<p><strong>ನವದೆಹಲಿ</strong>: ಬಡ ದಾವೆದಾರರಿಗೆ ನ್ಯಾಯ ಒದಗಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಅವರಿಗಾಗಿ ಮಧ್ಯರಾತ್ರಿಯವರೆಗೆ ನ್ಯಾಯಾಲಯದಲ್ಲಿ ಕುಳಿತುಕೊಳ್ಳಲು ಸಿದ್ಧನಿದ್ದೇನೆ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಶುಕ್ರವಾರ ಹೇಳಿದ್ದಾರೆ.</p><p>ಕೇಂದ್ರ ಮತ್ತು ಇತರರ ವಿರುದ್ಧ ತಿಲಕ್ ಸಿಂಗ್ ಡಾಂಗಿ ಎಂಬ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಾಗ ಸಿಜೆಐ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.</p><p>‘ನನ್ನ ನ್ಯಾಯಾಲಯದಲ್ಲಿ ಯಾವುದೇ ಐಷಾರಾಮಿ ಮೊಕದ್ದಮೆಗಳಿಲ್ಲ’ಎಂದು ಸಿಜೆಐ ಹೇಳಿದ್ದಾರೆ.</p><p>'ನಾನು ನಿಮಗೆ ಒಂದು ವಿಷಯವನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ಕೊನೆಯ ಸಾಲಿನಲ್ಲಿ ಕುಳಿತಿರುವ ಅತ್ಯಂತ ದುರ್ಬಲ, ಬಡ ದಾವೆದಾರರಿಗಾಗಿ ನಾನು ಇಲ್ಲಿದ್ದೇನೆ. ಅಗತ್ಯವಿದ್ದರೆ, ಅವರಿಗಾಗಿ ನಾನು ಮಧ್ಯರಾತ್ರಿಯವರೆಗೆ ಇಲ್ಲಿ ಕುಳಿತುಕೊಳ್ಳುತ್ತೇನೆ’ಎಂದು ಅವರು ಹೇಳಿದ್ದಾರೆ.</p><p>ಹರಿಯಾಣದ ಹಿಸಾರ್ ಜಿಲ್ಲೆಯ ಮಧ್ಯಮ ವರ್ಗದ ಕುಟುಂಬದಿಂದ ಬಂದ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನವೆಂಬರ್ 24ರಂದು ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸುಮಾರು 15 ತಿಂಗಳುಗಳ ಕಾಲ ಅವರು ಆ ಹುದ್ದೆಯಲ್ಲಿ ಇರುತ್ತಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಡ ದಾವೆದಾರರಿಗೆ ನ್ಯಾಯ ಒದಗಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಅವರಿಗಾಗಿ ಮಧ್ಯರಾತ್ರಿಯವರೆಗೆ ನ್ಯಾಯಾಲಯದಲ್ಲಿ ಕುಳಿತುಕೊಳ್ಳಲು ಸಿದ್ಧನಿದ್ದೇನೆ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಶುಕ್ರವಾರ ಹೇಳಿದ್ದಾರೆ.</p><p>ಕೇಂದ್ರ ಮತ್ತು ಇತರರ ವಿರುದ್ಧ ತಿಲಕ್ ಸಿಂಗ್ ಡಾಂಗಿ ಎಂಬ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಾಗ ಸಿಜೆಐ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.</p><p>‘ನನ್ನ ನ್ಯಾಯಾಲಯದಲ್ಲಿ ಯಾವುದೇ ಐಷಾರಾಮಿ ಮೊಕದ್ದಮೆಗಳಿಲ್ಲ’ಎಂದು ಸಿಜೆಐ ಹೇಳಿದ್ದಾರೆ.</p><p>'ನಾನು ನಿಮಗೆ ಒಂದು ವಿಷಯವನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ಕೊನೆಯ ಸಾಲಿನಲ್ಲಿ ಕುಳಿತಿರುವ ಅತ್ಯಂತ ದುರ್ಬಲ, ಬಡ ದಾವೆದಾರರಿಗಾಗಿ ನಾನು ಇಲ್ಲಿದ್ದೇನೆ. ಅಗತ್ಯವಿದ್ದರೆ, ಅವರಿಗಾಗಿ ನಾನು ಮಧ್ಯರಾತ್ರಿಯವರೆಗೆ ಇಲ್ಲಿ ಕುಳಿತುಕೊಳ್ಳುತ್ತೇನೆ’ಎಂದು ಅವರು ಹೇಳಿದ್ದಾರೆ.</p><p>ಹರಿಯಾಣದ ಹಿಸಾರ್ ಜಿಲ್ಲೆಯ ಮಧ್ಯಮ ವರ್ಗದ ಕುಟುಂಬದಿಂದ ಬಂದ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನವೆಂಬರ್ 24ರಂದು ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸುಮಾರು 15 ತಿಂಗಳುಗಳ ಕಾಲ ಅವರು ಆ ಹುದ್ದೆಯಲ್ಲಿ ಇರುತ್ತಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>