ಥಾಣೆ: ಎಸ್ಎಸ್ಎಲ್ಸಿ ಲಿಖಿತ ಪರೀಕ್ಷೆಯ ಸಮಯದಲ್ಲಿ ಉತ್ತರ ಪತ್ರಿಕೆಯನ್ನು ತೋರಿಸಲು ನಿರಾಕರಿಸಿದ ಕಾರಣದಿಂದಾಗಿ ತಮ್ಮ ಸಹಪಾಠಿಯನ್ನೇ ಮೂವರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಮೂವರು ಆರೋಪಿಗಳ ವಿರುದ್ಧ ಭಿವಂಡಿಯ ಶಾಂತಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.