<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣಗಳು ಬಾಕಿ ಉಳಿಸಿಕೊಂಡಿರುವವರು ಜುಲೈ 29ರಿಂದ ಆಗಸ್ಟ್ 3ರವರೆಗೆ ನಡೆಯುವ ವಿಶೇಷ ‘ಲೋಕ್ ಅದಾಲತ್’ನಲ್ಲಿ ಭಾಗವಹಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಶುಕ್ರವಾರ ವಿಡಿಯೊ ಸಂದೇಶದ ಮೂಲಕ ಕರೆ ನೀಡಿದ್ದಾರೆ.</p><p>ಸಿಜೆಐ ಅವರ ಸಂದೇಶವನ್ನು ವೆಬ್ಸೈಟ್ನಲ್ಲಿ ಪೋಸ್ಟ್ ಮಾಡಲಾಗಿದೆ. ‘ಸುಪ್ರೀಂ ಕೋರ್ಟ್ನ 75ನೇ ವಾರ್ಷಿಕೋತ್ಸವದ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಹೊರೆಯನ್ನು ಕಡಿಮೆ ಮಾಡುವ ಉದ್ದೇಶವನ್ನು ಇದು ಹೊಂದಿದೆ. ಭಾರಿ ಸಂಖ್ಯೆಯಲ್ಲಿ ಪ್ರಕರಣಗಳು ಬಾಕಿ ಉಳಿದಿರುವುದು ನ್ಯಾಯಮೂರ್ತಿಗಳಲ್ಲಿ ಕಳವಳ ಉಂಟುಮಾಡಿದೆ’ ಎಂದು ಅವರು ಹೇಳಿದ್ದಾರೆ.</p><p>‘ಲೋಕ್ ಅದಾಲತ್ ತಂತ್ರಜ್ಞಾನ ಆಧರಿತ ಮತ್ತು ಅನೌಪಚಾರಿಕವಾಗಿ ಪರಿಹಾರ ಒದಗಿಸುವ ಕಾರ್ಯಕ್ರಮವಾಗಿರುತ್ತದೆ. ನಾಗರಿಕರು ಸ್ವಇಚ್ಛೆಯಿಂದ ಭಾಗವಹಿಸಬಹುದು. ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ನನ್ನ ಸಹೋದ್ಯೋಗಿಗಳು ಮತ್ತು ಸುಪ್ರೀಂ ಕೋರ್ಟ್ ಸಿಬ್ಬಂದಿ ಪರವಾಗಿ ಜನರಲ್ಲಿ ಮನವಿ ಮಾಡುತ್ತಿದ್ದೇನೆ’ ಎಂದು ಚಂದ್ರಚೂಡ್ ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣಗಳು ಬಾಕಿ ಉಳಿಸಿಕೊಂಡಿರುವವರು ಜುಲೈ 29ರಿಂದ ಆಗಸ್ಟ್ 3ರವರೆಗೆ ನಡೆಯುವ ವಿಶೇಷ ‘ಲೋಕ್ ಅದಾಲತ್’ನಲ್ಲಿ ಭಾಗವಹಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಶುಕ್ರವಾರ ವಿಡಿಯೊ ಸಂದೇಶದ ಮೂಲಕ ಕರೆ ನೀಡಿದ್ದಾರೆ.</p><p>ಸಿಜೆಐ ಅವರ ಸಂದೇಶವನ್ನು ವೆಬ್ಸೈಟ್ನಲ್ಲಿ ಪೋಸ್ಟ್ ಮಾಡಲಾಗಿದೆ. ‘ಸುಪ್ರೀಂ ಕೋರ್ಟ್ನ 75ನೇ ವಾರ್ಷಿಕೋತ್ಸವದ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಹೊರೆಯನ್ನು ಕಡಿಮೆ ಮಾಡುವ ಉದ್ದೇಶವನ್ನು ಇದು ಹೊಂದಿದೆ. ಭಾರಿ ಸಂಖ್ಯೆಯಲ್ಲಿ ಪ್ರಕರಣಗಳು ಬಾಕಿ ಉಳಿದಿರುವುದು ನ್ಯಾಯಮೂರ್ತಿಗಳಲ್ಲಿ ಕಳವಳ ಉಂಟುಮಾಡಿದೆ’ ಎಂದು ಅವರು ಹೇಳಿದ್ದಾರೆ.</p><p>‘ಲೋಕ್ ಅದಾಲತ್ ತಂತ್ರಜ್ಞಾನ ಆಧರಿತ ಮತ್ತು ಅನೌಪಚಾರಿಕವಾಗಿ ಪರಿಹಾರ ಒದಗಿಸುವ ಕಾರ್ಯಕ್ರಮವಾಗಿರುತ್ತದೆ. ನಾಗರಿಕರು ಸ್ವಇಚ್ಛೆಯಿಂದ ಭಾಗವಹಿಸಬಹುದು. ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ನನ್ನ ಸಹೋದ್ಯೋಗಿಗಳು ಮತ್ತು ಸುಪ್ರೀಂ ಕೋರ್ಟ್ ಸಿಬ್ಬಂದಿ ಪರವಾಗಿ ಜನರಲ್ಲಿ ಮನವಿ ಮಾಡುತ್ತಿದ್ದೇನೆ’ ಎಂದು ಚಂದ್ರಚೂಡ್ ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>