<p><strong>ಬರ್ಹಾಮ್ಪುರ /ಒಡಿಶಾ:</strong> ಒಡಿಶಾದ ಗಂಜಾಂ ಜಿಲ್ಲೆಯ ಶಾಲೆಯೊಂದರಲ್ಲಿ ತನ್ನ ಸಹಪಾಠಿಗೆ ಇರಿದ ಆರೋಪದಡಿ 9ನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜಿಲ್ಲೆಯ ರಾಮಚಂದ್ರಾಪುರದ ರಘುನಾಥ ಪ್ರೌಢಶಾಲೆಯ ತರಗತಿಯೊಂದರಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಮುಖ್ಯೋಪಾಧ್ಯಾಯ ರಘುನಾಥ ಮೊಹರಣ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು 14 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪಾತಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಜಯ್ ಕುಮಾರ್ ಸ್ವೈನ್ ತಿಳಿಸಿದ್ದಾರೆ.</p>.<p>ಇರಿತಕ್ಕೆ ಒಳಗಾದ ವಿದ್ಯಾರ್ಥಿ ಈಗ ಇಲ್ಲಿನ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಶಾಲಾ ಬ್ಯಾಗ್ನಲ್ಲಿ ಚಾಕು ಇಟ್ಟುಕೊಂಡಿದ್ದ ಬಾಲಕ, ಶಿಕ್ಷಕರು ಇಲ್ಲದಿರುವಾಗ ತರಗತಿಯಲ್ಲಿ ತನ್ನ ಸಹಪಾಠಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಅವರು ಹೇಳಿದರು.</p>.<p>‘ಘಟನೆಯು ಪ್ರೇಮ ಪ್ರಕರಣದ ಉದ್ದೇಶದಿಂದ ನಡೆದಿರಬಹುದು ಎಂದು ಆರಂಭಿಕವಾಗಿ ಊಹಿಸಲಾಗಿತ್ತು. ನಂತರದ ವಿಚಾರಣೆಯಲ್ಲಿ ಈ ಘಟನೆ ಹಠಾತ್ ಪ್ರಚೋದನೆಯಿಂದ ಸಂಭವಿಸಿದೆ’ ಎಂದು ಐಐಸಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರ್ಹಾಮ್ಪುರ /ಒಡಿಶಾ:</strong> ಒಡಿಶಾದ ಗಂಜಾಂ ಜಿಲ್ಲೆಯ ಶಾಲೆಯೊಂದರಲ್ಲಿ ತನ್ನ ಸಹಪಾಠಿಗೆ ಇರಿದ ಆರೋಪದಡಿ 9ನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜಿಲ್ಲೆಯ ರಾಮಚಂದ್ರಾಪುರದ ರಘುನಾಥ ಪ್ರೌಢಶಾಲೆಯ ತರಗತಿಯೊಂದರಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಮುಖ್ಯೋಪಾಧ್ಯಾಯ ರಘುನಾಥ ಮೊಹರಣ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು 14 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪಾತಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಜಯ್ ಕುಮಾರ್ ಸ್ವೈನ್ ತಿಳಿಸಿದ್ದಾರೆ.</p>.<p>ಇರಿತಕ್ಕೆ ಒಳಗಾದ ವಿದ್ಯಾರ್ಥಿ ಈಗ ಇಲ್ಲಿನ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಶಾಲಾ ಬ್ಯಾಗ್ನಲ್ಲಿ ಚಾಕು ಇಟ್ಟುಕೊಂಡಿದ್ದ ಬಾಲಕ, ಶಿಕ್ಷಕರು ಇಲ್ಲದಿರುವಾಗ ತರಗತಿಯಲ್ಲಿ ತನ್ನ ಸಹಪಾಠಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಅವರು ಹೇಳಿದರು.</p>.<p>‘ಘಟನೆಯು ಪ್ರೇಮ ಪ್ರಕರಣದ ಉದ್ದೇಶದಿಂದ ನಡೆದಿರಬಹುದು ಎಂದು ಆರಂಭಿಕವಾಗಿ ಊಹಿಸಲಾಗಿತ್ತು. ನಂತರದ ವಿಚಾರಣೆಯಲ್ಲಿ ಈ ಘಟನೆ ಹಠಾತ್ ಪ್ರಚೋದನೆಯಿಂದ ಸಂಭವಿಸಿದೆ’ ಎಂದು ಐಐಸಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>