ವದ ಈ ಹಿಂದಿನ ನ್ಯಾಯಪೀಠವು ಅರ್ಜಿ ವಿಚಾರವಾಗಿ ಮಧ್ಯಂತರ ಆದೇಶ ಹೊರಡಿಸಿತ್ತು’ ಎಂದು ಹೇಳಿದರು. </p>.<p>ನ್ಯಾ.ಖನ್ನಾ ಅವರು, ‘ಆಗಿನ ಸಂದರ್ಭವೇ ಭಿನ್ನವಾಗಿತ್ತು. ಚಳಿಗಾಲದ ವಿರಾಮದ ನಂತರ ಬೇರೊಂದು ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ’ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿ ‘ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ನಿಗದಿತ ಸಮಯದ ಒಳಗಾಗಿ ಪ್ರತಿಕ್ರಿಯೆ ನೀಡಿ’ ಎಂದು ಕೇಂದ್ರ ಸರ್ಕಾರ ಮತ್ತು ಇತರರಿಗೆ ಸೂಚಿಸಿದರು.</p>.<p>ಇದಕ್ಕೂ ಮುನ್ನ ಜನವರಿ ಮತ್ತು ಮಾರ್ಚ್ನಲ್ಲಿ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾ.ಖನ್ನಾ ಅವರು ಇಬ್ಬರು ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ನಿರಾಕರಿಸಿದ್ದರು.</p>.<p>ಕೇಂದ್ರ ಸರ್ಕಾರವು 2023ರ ಡಿಸೆಂಬರ್ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಚುನಾವಣಾ ಆಯುಕ್ತರ (ನೇಮಕ, ಷರತ್ತುಗಳು) ಕಾಯ್ದೆಗೆ ತಿದ್ದುಪಡಿ ತಂದಿತ್ತು. ಈ ಮೂಲಕ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಖ್ಯ ಚುನಾವಣಾ ಆಯುಕ್ತರು ಮತ್ತು ಆಯುಕ್ತರನ್ನು ನೇಮಕ ಮಾಡುವ ಸಮಿತಿಯಿಂದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರನ್ನು ಹೊರಗಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯಿಂದ ಸಿಜೆಐ ಸಂಜೀವ್ ಖನ್ನಾ ಅವರು ಹಿಂದೆಸರಿದಿದ್ದಾರೆ.</p>.<p>ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರೊಂದಿಗೆ ನ್ಯಾಯಪೀಠದಲ್ಲಿ ಕುಳಿತಿದ್ದ ಸಿಜೆಐ ಖನ್ನಾ ಅವರು, ‘ಈಗ ಅರ್ಜಿಗಳ ವಿಚಾರಣೆ ನಡೆಸುವುದಿಲ್ಲ’ ಎಂದು ನ್ಯಾಯಾಲಯದ ಎದುರು ಹಾಜರಿದ್ದ ವಕೀಲರಿಗೆ ತಿಳಿಸಿದರು.</p>.<p>‘ಈ ಅರ್ಜಿಗಳ ವಿಚಾರಣೆಯನ್ನು ನಾನು ನಡೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಯೋಚಿಸುತ್ತಿದ್ದೇನೆ’ ಎಂದು ಹೇಳಿದರು.</p>.<p>ಕೇಂದ್ರದ ಪರ ವಕೀಲರು, ‘ಅದನ್ನು ನೀವೇ ನಿರ್ಧರಿಸಬೇಕು’ ಎಂದು ಪ್ರತಿಕ್ರಿಯಿಸಿದರು.</p>.<p>ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರು, ‘ನ್ಯಾಯಮೂರ್ತಿ ಖನ್ನಾ ನೇತೃತ್ವದ ಈ ಹಿಂದಿನ ನ್ಯಾಯಪೀಠವು ಅರ್ಜಿ ವಿಚಾರವಾಗಿ ಮಧ್ಯಂತರ ಆದೇಶ ಹೊರಡಿಸಿತ್ತು’ ಎಂದು ಹೇಳಿದರು. </p>.<p>ನ್ಯಾ.ಖನ್ನಾ ಅವರು, ‘ಆಗಿನ ಸಂದರ್ಭವೇ ಭಿನ್ನವಾಗಿತ್ತು. ಚಳಿಗಾಲದ ವಿರಾಮದ ನಂತರ ಬೇರೊಂದು ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ’ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿ ‘ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ನಿಗದಿತ ಸಮಯದ ಒಳಗಾಗಿ ಪ್ರತಿಕ್ರಿಯೆ ನೀಡಿ’ ಎಂದು ಕೇಂದ್ರ ಸರ್ಕಾರ ಮತ್ತು ಇತರರಿಗೆ ಸೂಚಿಸಿದರು.</p>.<p>ಇದಕ್ಕೂ ಮುನ್ನ ಜನವರಿ ಮತ್ತು ಮಾರ್ಚ್ನಲ್ಲಿ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾ.ಖನ್ನಾ ಅವರು ಇಬ್ಬರು ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ನಿರಾಕರಿಸಿದ್ದರು.</p>.<p>ಕೇಂದ್ರ ಸರ್ಕಾರವು 2023ರ ಡಿಸೆಂಬರ್ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಚುನಾವಣಾ ಆಯುಕ್ತರ (ನೇಮಕ, ಷರತ್ತುಗಳು) ಕಾಯ್ದೆಗೆ ತಿದ್ದುಪಡಿ ತಂದಿತ್ತು. ಈ ಮೂಲಕ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>